AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಮ್ಸ್ ಹೋರಾಟದ ಕೂಗನ್ನು ಕೇಳಿಸಿಕೊಳ್ಳಿ, ತಾಳ್ಮೆ ಪರೀಕ್ಷಿಸಬೇಡಿ; ಪ್ರಧಾನಿ, ಸಿಎಂಗೆ ಮಂತ್ರಾಲಯ ಪೀಠಾಧಿಪತಿ ಎಚ್ಚರಿಕೆ

ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ 308 ದಿನಗಳಾಗಿದ್ದು ಸ್ಥಳಕ್ಕೆ ಮಂತ್ರಾಲಯ ಪೀಠಾಧಿಪತಿ ಡಾ. ಸುಬುಧೇಂದ್ರ ತೀರ್ಥರು ಗುರುವಾರ ಭೇಟಿ ನೀಡಿದರು.

ಗಣಪತಿ ಶರ್ಮಾ
|

Updated on: Mar 16, 2023 | 10:29 PM

Share

ರಾಯಚೂರು: ರಾಯಚೂರಿನಲ್ಲಿ (Raichur) ಏಮ್ಸ್ (AIIMS) ಸ್ಥಾಪನೆಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ 308 ದಿನಗಳಾಗಿದ್ದು ಸ್ಥಳಕ್ಕೆ ಮಂತ್ರಾಲಯ ಪೀಠಾಧಿಪತಿ ಡಾ. ಸುಬುಧೇಂದ್ರ ತೀರ್ಥರು (Subudhendra Teertha Swamiji) ಗುರುವಾರ ಭೇಟಿ ನೀಡಿದರು. ಹೋರಾಟಕ್ಕೆ ಬೆಂಬಲ ಸೂಚಿಸಿ ಮಾತನಾಡಿದ ಅವರು, ಏಮ್ಸ್​ ಸ್ಥಾಪನೆಗಾಗಿ ರಾಜ್ಯ, ಕೇಂದ್ರ ಸರ್ಕಾರಕ್ಕೆ ಸಂದೇಶ ರವಾನಿಸಿದ್ದೇವೆ. ರಾಯಚೂರು ಚಿನ್ನದ ನಾಡು, ಭತ್ತದ ಕಣಜ, 2 ನದಿಗಳ ಬೀಡಾಗಿದೆ. ಈಗಾಗಲೇ ರಾಯಚೂರು ಜಿಲ್ಲೆ ಐಐಟಿಯಿಂದ ವಂಚಿತಗೊಂಡಿದೆ. ನಮ್ಮ ಸಹನೆ ಪರೀಕ್ಷಿಸುವುದು ಬೇಡ‌‌, ಸಹನೆ ಮೀರಿದರೆ ಕಷ್ಟವಾಗಲಿದೆ ಎಂದು ಸುಬುಧೇಂದ್ರ ತೀರ್ಥರು ಎಚ್ಚರಿಕೆ ನೀಡಿದ್ದಾರೆ.

ಐಐಟಿ ಸಂಸ್ಥೆ ರಾಯಚೂರಿಗೆ ಮಂಜೂರಾಗಬೇಕಿತ್ತು. ಆದರೆ, ಅದರಿಂದ ವಂಚಿತರಾಗಿದ್ದೇವೆ. ಹಸಿದವರಿಗೆ ಅನ್ನ ಕೊಟ್ಟರೆ ಅದು ಜೀರ್ಣವಾಗುತ್ತದೆ. ಹಸಿಯದೇ ಇದ್ದವರಿಗೆ ಅನ್ನ ಕೊಟ್ಟರೆ ಅದು ಅಜೀರ್ಣವಾಗುತ್ತದೆ. ನಮಗೆ ಏಮ್ಸ್ ಬೇಕು. ಏಮ್ಸ್ ಮಾದರಿ ಅನ್ನೋದು ಅಸಂಬದ್ಧ. ಹೀಗಾಗಿ ಏಮ್ಸ್​ಗಾಗಿ ಪ್ರಧಾನಿ, ಮುಖ್ಯಮಂತ್ರಿಗಳಿಗೆ ಈ ವೇದಿಕೆ ಮೂಲಕ ಕೇಳುತ್ತಿದ್ದೇನೆ. ನಿಮ್ಮ ಕಿವಿಗೆ ಬಿದ್ದಿರುವ ಏಮ್ಸ್ ಹೋರಾಟದ ಕೂಗನ್ನು ಕೇಳಿಸಿಕೊಳ್ಳಿ ಎಂದು ಅವರು ಹೇಳಿದರು.

ನಿರಾಶರಾಗುವುದು ಬೇಡ. ನ್ಯಾಯದ ಪರ ನಮ್ಮ ಬೇಡಿಕೆ ಇದೆ.. ಏಮ್ಸ್​ಗಾಗಿ ಮುಖ್ಯಮಂತ್ರಿಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಸಂದೇಶ ರವಾನಿಸಿದ್ದೇವೆ ಎಂದು ಸುಬುಧೇಂದ್ರ ತೀರ್ಥರು ಹೋರಾಟಗಾರರಿಗೆ ಧೈರ್ಯ ತುಂಬಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!