AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಉಪಾಹಾರ ಸೇವಿಸಿದ 43 ಮಕ್ಕಳು ಅಸ್ವಸ್ಥ

ರಾಯಚೂರಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯೊಂದರಲ್ಲಿ ಬೆಳಗ್ಗೆ ಉಪಾಹಾರ ಸೇವಿಸಿದ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿದ್ದು, ಸುಮಾರು 43 ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗ್ಗೆ ತಯಾರಿಸಿದ ತಿಂಡಿಯಲ್ಲಿ ಹಲ್ಲಿ ಬಿದ್ದಿತ್ತು ಎಂಬ ಆರೋಪಗಳೂ ಕೇಳಿಬಂದಿವೆ.

ರಾಯಚೂರು: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಉಪಾಹಾರ ಸೇವಿಸಿದ 43 ಮಕ್ಕಳು ಅಸ್ವಸ್ಥ
ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಉಪಾಹಾರ ಸೇವಿಸಿದ 43 ಮಕ್ಕಳು ಅಸ್ವಸ್ಥ
ಭೀಮೇಶ್​​ ಪೂಜಾರ್
| Edited By: |

Updated on: Jul 24, 2024 | 1:01 PM

Share

ರಾಯಚೂರು, ಜುಲೈ 24: ರಾಯಚೂರು ತಾಲ್ಲೂಕಿನ ಚಂದ್ರಬಂಡಾ ರಸ್ತೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೆಳಗ್ಗೆ ಉಪಾಹಾರ ಸೇವಿಸಿದ ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 43 ಮಕ್ಕಳನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮಕ್ಕಳಿಗೆ ಫುಡ್​ ಪಾಯ್ಸನ್ ಆಗಿದೆ ಎನ್ನಲಾಗಿದೆ.

ಬೆಳಿಗ್ಗೆ ಪುಲಾವ್ ತಿಂದಿದ್ದ ಮಕ್ಕಳ ಆರೋಗ್ಯದಲ್ಲಿ ಏರುಪೇರು ಕಾಣಿಸಿತ್ತು. ತಿಂಡಿ ತಿಂದಾದ ನಂತರ ಅವರಲ್ಲಿ ವಾಂತಿ, ಬೇಧಿ, ತಲೆ ನೋವು, ಹೊಟ್ಟೆನೋವು ಕಾಣಿಸಿಕೊಂಡಿತ್ತು. ಕೆಲವು ಮಕ್ಕಳಲ್ಲಿ ತಲೆ ತಿರುಗುವಿಕೆ ಕಾಣಿಸಿತ್ತು.

ವಸತಿ ಶಾಲೆಯಲ್ಲಿ ಪುಲಾವ್ ತಯಾರಿಸುವ ವೇಳೆ ಅದಕ್ಕೆ ಹಲ್ಲಿ ಬಿದ್ದಿತ್ತು ಎನ್ನಲಾಗುತ್ತಿದೆ.

ವಿದ್ಯಾರ್ಥಿಗಳಿಂದ ಪ್ರತಿಭಟನೆ

ಖಾಸಗಿ ಕೃಷಿ ಕಾಲೇಜುಗಳ ಸ್ಥಾಪನೆಗೆ ಅನುಮತಿ ನೀಡಲು ಸರ್ಕಾರ ಮುಂದಾಯಿತೇ ಎಂಬ ಅನುಮಾನ ಇದೀಗ ವ್ಯಕ್ತವಾಗಿದೆ. ಬೆಂಗಳೂರು ಕೃಷಿ ವಿವಿಯಿಂದ ಖಾಸಗಿ ಕೃಷಿ ಕಾಲೇಜುಗಳ ಸ್ಥಾಪನೆಗೆ ಅನುಮತಿ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಯಚೂರು ಕೃಷಿ ವಿವಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಭಯ ಹುಟ್ಟಿಸುವಂತೆ ಉಕ್ಕಿ ಹರಿಯುತ್ತಿದ್ದಾಳೆ ಕೃಷ್ಣೆ, ನದಿಪಾತ್ರ ಜನರಲ್ಲಿ ಪ್ರವಾಹದ ಭೀತಿ

ರಾಯಚೂರು ನಗರದ ಲಿಂಗಸುಗೂರು ರಸ್ತೆಯಲ್ಲಿರುವ ಕೃಷಿ ವಿಶ್ವ ವಿದ್ಯಾಲಯ ಎದುರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಈ ವರೆಗೆ ರಾಜ್ಯದಲ್ಲಿ ಖಾಸಗಿ ಕೃಷಿ ವಿಭಾಗದ ಕಾಲೇಜುಗಳಿಲ್ಲ. ಆದರೆ, ಈಗ ಮೊಲದ ಬಾರಿಗೆ ಖಾಸಗಿ ಕೃಷಿ ಕಾಲೇಜುಗಳ ಸ್ಥಾಪನೆಗೆ ಬೆಂಗಳೂರು ಕೃಷಿ ವಿವಿ ಒಪ್ಪಿಗೆ ನೀಡಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಖಾಸಗಿ ಕೃಷಿ ಕಾಲೇಜುಗಳ ಸ್ಥಾಪನೆಗೆ ನೀಡಿರುವ ಒಪ್ಪಿಗೆ ಹಿಂಪಡೆಯುವಂತೆ ಪಟ್ಟು ಹಿಡಿದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್