AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಂತ ಮಗನಿಂದಲೇ ನಿವೃತ್ತ ಎಎಸ್ಐ ಹತ್ಯೆ, ಕಾರಣ ಏನು ಗೊತ್ತಾ?

ನಿವೃತ್ತ ಎಎಸ್ ಐ ಬರ್ಬರ ಹತ್ಯೆ ಪ್ರಕರಣದ ತನಿಖೆಯ ವೇಳೆ ಹಂತಕನ ಕರಾಳ ಮುಖ ಬಯಲಾಗಿದೆ. ಸ್ವಂತ ಮಗನಿಂದಲೇ ನಿವೃತ್ತ ಎಎಸ್ ಐ ಹತ್ಯೆಯಾಗಿದೆ. ಮದುವೆ ಮಾಡಿಲ್ಲ ಅನ್ನೊ ಕಾರಣಕ್ಕೆ ತಂದೆಯನ್ನೇ ಹತ್ಯೆಗೈದಿರುವ ಆರೋಪ ಮಗನ ಮೇಲೆ ಕೇಳಿ ಬಂದಿದೆ.

ಸ್ವಂತ ಮಗನಿಂದಲೇ ನಿವೃತ್ತ ಎಎಸ್ಐ ಹತ್ಯೆ, ಕಾರಣ ಏನು ಗೊತ್ತಾ?
ಸ್ವಂತ ಮಗನಿಂದಲೇ ನಿವೃತ್ತ ಎಎಸ್ಐ ಹತ್ಯೆ, ಕಾರಣ ಏನು ಗೊತ್ತಾ?
TV9 Web
| Edited By: |

Updated on:Feb 11, 2022 | 9:57 AM

Share

ರಾಯಚೂರು: ನಿವೃತ್ತ ಎಎಸ್ ಐ ಬರ್ಬರ ಹತ್ಯೆ ಪ್ರಕರಣದ ತನಿಖೆಯ ವೇಳೆ ಹಂತಕನ ಕರಾಳ ಮುಖ ಬಯಲಾಗಿದೆ. ಸ್ವಂತ ಮಗನಿಂದಲೇ ನಿವೃತ್ತ ಎಎಸ್ ಐ ಹತ್ಯೆಯಾಗಿದೆ. ಮದುವೆ ಮಾಡಿಲ್ಲ ಅನ್ನೊ ಕಾರಣಕ್ಕೆ ತಂದೆಯನ್ನೇ ಹತ್ಯೆಗೈದಿರುವ ಆರೋಪ ಮಗನ ಮೇಲೆ ಕೇಳಿ ಬಂದಿದೆ. ರಾಯಚೂರಿನ ಮಾರ್ಕೆಟ್ ಯಾರ್ಡ್ ಪೊಲೀಸರು ಇದೀಗ ಆರೋಪಿ ಮಗನನ್ನು ಬಂಧಿಸಿದ್ದಾರೆ. ಜಗದೀಶ್ (38) ಬಂಧಿತ ಆರೋಪಿ.

ಇದೇ ಫೆಬ್ರವರಿ 9 ರ ರಾತ್ರಿ 9 ಗಂಟೆಗೆ ಕೊಲೆ ನಡೆದಿತ್ತು. ಬಸವರಾಜಪ್ಪ(75) ಹತ್ಯೆಯಾಗಿದ್ದ ನಿವೃತ್ತ ಪೊಲೀಸ್​ ಅಧಿಕಾರಿ. ರಾಯಚೂರು ನಗರದ ಗೋಶಾಲೆ ಹಿಂಭಾಗ ಪಾತಕ ಘಟನೆ ನಡೆದಿತ್ತು. ನಿವೃತ್ತ ಎಎಸ್ ಐ ಬಸವರಾಜಪ್ಪಗೆ ಐದು ಜನ ಮಕ್ಕಳು ಇದ್ದಾರೆ. ಮೂರು ಹೆಣ್ಮಕ್ಕಳಿಗೆ ಮದುವೆ ಮಾಡಿಸಿದ್ದು, ಹಿರಿಯ ಮಗ ಶಿವರಾಜ್ (40) ಹಾಗೂ ಕಿರಿಯ ಮಗ ಜಗದೀಶ್ (37) ಇಬ್ಬರಿಗೂ ಮದುವೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಕಿರಿ ಮಗ ಜಗದೀಶ್ ಮಾನಸಿಕವಾಗಿ ಕುಂದಿದ್ದ. ಅದರಿಂದ ಮದ್ಯ ವ್ಯಸನಿಯೂ ಆಗಿಬಿಟ್ಟಿದ್ದ ಜಗದೀಶ್.

ಮದುವೆ ಮಾಡಿಸು ಅಂತಾ ಕಿರಿಯ ಪುತ್ರನ ಕಿರಿಕಿರಿ: ಕಿರಿಯ ಪುತ್ರ ಜಗದೀಶ ತನಗೆ ಮದುವೆ ಮಾಡಿಸುವಂತೆ ಅಪ್ಪನನ್ನು ಒತ್ತಾಯ ಮಾಡುತ್ತಿದ್ದ. ಇದೇ ಕಾರಣಕ್ಕೆ ಎಎಸ್ ಐ ಬಸವರಾಜಪ್ಪ ಹಾಗೂ ಕುಟುಂಬಸ್ಥರು ಊರು ಬಿಟ್ಟಿದ್ದರು. ಇದೇ ಫೆಬ್ರವರಿ 9ಕ್ಕೆ ಚಿಕಿತ್ಸೆಗೆಂದು ಬಸವರಾಜಪ್ಪ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಬಂದಿದ್ದರು. ಈ ವೇಳೆ ಆರೋಪಿ ಮಗ ಜಗದೀಶ್ ಫೋನ್ ಮಾಡಿ ಅಪ್ಪನನ್ನು ಕರೆಸಿಕೊಂಡಿದ್ದ.

ಆಗ ಮತ್ತೆ ಮದುವೆ ವರಾತ ತೆಗೆದು ತನಗೆ ಮದುವೆ ಮಾಡಿಸುವಂತೆ ತಾಕೀತು ಮಾಡಿದ್ದ. ಬಳಿಕ ಕುಡಿಯಲು ಹಣವನ್ನಾದರೂ ಕೊಡು ಅಂತಾನೂ ಗಲಾಟೆ ಮಾಡಿದ್ದಾನೆ. ಆ ವೇಳೆ ಅಪ್ಪ-ಮಗನ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಕಿರಿಯ ಮಗ ಜಗದೀಶ್ ಸಿಮೆಂಟ್ ಇಟ್ಟಿಗೆಯಿಂದ ತಂದೆ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read: Sidlaghatta: ಶಿಡ್ಲಘಟ್ಟದ ಇತಿಹಾಸದಲ್ಲಿಯೇ ದಂಪತಿಯ ಭೀಕರ ಕೊಲೆ, ಗವಾಕ್ಷಿಯಿಂದ ಇಳಿದು ಕುಕೃತ್ಯ, ನಗನಾಣ್ಯ ದರೋಡೆ

Also Read: ಬಿಆರ್​ಟಿಎಸ್ ಬಸ್​ನಲ್ಲಿ ಮರೆತು ಹೋಗಿದ್ದ 3ಲಕ್ಷದ ಚಿನ್ನಾಭರಣ ವಾಪಸ್ ಕೊಟ್ಟ ಸಿಬ್ಬಂದಿ, ಕಾರ್ಯವೈಖರಿಗೆ ಮೆಚ್ಚುಗೆ

Published On - 9:48 am, Fri, 11 February 22

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು