AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಉಪಾಹಾರ ಸೇವಿಸಿದ 43 ಮಕ್ಕಳು ಅಸ್ವಸ್ಥ

ರಾಯಚೂರಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯೊಂದರಲ್ಲಿ ಬೆಳಗ್ಗೆ ಉಪಾಹಾರ ಸೇವಿಸಿದ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿದ್ದು, ಸುಮಾರು 43 ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗ್ಗೆ ತಯಾರಿಸಿದ ತಿಂಡಿಯಲ್ಲಿ ಹಲ್ಲಿ ಬಿದ್ದಿತ್ತು ಎಂಬ ಆರೋಪಗಳೂ ಕೇಳಿಬಂದಿವೆ.

ರಾಯಚೂರು: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಉಪಾಹಾರ ಸೇವಿಸಿದ 43 ಮಕ್ಕಳು ಅಸ್ವಸ್ಥ
ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಉಪಾಹಾರ ಸೇವಿಸಿದ 43 ಮಕ್ಕಳು ಅಸ್ವಸ್ಥ
ಭೀಮೇಶ್​​ ಪೂಜಾರ್
| Edited By: |

Updated on: Jul 24, 2024 | 1:01 PM

Share

ರಾಯಚೂರು, ಜುಲೈ 24: ರಾಯಚೂರು ತಾಲ್ಲೂಕಿನ ಚಂದ್ರಬಂಡಾ ರಸ್ತೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೆಳಗ್ಗೆ ಉಪಾಹಾರ ಸೇವಿಸಿದ ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 43 ಮಕ್ಕಳನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮಕ್ಕಳಿಗೆ ಫುಡ್​ ಪಾಯ್ಸನ್ ಆಗಿದೆ ಎನ್ನಲಾಗಿದೆ.

ಬೆಳಿಗ್ಗೆ ಪುಲಾವ್ ತಿಂದಿದ್ದ ಮಕ್ಕಳ ಆರೋಗ್ಯದಲ್ಲಿ ಏರುಪೇರು ಕಾಣಿಸಿತ್ತು. ತಿಂಡಿ ತಿಂದಾದ ನಂತರ ಅವರಲ್ಲಿ ವಾಂತಿ, ಬೇಧಿ, ತಲೆ ನೋವು, ಹೊಟ್ಟೆನೋವು ಕಾಣಿಸಿಕೊಂಡಿತ್ತು. ಕೆಲವು ಮಕ್ಕಳಲ್ಲಿ ತಲೆ ತಿರುಗುವಿಕೆ ಕಾಣಿಸಿತ್ತು.

ವಸತಿ ಶಾಲೆಯಲ್ಲಿ ಪುಲಾವ್ ತಯಾರಿಸುವ ವೇಳೆ ಅದಕ್ಕೆ ಹಲ್ಲಿ ಬಿದ್ದಿತ್ತು ಎನ್ನಲಾಗುತ್ತಿದೆ.

ವಿದ್ಯಾರ್ಥಿಗಳಿಂದ ಪ್ರತಿಭಟನೆ

ಖಾಸಗಿ ಕೃಷಿ ಕಾಲೇಜುಗಳ ಸ್ಥಾಪನೆಗೆ ಅನುಮತಿ ನೀಡಲು ಸರ್ಕಾರ ಮುಂದಾಯಿತೇ ಎಂಬ ಅನುಮಾನ ಇದೀಗ ವ್ಯಕ್ತವಾಗಿದೆ. ಬೆಂಗಳೂರು ಕೃಷಿ ವಿವಿಯಿಂದ ಖಾಸಗಿ ಕೃಷಿ ಕಾಲೇಜುಗಳ ಸ್ಥಾಪನೆಗೆ ಅನುಮತಿ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಯಚೂರು ಕೃಷಿ ವಿವಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಭಯ ಹುಟ್ಟಿಸುವಂತೆ ಉಕ್ಕಿ ಹರಿಯುತ್ತಿದ್ದಾಳೆ ಕೃಷ್ಣೆ, ನದಿಪಾತ್ರ ಜನರಲ್ಲಿ ಪ್ರವಾಹದ ಭೀತಿ

ರಾಯಚೂರು ನಗರದ ಲಿಂಗಸುಗೂರು ರಸ್ತೆಯಲ್ಲಿರುವ ಕೃಷಿ ವಿಶ್ವ ವಿದ್ಯಾಲಯ ಎದುರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಈ ವರೆಗೆ ರಾಜ್ಯದಲ್ಲಿ ಖಾಸಗಿ ಕೃಷಿ ವಿಭಾಗದ ಕಾಲೇಜುಗಳಿಲ್ಲ. ಆದರೆ, ಈಗ ಮೊಲದ ಬಾರಿಗೆ ಖಾಸಗಿ ಕೃಷಿ ಕಾಲೇಜುಗಳ ಸ್ಥಾಪನೆಗೆ ಬೆಂಗಳೂರು ಕೃಷಿ ವಿವಿ ಒಪ್ಪಿಗೆ ನೀಡಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಖಾಸಗಿ ಕೃಷಿ ಕಾಲೇಜುಗಳ ಸ್ಥಾಪನೆಗೆ ನೀಡಿರುವ ಒಪ್ಪಿಗೆ ಹಿಂಪಡೆಯುವಂತೆ ಪಟ್ಟು ಹಿಡಿದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ