AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಂತ ಮಗನಿಂದಲೇ ನಿವೃತ್ತ ಎಎಸ್ಐ ಹತ್ಯೆ, ಕಾರಣ ಏನು ಗೊತ್ತಾ?

ನಿವೃತ್ತ ಎಎಸ್ ಐ ಬರ್ಬರ ಹತ್ಯೆ ಪ್ರಕರಣದ ತನಿಖೆಯ ವೇಳೆ ಹಂತಕನ ಕರಾಳ ಮುಖ ಬಯಲಾಗಿದೆ. ಸ್ವಂತ ಮಗನಿಂದಲೇ ನಿವೃತ್ತ ಎಎಸ್ ಐ ಹತ್ಯೆಯಾಗಿದೆ. ಮದುವೆ ಮಾಡಿಲ್ಲ ಅನ್ನೊ ಕಾರಣಕ್ಕೆ ತಂದೆಯನ್ನೇ ಹತ್ಯೆಗೈದಿರುವ ಆರೋಪ ಮಗನ ಮೇಲೆ ಕೇಳಿ ಬಂದಿದೆ.

ಸ್ವಂತ ಮಗನಿಂದಲೇ ನಿವೃತ್ತ ಎಎಸ್ಐ ಹತ್ಯೆ, ಕಾರಣ ಏನು ಗೊತ್ತಾ?
ಸ್ವಂತ ಮಗನಿಂದಲೇ ನಿವೃತ್ತ ಎಎಸ್ಐ ಹತ್ಯೆ, ಕಾರಣ ಏನು ಗೊತ್ತಾ?
TV9 Web
| Edited By: ಸಾಧು ಶ್ರೀನಾಥ್​|

Updated on:Feb 11, 2022 | 9:57 AM

Share

ರಾಯಚೂರು: ನಿವೃತ್ತ ಎಎಸ್ ಐ ಬರ್ಬರ ಹತ್ಯೆ ಪ್ರಕರಣದ ತನಿಖೆಯ ವೇಳೆ ಹಂತಕನ ಕರಾಳ ಮುಖ ಬಯಲಾಗಿದೆ. ಸ್ವಂತ ಮಗನಿಂದಲೇ ನಿವೃತ್ತ ಎಎಸ್ ಐ ಹತ್ಯೆಯಾಗಿದೆ. ಮದುವೆ ಮಾಡಿಲ್ಲ ಅನ್ನೊ ಕಾರಣಕ್ಕೆ ತಂದೆಯನ್ನೇ ಹತ್ಯೆಗೈದಿರುವ ಆರೋಪ ಮಗನ ಮೇಲೆ ಕೇಳಿ ಬಂದಿದೆ. ರಾಯಚೂರಿನ ಮಾರ್ಕೆಟ್ ಯಾರ್ಡ್ ಪೊಲೀಸರು ಇದೀಗ ಆರೋಪಿ ಮಗನನ್ನು ಬಂಧಿಸಿದ್ದಾರೆ. ಜಗದೀಶ್ (38) ಬಂಧಿತ ಆರೋಪಿ.

ಇದೇ ಫೆಬ್ರವರಿ 9 ರ ರಾತ್ರಿ 9 ಗಂಟೆಗೆ ಕೊಲೆ ನಡೆದಿತ್ತು. ಬಸವರಾಜಪ್ಪ(75) ಹತ್ಯೆಯಾಗಿದ್ದ ನಿವೃತ್ತ ಪೊಲೀಸ್​ ಅಧಿಕಾರಿ. ರಾಯಚೂರು ನಗರದ ಗೋಶಾಲೆ ಹಿಂಭಾಗ ಪಾತಕ ಘಟನೆ ನಡೆದಿತ್ತು. ನಿವೃತ್ತ ಎಎಸ್ ಐ ಬಸವರಾಜಪ್ಪಗೆ ಐದು ಜನ ಮಕ್ಕಳು ಇದ್ದಾರೆ. ಮೂರು ಹೆಣ್ಮಕ್ಕಳಿಗೆ ಮದುವೆ ಮಾಡಿಸಿದ್ದು, ಹಿರಿಯ ಮಗ ಶಿವರಾಜ್ (40) ಹಾಗೂ ಕಿರಿಯ ಮಗ ಜಗದೀಶ್ (37) ಇಬ್ಬರಿಗೂ ಮದುವೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಕಿರಿ ಮಗ ಜಗದೀಶ್ ಮಾನಸಿಕವಾಗಿ ಕುಂದಿದ್ದ. ಅದರಿಂದ ಮದ್ಯ ವ್ಯಸನಿಯೂ ಆಗಿಬಿಟ್ಟಿದ್ದ ಜಗದೀಶ್.

ಮದುವೆ ಮಾಡಿಸು ಅಂತಾ ಕಿರಿಯ ಪುತ್ರನ ಕಿರಿಕಿರಿ: ಕಿರಿಯ ಪುತ್ರ ಜಗದೀಶ ತನಗೆ ಮದುವೆ ಮಾಡಿಸುವಂತೆ ಅಪ್ಪನನ್ನು ಒತ್ತಾಯ ಮಾಡುತ್ತಿದ್ದ. ಇದೇ ಕಾರಣಕ್ಕೆ ಎಎಸ್ ಐ ಬಸವರಾಜಪ್ಪ ಹಾಗೂ ಕುಟುಂಬಸ್ಥರು ಊರು ಬಿಟ್ಟಿದ್ದರು. ಇದೇ ಫೆಬ್ರವರಿ 9ಕ್ಕೆ ಚಿಕಿತ್ಸೆಗೆಂದು ಬಸವರಾಜಪ್ಪ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಬಂದಿದ್ದರು. ಈ ವೇಳೆ ಆರೋಪಿ ಮಗ ಜಗದೀಶ್ ಫೋನ್ ಮಾಡಿ ಅಪ್ಪನನ್ನು ಕರೆಸಿಕೊಂಡಿದ್ದ.

ಆಗ ಮತ್ತೆ ಮದುವೆ ವರಾತ ತೆಗೆದು ತನಗೆ ಮದುವೆ ಮಾಡಿಸುವಂತೆ ತಾಕೀತು ಮಾಡಿದ್ದ. ಬಳಿಕ ಕುಡಿಯಲು ಹಣವನ್ನಾದರೂ ಕೊಡು ಅಂತಾನೂ ಗಲಾಟೆ ಮಾಡಿದ್ದಾನೆ. ಆ ವೇಳೆ ಅಪ್ಪ-ಮಗನ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಕಿರಿಯ ಮಗ ಜಗದೀಶ್ ಸಿಮೆಂಟ್ ಇಟ್ಟಿಗೆಯಿಂದ ತಂದೆ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read: Sidlaghatta: ಶಿಡ್ಲಘಟ್ಟದ ಇತಿಹಾಸದಲ್ಲಿಯೇ ದಂಪತಿಯ ಭೀಕರ ಕೊಲೆ, ಗವಾಕ್ಷಿಯಿಂದ ಇಳಿದು ಕುಕೃತ್ಯ, ನಗನಾಣ್ಯ ದರೋಡೆ

Also Read: ಬಿಆರ್​ಟಿಎಸ್ ಬಸ್​ನಲ್ಲಿ ಮರೆತು ಹೋಗಿದ್ದ 3ಲಕ್ಷದ ಚಿನ್ನಾಭರಣ ವಾಪಸ್ ಕೊಟ್ಟ ಸಿಬ್ಬಂದಿ, ಕಾರ್ಯವೈಖರಿಗೆ ಮೆಚ್ಚುಗೆ

Published On - 9:48 am, Fri, 11 February 22

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು