AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಸಿಎಂ ಚಾಲನೆ ನೀಡಿದ್ದ ಅಂಬಾದೇವಿ ಜಾತ್ರೆಯಲ್ಲಿ ಗಾಂಜಾ ಘಾಟು; ಇಬ್ಬರು ಅರೆಸ್ಟ್

ರಾಯಚೂರು ಅಂಬಾದೇವಿ ಜಾತ್ರಾ ಮಹೋತ್ಸವದಲ್ಲಿ ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿ9 ವರದಿ ಬೆನ್ನಲ್ಲೇ ಇಬ್ಬರು ಗಾಂಜಾ ಮಾರಾಟಗಾರರನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತರಿಂದ 1 ಲಕ್ಷ 10 ಸಾವಿರ ರೂ ಮೌಲ್ಯದ 1.1 ಕೆಜಿ ಗಾಂಜಾವನ್ನ ಜಪ್ತಿ ಮಾಡಲಾಗಿದೆ.

ರಾಯಚೂರು: ಸಿಎಂ ಚಾಲನೆ ನೀಡಿದ್ದ ಅಂಬಾದೇವಿ ಜಾತ್ರೆಯಲ್ಲಿ ಗಾಂಜಾ ಘಾಟು; ಇಬ್ಬರು ಅರೆಸ್ಟ್
ಬಂಧಿತರು
ಭೀಮೇಶ್​​ ಪೂಜಾರ್
| Edited By: |

Updated on:Jan 05, 2026 | 6:09 PM

Share

ರಾಯಚೂರು, ಜನವರಿ 05: ಗಡಿ ಜಿಲ್ಲೆ ರಾಯಚೂರಿನ (Raichur) ಅಂಬಾದೇವಿ ಜಾತ್ರಾ ಮಹೋತ್ಸವದಲ್ಲಿ ಸಾಧುಗಳ ಗಾಂಜಾ ಘಾಟಿನ ಬಗ್ಗೆ ಟಿವಿ9 ವರದಿ ಮಾಡಿತ್ತು. ಈ ಬೆನ್ನಲ್ಲೇ ಅಲರ್ಟ್ ಆದ ಪೊಲೀಸರು ಇಬ್ಬರು ಗಾಂಜಾ ಮಾರಾಟಗಾರರನ್ನು ಅರೆಸ್ಟ್ (Arrest) ​ ಮಾಡಿದ್ದಾರೆ. ಅಜಂ ಸೊಯೆಲ್ ಮತ್ತು ಮಹ್ಮದ್ ಶಾಬಾಜ್ ಬಂಧಿತ ಆರೋಪಿಗಳು. ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

400 ವರ್ಷಗಳ ಇತಿಹಾಸವಿರುವ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಸೋಮಲಾಪುರ ಗ್ರಾಮದಲ್ಲಿರುವ ಅಂಬಾದೇವಿ ಜಾತ್ರಾ ಮಹೋತ್ಸವದಲ್ಲಿ ಗಾಂಜಾ ಘಾಟಿನ ಬಗ್ಗೆ ಆರೋಪಗಳು ಕೇಳಿ ಬಂದಿದ್ದವು. ಈ ಒಂದು ಜಾತ್ರಾ ಮಹೋತ್ಸವಕ್ಕೆ ದೇಶದ ಮೂಲೆಮೂಲೆಗಳಿಂದ ಸಾಧು-ಸಂತರು ಆಗಮಿಸುತ್ತಾರೆ.

ಇದನ್ನೂ ಓದಿ: ನಶೆರಾಣಿ ಆಗಲು ಹೋಗಿ ಖಾಕಿ ಕೈಲಿ ತಗಲಾಕಿಕೊಂಡ ಮಹಿಳೆ: ಗ್ಯಾಂಗ್​​ ಅಂದರ್​​

ದೇಶದಲ್ಲಿರುವ 18 ಶಕ್ತಿ ಪೀಠಗಳಲ್ಲಿ ಈ ದೇವಾಲಯ ಕೂಡ ಒಂದು. ಹೀಗಾಗಿ ಅಂಬಾದೇವಿ ದರ್ಶನ ಪಡೆಯುತ್ತಾರೆ. ಆದರೆ ಇಲ್ಲಿ ಸಾಧುಗಳಿಗೆ ಕೆಲ ಭಕ್ತರು ನೈವೇದ್ಯ ನೀಡುವ ಪದ್ದತಿ ಇದೆಯಂತೆ. ಹೀಗಾಗಿ ಭಕ್ತರು ಕೊಡುವ ಗಾಂಜಾದಿಂದ ಸಾಧುಗಳು ಕಿಕ್ಕೇರಿಸಿಕೊಳ್ಳುತ್ತಾರೆ. ಈ ಬಗ್ಗೆ ಟಿವಿ9 ವಿಸ್ತೃತ ವರದಿ ಬೆನ್ನಲ್ಲೇ ಅಂಬಾದೇವಿ ದೇವಸ್ಥಾನದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಂಧನೂರು ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ.

ಓರ್ವ ವೆಲ್ಡಿಂಗ್ ಕೆಲಸಗಾರ, ಮತ್ತೊಬ್ಬ ಮೆಕ್ಯಾನಿಕ್

ಬಂಧಿತ ಇಬ್ಬರು ಆರೋಪಿಗಳು ವಿಯಜನಗರ ಜಿಲ್ಲೆಯ ಹೊಸಪೇಟೆದವರು. ಆರೋಪಿಗಳ ಪೈಕಿ ಅಜಂ ಸೊಯೆಲ್ ವೆಲ್ಡಿಂಗ್ ಕೆಲಸ ಮಾಡುತ್ತಿದ್ದರೆ, ಆರೋಪಿ ಮಹ್ಮದ್ ಶಾಬಾಜ್ ಲಾರಿ ಮೆಕ್ಯಾನಿಕ್. ಆರೋಪಿಗಳಿಬ್ಬರು ಅಂಬಾದೇವಿ ದೇವಸ್ಥಾನದ ಹಳೆ ಯಾತ್ರಾ ನಿವಾಸದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಬಂದಿತ್ತು.

ಮಾಹಿತಿ ಆಧರಿಸಿ ದಾಳಿ ನಡೆಸಿದಾಗ ಇಬ್ಬರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಬಂಧಿತರಿಂದ 1 ಲಕ್ಷ 10 ಸಾವಿರ ರೂ ಮೌಲ್ಯದ 1.1 ಕೆಜಿ ಗಾಂಜಾವನ್ನ ಜಪ್ತಿ ಮಾಡಲಾಗಿದೆ. ಅಲ್ಲದೇ ಗಾಂಜಾವನ್ನ ಕಟ್ಟಿದ್ದ ಕಾಗದದ ಪೊಟ್ಟಣಗಳನ್ನು ಸೀಜ್ ಮಾಡಲಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿಗೆ ಅವ್ಯಾಹತವಾಗಿ ಬರುತ್ತಿದೆ ಗಾಂಜಾ: ಡ್ರಗ್ ಪೆಡ್ಲರ್​ಗಳಿಗೆ ವರವಾಗಿ ಪರಿಣಮಿಸಿದ ತಪಾಸಣೆರಹಿತ ರೈಲು ಪ್ರಯಾಣ!

ಸಾಧುಗಳು ಗಾಂಜಾ ಸೇದುವ ಪದ್ದತಿ ಈಗಾಗಲೇ ಕಾಲಕ್ರಮೇಣ ಕಡಿಮೆಯಾಗುತ್ತಿದೆ ಎನ್ನಲಾಗುತ್ತಿದೆ. ಅಲ್ಲದೇ ಕಾನೂನಿನ ಬಿಗಿ ಹಿಡಿತ ಹಿನ್ನೆಲೆ ಬಾರಿ ಪ್ರಮಾಣದಲ್ಲಿ ಈ ಪದ್ದತಿ ನಿಯಂತ್ರಣಕ್ಕೆ ಬಂದಿದೆ. ಆದರೆ ಜಾತ್ರೆಗೆ ಪಕ್ಕದ ತೆಲಂಗಾಣ, ಆಂಧ್ರ, ಮಹಾರಾಷ್ಟ್ರ ಹಾಗೂ ತಮಿಳುನಾಡಿನಿಂದಲೂ ಲಕ್ಷಾಂತರ ಜನ ಭಕ್ತರು ಬರುತ್ತಾರೆ. ಹೀಗಾಗಿ ಅಲ್ಲಲ್ಲಿ ಗಾಂಜಾ ಘಾಟು ಸದ್ದಿಲ್ಲದೇ ಹೊಗೆಯಾಡುತ್ತಲೇ ಇದ್ದು, ಈ ಬಗ್ಗೆ ಪೊಲೀಸರು ಹದ್ದಿಣ ಕಣ್ಣಿಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:06 pm, Mon, 5 January 26

Follow Us
Bhemesh Poojar
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?