AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಮ್ಸ್ ಹೋರಾಟದ ಕೂಗನ್ನು ಕೇಳಿಸಿಕೊಳ್ಳಿ, ತಾಳ್ಮೆ ಪರೀಕ್ಷಿಸಬೇಡಿ; ಪ್ರಧಾನಿ, ಸಿಎಂಗೆ ಮಂತ್ರಾಲಯ ಪೀಠಾಧಿಪತಿ ಎಚ್ಚರಿಕೆ

ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ 308 ದಿನಗಳಾಗಿದ್ದು ಸ್ಥಳಕ್ಕೆ ಮಂತ್ರಾಲಯ ಪೀಠಾಧಿಪತಿ ಡಾ. ಸುಬುಧೇಂದ್ರ ತೀರ್ಥರು ಗುರುವಾರ ಭೇಟಿ ನೀಡಿದರು.

ಗಣಪತಿ ಶರ್ಮಾ
|

Updated on: Mar 16, 2023 | 10:29 PM

Share

ರಾಯಚೂರು: ರಾಯಚೂರಿನಲ್ಲಿ (Raichur) ಏಮ್ಸ್ (AIIMS) ಸ್ಥಾಪನೆಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ 308 ದಿನಗಳಾಗಿದ್ದು ಸ್ಥಳಕ್ಕೆ ಮಂತ್ರಾಲಯ ಪೀಠಾಧಿಪತಿ ಡಾ. ಸುಬುಧೇಂದ್ರ ತೀರ್ಥರು (Subudhendra Teertha Swamiji) ಗುರುವಾರ ಭೇಟಿ ನೀಡಿದರು. ಹೋರಾಟಕ್ಕೆ ಬೆಂಬಲ ಸೂಚಿಸಿ ಮಾತನಾಡಿದ ಅವರು, ಏಮ್ಸ್​ ಸ್ಥಾಪನೆಗಾಗಿ ರಾಜ್ಯ, ಕೇಂದ್ರ ಸರ್ಕಾರಕ್ಕೆ ಸಂದೇಶ ರವಾನಿಸಿದ್ದೇವೆ. ರಾಯಚೂರು ಚಿನ್ನದ ನಾಡು, ಭತ್ತದ ಕಣಜ, 2 ನದಿಗಳ ಬೀಡಾಗಿದೆ. ಈಗಾಗಲೇ ರಾಯಚೂರು ಜಿಲ್ಲೆ ಐಐಟಿಯಿಂದ ವಂಚಿತಗೊಂಡಿದೆ. ನಮ್ಮ ಸಹನೆ ಪರೀಕ್ಷಿಸುವುದು ಬೇಡ‌‌, ಸಹನೆ ಮೀರಿದರೆ ಕಷ್ಟವಾಗಲಿದೆ ಎಂದು ಸುಬುಧೇಂದ್ರ ತೀರ್ಥರು ಎಚ್ಚರಿಕೆ ನೀಡಿದ್ದಾರೆ.

ಐಐಟಿ ಸಂಸ್ಥೆ ರಾಯಚೂರಿಗೆ ಮಂಜೂರಾಗಬೇಕಿತ್ತು. ಆದರೆ, ಅದರಿಂದ ವಂಚಿತರಾಗಿದ್ದೇವೆ. ಹಸಿದವರಿಗೆ ಅನ್ನ ಕೊಟ್ಟರೆ ಅದು ಜೀರ್ಣವಾಗುತ್ತದೆ. ಹಸಿಯದೇ ಇದ್ದವರಿಗೆ ಅನ್ನ ಕೊಟ್ಟರೆ ಅದು ಅಜೀರ್ಣವಾಗುತ್ತದೆ. ನಮಗೆ ಏಮ್ಸ್ ಬೇಕು. ಏಮ್ಸ್ ಮಾದರಿ ಅನ್ನೋದು ಅಸಂಬದ್ಧ. ಹೀಗಾಗಿ ಏಮ್ಸ್​ಗಾಗಿ ಪ್ರಧಾನಿ, ಮುಖ್ಯಮಂತ್ರಿಗಳಿಗೆ ಈ ವೇದಿಕೆ ಮೂಲಕ ಕೇಳುತ್ತಿದ್ದೇನೆ. ನಿಮ್ಮ ಕಿವಿಗೆ ಬಿದ್ದಿರುವ ಏಮ್ಸ್ ಹೋರಾಟದ ಕೂಗನ್ನು ಕೇಳಿಸಿಕೊಳ್ಳಿ ಎಂದು ಅವರು ಹೇಳಿದರು.

ನಿರಾಶರಾಗುವುದು ಬೇಡ. ನ್ಯಾಯದ ಪರ ನಮ್ಮ ಬೇಡಿಕೆ ಇದೆ.. ಏಮ್ಸ್​ಗಾಗಿ ಮುಖ್ಯಮಂತ್ರಿಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಸಂದೇಶ ರವಾನಿಸಿದ್ದೇವೆ ಎಂದು ಸುಬುಧೇಂದ್ರ ತೀರ್ಥರು ಹೋರಾಟಗಾರರಿಗೆ ಧೈರ್ಯ ತುಂಬಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ