AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಮಹಿಳೆಯನ್ನ ಸಾರ್ವಜನಿಕವಾಗಿಯೇ ಮರಕ್ಕೆ ಕಟ್ಟಿ ಮನಬಂದಂತೆ ಥಳಿತ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿಯಲ್ಲಿ ಭೀಕರ ಘಟನೆ ನಡೆದಿದೆ. ಒಬ್ಬ ವ್ಯಕ್ತಿಯ ಸಾವಿಗೆ ಪರಿಚಯಸ್ಥ ಮಹಿಳೆಯನ್ನು ಹೊಣೆಗಾರ ಎಂದು ಆರೋಪಿಸಿ, ಮಹಿಳೆಯನ್ನು ಮರಕ್ಕೆ ಕಟ್ಟಿ ನಾಲ್ವರು ಹಲ್ಲೆ ಮಾಡಿದ್ದಾರೆ. ಸದ್ಯ ಪೊಲೀಸರು ಮಹಿಳೆಯನ್ನು ರಕ್ಷಿಸಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ರಾಯಚೂರು: ಮಹಿಳೆಯನ್ನ ಸಾರ್ವಜನಿಕವಾಗಿಯೇ ಮರಕ್ಕೆ ಕಟ್ಟಿ ಮನಬಂದಂತೆ ಥಳಿತ
ರಾಯಚೂರು: ಮಹಿಳೆಯನ್ನ ಸಾರ್ವಜನಿಕವಾಗಿಯೇ ಮರಕ್ಕೆ ಕಟ್ಟಿ ಮನಬಂದಂತೆ ಥಳಿತ
ಭೀಮೇಶ್​​ ಪೂಜಾರ್
| Updated By: ಗಂಗಾಧರ​ ಬ. ಸಾಬೋಜಿ|

Updated on: Jan 28, 2025 | 10:15 PM

Share

ರಾಯಚೂರು, ಜನವರಿ 28: ವ್ಯಕ್ತಿ ಸಾವಿಗೆ ಪರಿಚಯಸ್ಥ ಮಹಿಳೆಯೇ (woman) ಕಾರಣವೆಂದು ಆರೋಪಿಸಿ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿಯಲ್ಲಿ ನಡೆದಿದೆ. ಸದ್ಯ ಸ್ಥಳಕ್ಕೆ ಆಗಮಿಸಿ ಮಹಿಳೆಯನ್ನು ರಕ್ಷಿಸಿದ ಜಾಲಹಳ್ಳಿ ಠಾಣೆ ಪೊಲೀಸರು ಹಲ್ಲೆ ಆರೋಪದಡಿ ನಾಲ್ವರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.

ಬಸವರಾಜ ನಾಯಕ, ಯಂಕಮ್ಮ, ದುರ್ಗಮ್ಮ, ರೇಣುಕಾರಿಂದ ಮಹಿಳೆ ಮೇಲೆ ಹಲ್ಲೆ ಮಾಡಲಾಗಿದೆ. ಬಸವರಾಜನ ಅಣ್ಣ ರಂಗಪ್ಪ ಸಾವಿಗೆ ಮಹಿಳೆ ಕಾರಣವೆಂದು ಆರೋಪಿಸಿದ್ದಾರೆ. 20 ದಿನಗಳ ಹಿಂದೆ ಮೂರ್ಛೆ ರೋಗದಿಂದ ರಂಗಪ್ಪ ಮೃತಪಟ್ಟಿದ್ದರು.

ಇದನ್ನೂ ಓದಿ: ವಿಜಯಪುರದಲ್ಲಿ ಹಾಡಹಗಲೇ ಗುಂಡಿನ ದಾಳಿ: ಕೊಲೆ ಹಿಂದೆ ಯುವತಿಯ ಕರಿನೆರಳು?

ರಂಗಪ್ಪಗೆ ಪರಿಯವಿದ್ದ ಮಹಿಳೆ ಜೊತೆ ತೆರಳಿದ್ದಾಗ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿತ್ತು. ಅನುಮಾನದ ಮೇಲೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿ ನಿಂದಿಸಲಾಗಿದೆ. ನೂರಾರು ಜನರ ಎದುರು ಮನಬಂದಂತೆ ಬೈದು, ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.

ಬೋರ್ ವೆಲ್ ಮೋಟರ್ ಕದ್ದೊಯ್ಯುತ್ತಿದ್ದ ಕಳ್ಳನನ್ನು ಹಿಡಿದ ಗ್ರಾಮಸ್ಥರು

ಬೋರ್ ವೆಲ್ ಮೋಟರ್ ಕದ್ದೊಯ್ಯುತ್ತಿದ್ದ ಕಳ್ಳರನ್ನು ಗ್ರಾಮಸ್ಥರು ಹಿಡಿದಿದ್ದ ಘಟನೆ ಇತ್ತೀಚೆಗೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಾಕನೂರು ಗ್ರಾಮದಲ್ಲಿ ನಡೆದಿತ್ತು. ಬೈಕ್​ನಲ್ಲಿ ಬಂದ ಮೂವರು ಮೋಟರ್ ಕಳ್ಳತನ ಮಾಡಿ ಬೈಕ್​ನಲ್ಲಿ ಇಟ್ಟುಕೊಂಡು ಹೋಗುತ್ತಿರುವಾಗ ಗ್ರಾಮಸ್ಥರ ‌ಕೈಗೆ ಸಿಕ್ಕಿಬಿದಿದ್ದರು.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಯುವಕನ ಕೊಲೆ: ಮೂವರು ಆರೋಪಿಗಳ ಕಾಲಿಗೆ ಗುಂಡೇಟು

ಕಳ್ಳರ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿತ್ತು. ಒಂದೇ ಬೈಕ್​ನಲ್ಲಿ ಬಂದಿದ್ದ ಮೂವರು ಕಳ್ಳರು ಯಾರು ಇಲ್ಲದ ವೇಳೆ ನೋಡಿ ಕಳ್ಳತನಕ್ಕೆ ಸ್ಕೇಚ್ ಹಾಕಿದ್ದರು. ಬೋರ್ ವೆಲ್ ಮೋಟರ್ ಕದ್ದು ಬೈಕ್​ನಲ್ಲಿಟ್ಟು ಹೋಗುತ್ತಿದ್ದರು. ಆದರೆ ಈ ವೇಳೆ ಓರ್ವ ಕಳ್ಳನನ್ನು ಹಿಡಿದಿದ್ದ ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಹಾಕಿದ್ದರು. ಇನ್ನುಳಿದ ಇಬ್ಬರು ಬೈಕ್ ಸಮೇತ ಪರಾರಿ ಆಗಿದ್ದರು. ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ