Sign In

By signing in or creating an account, you agree with Associated Broadcasting Company's Terms & Conditions and Privacy Policy.

Vote From Home: ರಾಯಚೂರು; ಮತ ಚಲಾಯಿಸಿ ಅರ್ಧ ಗಂಟೆಯಲ್ಲೇ ಮೃತಪಟ್ಟ 82ರ ವೃದ್ಧೆ

ರಾಜ್ಯ ವಿಧಾನಸಭೆ ಚುನಾವಣೆಗೆ ಮನೆಯಿಂದಲೇ ಮತದಾನ ಮಾಡಿದ ಕೇವಲ ಅರ್ಧ ಗಂಟೆಯಲ್ಲಿ ವೃದ್ಧೆಯೊಬ್ಬರು ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನಲ್ಲಿ ನಡೆದಿದೆ.

Vote From Home: ರಾಯಚೂರು; ಮತ ಚಲಾಯಿಸಿ ಅರ್ಧ ಗಂಟೆಯಲ್ಲೇ ಮೃತಪಟ್ಟ 82ರ ವೃದ್ಧೆ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: May 04, 2023 | 3:47 PM

ರಾಯಚೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಮನೆಯಿಂದಲೇ ಮತದಾನ (Vote From Home) ಮಾಡಿದ ಕೇವಲ ಅರ್ಧ ಗಂಟೆಯಲ್ಲಿ ವೃದ್ಧೆಯೊಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಸಿಂಧನೂರು ತಾಲ್ಲೂಕಿನಲ್ಲಿ ನಡೆದಿದೆ. ಮೃತರು ಅಲಬನೂರು ಗ್ರಾಮದ ಮಂಗಮ್ಮ (82) ಆಗಿದ್ದಾರೆ. ಅವರು ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಈ ಬಾರಿ 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಚುನಾವಣಾ ಆಯೋಗ ಅವಕಾಶ ಮಾಡಿಕೊಟ್ಟಿದ್ದು, ಅದರಂತೆ ಮೇ 3ರಂದು ಮಂಗಮ್ಮ ಅವರ ಮನೆಗೆ ಚುನಾವಣಾ ಸಿಬ್ಬಂದಿ ತೆರಳಿದ್ದರು. ಮಧ್ಯಾಹ್ನ ಸುಮಾರು 12.19ರ ವೇಳೆಗೆ ಮಂಗಮ್ಮ ಮತದಾನ ಮಾಡಿದ್ದರು. ಮಧ್ಯಾಹ್ನ 12.50ಕ್ಕೆ ಅಸುನಿಗಿದ್ದಾರೆ.

ಮಂಗಮ್ಮ ಅವರ ಮನೆಗೆ ಬುಧವಾರ ಪಿಆರ್​ಒ ದಿನೇಶ ಕೆಪಿ ಹಾಗೂ ಎಪಿಆರ್​​ಒ ಬಸಪ್ಪ ಹೆಚ್ ಹಾಗೂ ಇತರ ಸಿಬ್ಬಂದಿ ತೆರಳಿದ್ದರು. 349 ಸಂಖ್ಯೆಯ ಮತಪತ್ರವನ್ನು ಮಂಗಮ್ಮ ಅವರಿಗೆ ನೀಡಲಾಗಿತ್ತು. ಈ ವಿಚಾರವನ್ನು ಚುನಾವಣಾಧಿಕಾರಿ ಅರುಣ ಹೆಚ್ ದೃಢಪಡಿಸಿದ್ದಾರೆ.

ಮತ ಚಲಾಯಿಸಿದ್ದ ಶತಾಯುಷಿ ಅಜ್ಜನಿಗೆ ಆಯೋಗ, ಮೋದಿ ಮೆಚ್ಚುಗೆ

ಬೆಳಗಾವಿಯಲ್ಲಿ 103 ವರ್ಷದ ವೃದ್ಧ ಮಹಾದೇವ ಮಹಾಲಿಂಗ ಮಾಳಿ ಮನೆಯಿಂದಲೇ ಮತದಾನ ಮಾಡಿದ್ದಕ್ಕೆ ಅವರನ್ನು ಮಂಗಳವಾರ ಕೇಂದ್ರ ಚುನಾವಣಾ ಆಯೋಗ ಶ್ಲಾಘಿಸಿತ್ತು. ಪ್ರಧಾನಿ ನರೇಂದ್ರ ಮೋದಿ ಕೂಡ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಬುಧವಾರ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಮನೆಯಿಂದ ಮತ ಚಲಾಯಿಸಿದ 103 ವರ್ಷದ ಅಜ್ಜನಿಗೆ ಕೇಂದ್ರ ಚುನಾವಣಾ ಆಯೋಗದಿಂದ ಶಹಬ್ಬಾಶ್ ​ಗಿರಿ

ರಾಜ್ಯದಲ್ಲಿ ಇದೇ ಮೊದಲ ಬಾರಿ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟವರಿಗೆ ಹಾಗೂ ಅಂಗವಿಕಲರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಚುನಾವಣಾ ಅಯೋಗದ ಸಿಬ್ಬಂದಿ ಅವರ ಮನೆ ಬಾಗಿಲಿಗೆ ತೆರಳಿ ಬ್ಯಾಲೆಟ್ ಪೇಪರ್ ನೀಡುತ್ತಾರೆ. ಮತದಾನದ ಪ್ರಕ್ರಿಯೆಯನ್ನು ಚಿತ್ರೀಕರಣ ಮಾಡಲಾಗುತ್ತದೆ. ಮತದಾನದ ನಂತರ ಮತ ಪೆಟ್ಟಿಗೆಗಳನ್ನು ಈಗಾಗಲೇ ಮೀಸಲಿಟ್ಟಿರುವ ಸ್ಟ್ರಾಂಗ್ ರೂಮ್​​ಗೆ ಶಿಪ್ಟ್ ಮಾಡಲಾಗುತ್ತದೆ. ಈ ಎಲ್ಲಾ ಮತಗಳನ್ನೂ ಮೇ 13 ರಂದು ಮತ ಏಣಿಕೆ ದಿನ ಓಪನ್ ಮಾಡಲಾಗುತ್ತದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?