AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್​ ದೋಖಾ: ಗಣೇಶ ಹಬ್ಬಕ್ಕೆ ಹೊಸ ವ್ಯಾಪಾರ ಆರಂಭಿಸಬಿಸಲು ಸೀರೆ ಆರ್ಡರ್​​ ಮಾಡಿದ್ದ ದಂಪತಿಗೆ ಮೋಸ

ರಾಯಚೂರಿನ ಮಾನ್ವಿ ಪಟ್ಟಣದ ಮಹಾದೇವ್ ಮತ್ತು ಕಾಳಮ್ಮ ದಂಪತಿಗಳು ಸಾಮಾಜಿಕ ಜಾಲತಾಣದ ಜಾಹೀರಾತಿನಲ್ಲಿ ನೋಡಿದ ಸೀರೆಗಳನ್ನು ಆರ್ಡರ್ ಮಾಡಿದ್ದಾರೆ. 10,000 ರೂ. ಪಾವತಿಸಿ ಸೀರೆಗಳನ್ನು ಆರ್ಡರ್ ಮಾಡಿದ್ದ ಅವರಿಗೆ ಹರಿದ ಮತ್ತು ದುರ್ವಾಸನೆಯ ಸೀರೆಗಳು ಬಂದಿವೆ. ಪೊಲೀಸರು ದೂರು ದಾಖಲಿಸಲು ನಿರಾಕರಿಸಿದ್ದಾರೆ ಎಂದು ದಂಪತಿ ಆರೋಪಿಸಿದ್ದಾರೆ. ನ್ಯಾಯಕ್ಕಾಗಿ ಅವರು ಮನವಿ ಮಾಡುತ್ತಿದ್ದಾರೆ.

ಆನ್​ಲೈನ್​ ದೋಖಾ: ಗಣೇಶ ಹಬ್ಬಕ್ಕೆ ಹೊಸ ವ್ಯಾಪಾರ ಆರಂಭಿಸಬಿಸಲು ಸೀರೆ ಆರ್ಡರ್​​ ಮಾಡಿದ್ದ ದಂಪತಿಗೆ ಮೋಸ
ಮೋಸ ಹೋದ ದಂಪತಿ
ಭೀಮೇಶ್​​ ಪೂಜಾರ್
| Edited By: |

Updated on:Aug 27, 2025 | 10:26 AM

Share

ರಾಯಚೂರು, ಆಗಸ್ಟ್​ 27: ಸಾಮಾಜಿಕ ಜಾಲತಾಣದಲ್ಲಿನ (Social Media) ಜಾಹಿರಾತು ನಂಬಿ ಸೀರೆ ಆರ್ಡ್​ರ್ ಮಾಡಿದ್ದ ದಂಪತಿ ಮೊಸ ಹೋಗಿದ್ದಾರೆ. ಮನೆಯಲ್ಲೇ ಕುಳಿತು ಸೀರೆ ಬ್ಯುಸಿನೆಸ್ ಮಾಡಬೇಕು, ಗೌರಿ-ಗಣೇಶ ಹಬ್ಬಕ್ಕೆ (Ganesha Festival) ಹೊಸ ವ್ಯಾಪಾರ ಆರಂಭಿಸಬೇಕು ಎಂದು ರಾಯಚೂರಿನ (Raichur) ಮಾನ್ವಿ ಪಟ್ಟಣದ ನಿವಾಸಿ ಮಹಾದೇವ್ ಹಾಗೂ ಕಾಳಮ್ಮ ದಂಪತಿ ಕನಸು ಕಂಡಿದ್ದರು. ಹೀಗಿರುವಾಗ, ದಂಪತಿ ಸಾಮಾಜಿಕ ಜಾಲತಾಣದಲ್ಲಿ 100 ರೂ.ಗೆ 3 ಸಾರಿ ಎಂಬ ಜಾಹಿರಾತು ನೋಡಿದ್ದಾರೆ. ಜಾಹಿರಾತಿದಲ್ಲಿ ಇದ್ದ ಸೀರೆಗಳ ಬಣ್ಣ, ವೆರೈಟಿ ಡಿಸೈನ್​ಗಳನ್ನು ನೋಡಿ ಫಿದಾ ಆಗಿದ್ದಾರೆ.

ನಂತರ, ಜಾಹಿರಾತು ನೀಡಿದವರನ್ನು ಸಂಪರ್ಕಿಸಿ, 10 ಸಾವಿರ ರೂ. ಹಣವನ್ನು ಆನ್​ಲೈನ್​ ಮೂಲಕ ಪೇ ಮಾಡಿ 70 ಸೀರೆ ಆರ್ಡರ್ ಮಾಡಿದ್ದಾರೆ. ಒಂದು ವಾರದ ಬಳಿಕ ಮನೆಗೆ ಬಂದಿದ್ದ ಪಾರ್ಸಲ್ ನೋಡಿ ದಂಪತಿ ಕಕ್ಕಾಬಿಕ್ಕಿಯಾಗಿದ್ದಾರೆ. ಆರ್ಡರ್​ ಮಾಡಿದ್ದ ಅಷ್ಟೂ ಸೇರೆಗಳು ಹರಿದು ಹೋಗಿದ್ದವು. ಇದಷ್ಟೇ ಅಲ್ಲದೆ ಸೀರೆಗಳು ದುರ್ವಾಸನೆ ಬರುತ್ತಿದ್ದವು. ಇದರಿಂದ ಕಕ್ಕಾಬಿಕ್ಕಿಯಾದ ದಂಪತಿಗಳು ಆನ್​ಲೈನ್​ ಮಾರಾಟಗಾರನನ್ನು ಸಂಪರ್ಕಿಸಿದಾಗ ಮಾರಾಟಗಾರ ಬೇಕಾಬಿಟ್ಟಿಯಾಗಿ ಪ್ರತಿಕ್ರಿಯಿಸಿದ್ದಾನೆ. ತಾವು ಮೋಸ ಹೋದ ಬಗ್ಗೆ ದೂರು ನೀಡಲು ಹೋದರೂ ಮಾನ್ವಿ ಠಾಣೆ ಪೊಲೀಸರು ದೂರು ತೆಗೆದುಕೊಳ್ಳಲು ಹಿಂದೇಟು ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪೊಲೀಸರು ನಮಗೆ ನ್ಯಾಯ ಕೊಡಿಸಬೇಕು ಅಂತ ಮಹದೇವ ದಂಪತಿ ಮನವಿ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:25 am, Wed, 27 August 25

Follow Us
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ