Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಂತ ಮಗನಿಂದಲೇ ನಿವೃತ್ತ ಎಎಸ್ಐ ಹತ್ಯೆ, ಕಾರಣ ಏನು ಗೊತ್ತಾ?

ನಿವೃತ್ತ ಎಎಸ್ ಐ ಬರ್ಬರ ಹತ್ಯೆ ಪ್ರಕರಣದ ತನಿಖೆಯ ವೇಳೆ ಹಂತಕನ ಕರಾಳ ಮುಖ ಬಯಲಾಗಿದೆ. ಸ್ವಂತ ಮಗನಿಂದಲೇ ನಿವೃತ್ತ ಎಎಸ್ ಐ ಹತ್ಯೆಯಾಗಿದೆ. ಮದುವೆ ಮಾಡಿಲ್ಲ ಅನ್ನೊ ಕಾರಣಕ್ಕೆ ತಂದೆಯನ್ನೇ ಹತ್ಯೆಗೈದಿರುವ ಆರೋಪ ಮಗನ ಮೇಲೆ ಕೇಳಿ ಬಂದಿದೆ.

ಸ್ವಂತ ಮಗನಿಂದಲೇ ನಿವೃತ್ತ ಎಎಸ್ಐ ಹತ್ಯೆ, ಕಾರಣ ಏನು ಗೊತ್ತಾ?
ಸ್ವಂತ ಮಗನಿಂದಲೇ ನಿವೃತ್ತ ಎಎಸ್ಐ ಹತ್ಯೆ, ಕಾರಣ ಏನು ಗೊತ್ತಾ?
Follow us
TV9 Web
| Updated By: ಸಾಧು ಶ್ರೀನಾಥ್​

Updated on:Feb 11, 2022 | 9:57 AM

ರಾಯಚೂರು: ನಿವೃತ್ತ ಎಎಸ್ ಐ ಬರ್ಬರ ಹತ್ಯೆ ಪ್ರಕರಣದ ತನಿಖೆಯ ವೇಳೆ ಹಂತಕನ ಕರಾಳ ಮುಖ ಬಯಲಾಗಿದೆ. ಸ್ವಂತ ಮಗನಿಂದಲೇ ನಿವೃತ್ತ ಎಎಸ್ ಐ ಹತ್ಯೆಯಾಗಿದೆ. ಮದುವೆ ಮಾಡಿಲ್ಲ ಅನ್ನೊ ಕಾರಣಕ್ಕೆ ತಂದೆಯನ್ನೇ ಹತ್ಯೆಗೈದಿರುವ ಆರೋಪ ಮಗನ ಮೇಲೆ ಕೇಳಿ ಬಂದಿದೆ. ರಾಯಚೂರಿನ ಮಾರ್ಕೆಟ್ ಯಾರ್ಡ್ ಪೊಲೀಸರು ಇದೀಗ ಆರೋಪಿ ಮಗನನ್ನು ಬಂಧಿಸಿದ್ದಾರೆ. ಜಗದೀಶ್ (38) ಬಂಧಿತ ಆರೋಪಿ.

ಇದೇ ಫೆಬ್ರವರಿ 9 ರ ರಾತ್ರಿ 9 ಗಂಟೆಗೆ ಕೊಲೆ ನಡೆದಿತ್ತು. ಬಸವರಾಜಪ್ಪ(75) ಹತ್ಯೆಯಾಗಿದ್ದ ನಿವೃತ್ತ ಪೊಲೀಸ್​ ಅಧಿಕಾರಿ. ರಾಯಚೂರು ನಗರದ ಗೋಶಾಲೆ ಹಿಂಭಾಗ ಪಾತಕ ಘಟನೆ ನಡೆದಿತ್ತು. ನಿವೃತ್ತ ಎಎಸ್ ಐ ಬಸವರಾಜಪ್ಪಗೆ ಐದು ಜನ ಮಕ್ಕಳು ಇದ್ದಾರೆ. ಮೂರು ಹೆಣ್ಮಕ್ಕಳಿಗೆ ಮದುವೆ ಮಾಡಿಸಿದ್ದು, ಹಿರಿಯ ಮಗ ಶಿವರಾಜ್ (40) ಹಾಗೂ ಕಿರಿಯ ಮಗ ಜಗದೀಶ್ (37) ಇಬ್ಬರಿಗೂ ಮದುವೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಕಿರಿ ಮಗ ಜಗದೀಶ್ ಮಾನಸಿಕವಾಗಿ ಕುಂದಿದ್ದ. ಅದರಿಂದ ಮದ್ಯ ವ್ಯಸನಿಯೂ ಆಗಿಬಿಟ್ಟಿದ್ದ ಜಗದೀಶ್.

ಮದುವೆ ಮಾಡಿಸು ಅಂತಾ ಕಿರಿಯ ಪುತ್ರನ ಕಿರಿಕಿರಿ: ಕಿರಿಯ ಪುತ್ರ ಜಗದೀಶ ತನಗೆ ಮದುವೆ ಮಾಡಿಸುವಂತೆ ಅಪ್ಪನನ್ನು ಒತ್ತಾಯ ಮಾಡುತ್ತಿದ್ದ. ಇದೇ ಕಾರಣಕ್ಕೆ ಎಎಸ್ ಐ ಬಸವರಾಜಪ್ಪ ಹಾಗೂ ಕುಟುಂಬಸ್ಥರು ಊರು ಬಿಟ್ಟಿದ್ದರು. ಇದೇ ಫೆಬ್ರವರಿ 9ಕ್ಕೆ ಚಿಕಿತ್ಸೆಗೆಂದು ಬಸವರಾಜಪ್ಪ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಬಂದಿದ್ದರು. ಈ ವೇಳೆ ಆರೋಪಿ ಮಗ ಜಗದೀಶ್ ಫೋನ್ ಮಾಡಿ ಅಪ್ಪನನ್ನು ಕರೆಸಿಕೊಂಡಿದ್ದ.

ಆಗ ಮತ್ತೆ ಮದುವೆ ವರಾತ ತೆಗೆದು ತನಗೆ ಮದುವೆ ಮಾಡಿಸುವಂತೆ ತಾಕೀತು ಮಾಡಿದ್ದ. ಬಳಿಕ ಕುಡಿಯಲು ಹಣವನ್ನಾದರೂ ಕೊಡು ಅಂತಾನೂ ಗಲಾಟೆ ಮಾಡಿದ್ದಾನೆ. ಆ ವೇಳೆ ಅಪ್ಪ-ಮಗನ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಕಿರಿಯ ಮಗ ಜಗದೀಶ್ ಸಿಮೆಂಟ್ ಇಟ್ಟಿಗೆಯಿಂದ ತಂದೆ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read: Sidlaghatta: ಶಿಡ್ಲಘಟ್ಟದ ಇತಿಹಾಸದಲ್ಲಿಯೇ ದಂಪತಿಯ ಭೀಕರ ಕೊಲೆ, ಗವಾಕ್ಷಿಯಿಂದ ಇಳಿದು ಕುಕೃತ್ಯ, ನಗನಾಣ್ಯ ದರೋಡೆ

Also Read: ಬಿಆರ್​ಟಿಎಸ್ ಬಸ್​ನಲ್ಲಿ ಮರೆತು ಹೋಗಿದ್ದ 3ಲಕ್ಷದ ಚಿನ್ನಾಭರಣ ವಾಪಸ್ ಕೊಟ್ಟ ಸಿಬ್ಬಂದಿ, ಕಾರ್ಯವೈಖರಿಗೆ ಮೆಚ್ಚುಗೆ

Published On - 9:48 am, Fri, 11 February 22

ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ