AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್​ ದೋಖಾ: ಗಣೇಶ ಹಬ್ಬಕ್ಕೆ ಹೊಸ ವ್ಯಾಪಾರ ಆರಂಭಿಸಬಿಸಲು ಸೀರೆ ಆರ್ಡರ್​​ ಮಾಡಿದ್ದ ದಂಪತಿಗೆ ಮೋಸ

ರಾಯಚೂರಿನ ಮಾನ್ವಿ ಪಟ್ಟಣದ ಮಹಾದೇವ್ ಮತ್ತು ಕಾಳಮ್ಮ ದಂಪತಿಗಳು ಸಾಮಾಜಿಕ ಜಾಲತಾಣದ ಜಾಹೀರಾತಿನಲ್ಲಿ ನೋಡಿದ ಸೀರೆಗಳನ್ನು ಆರ್ಡರ್ ಮಾಡಿದ್ದಾರೆ. 10,000 ರೂ. ಪಾವತಿಸಿ ಸೀರೆಗಳನ್ನು ಆರ್ಡರ್ ಮಾಡಿದ್ದ ಅವರಿಗೆ ಹರಿದ ಮತ್ತು ದುರ್ವಾಸನೆಯ ಸೀರೆಗಳು ಬಂದಿವೆ. ಪೊಲೀಸರು ದೂರು ದಾಖಲಿಸಲು ನಿರಾಕರಿಸಿದ್ದಾರೆ ಎಂದು ದಂಪತಿ ಆರೋಪಿಸಿದ್ದಾರೆ. ನ್ಯಾಯಕ್ಕಾಗಿ ಅವರು ಮನವಿ ಮಾಡುತ್ತಿದ್ದಾರೆ.

ಆನ್​ಲೈನ್​ ದೋಖಾ: ಗಣೇಶ ಹಬ್ಬಕ್ಕೆ ಹೊಸ ವ್ಯಾಪಾರ ಆರಂಭಿಸಬಿಸಲು ಸೀರೆ ಆರ್ಡರ್​​ ಮಾಡಿದ್ದ ದಂಪತಿಗೆ ಮೋಸ
ಮೋಸ ಹೋದ ದಂಪತಿ
ಭೀಮೇಶ್​​ ಪೂಜಾರ್
| Edited By: |

Updated on:Aug 27, 2025 | 10:26 AM

Share

ರಾಯಚೂರು, ಆಗಸ್ಟ್​ 27: ಸಾಮಾಜಿಕ ಜಾಲತಾಣದಲ್ಲಿನ (Social Media) ಜಾಹಿರಾತು ನಂಬಿ ಸೀರೆ ಆರ್ಡ್​ರ್ ಮಾಡಿದ್ದ ದಂಪತಿ ಮೊಸ ಹೋಗಿದ್ದಾರೆ. ಮನೆಯಲ್ಲೇ ಕುಳಿತು ಸೀರೆ ಬ್ಯುಸಿನೆಸ್ ಮಾಡಬೇಕು, ಗೌರಿ-ಗಣೇಶ ಹಬ್ಬಕ್ಕೆ (Ganesha Festival) ಹೊಸ ವ್ಯಾಪಾರ ಆರಂಭಿಸಬೇಕು ಎಂದು ರಾಯಚೂರಿನ (Raichur) ಮಾನ್ವಿ ಪಟ್ಟಣದ ನಿವಾಸಿ ಮಹಾದೇವ್ ಹಾಗೂ ಕಾಳಮ್ಮ ದಂಪತಿ ಕನಸು ಕಂಡಿದ್ದರು. ಹೀಗಿರುವಾಗ, ದಂಪತಿ ಸಾಮಾಜಿಕ ಜಾಲತಾಣದಲ್ಲಿ 100 ರೂ.ಗೆ 3 ಸಾರಿ ಎಂಬ ಜಾಹಿರಾತು ನೋಡಿದ್ದಾರೆ. ಜಾಹಿರಾತಿದಲ್ಲಿ ಇದ್ದ ಸೀರೆಗಳ ಬಣ್ಣ, ವೆರೈಟಿ ಡಿಸೈನ್​ಗಳನ್ನು ನೋಡಿ ಫಿದಾ ಆಗಿದ್ದಾರೆ.

ನಂತರ, ಜಾಹಿರಾತು ನೀಡಿದವರನ್ನು ಸಂಪರ್ಕಿಸಿ, 10 ಸಾವಿರ ರೂ. ಹಣವನ್ನು ಆನ್​ಲೈನ್​ ಮೂಲಕ ಪೇ ಮಾಡಿ 70 ಸೀರೆ ಆರ್ಡರ್ ಮಾಡಿದ್ದಾರೆ. ಒಂದು ವಾರದ ಬಳಿಕ ಮನೆಗೆ ಬಂದಿದ್ದ ಪಾರ್ಸಲ್ ನೋಡಿ ದಂಪತಿ ಕಕ್ಕಾಬಿಕ್ಕಿಯಾಗಿದ್ದಾರೆ. ಆರ್ಡರ್​ ಮಾಡಿದ್ದ ಅಷ್ಟೂ ಸೇರೆಗಳು ಹರಿದು ಹೋಗಿದ್ದವು. ಇದಷ್ಟೇ ಅಲ್ಲದೆ ಸೀರೆಗಳು ದುರ್ವಾಸನೆ ಬರುತ್ತಿದ್ದವು. ಇದರಿಂದ ಕಕ್ಕಾಬಿಕ್ಕಿಯಾದ ದಂಪತಿಗಳು ಆನ್​ಲೈನ್​ ಮಾರಾಟಗಾರನನ್ನು ಸಂಪರ್ಕಿಸಿದಾಗ ಮಾರಾಟಗಾರ ಬೇಕಾಬಿಟ್ಟಿಯಾಗಿ ಪ್ರತಿಕ್ರಿಯಿಸಿದ್ದಾನೆ. ತಾವು ಮೋಸ ಹೋದ ಬಗ್ಗೆ ದೂರು ನೀಡಲು ಹೋದರೂ ಮಾನ್ವಿ ಠಾಣೆ ಪೊಲೀಸರು ದೂರು ತೆಗೆದುಕೊಳ್ಳಲು ಹಿಂದೇಟು ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪೊಲೀಸರು ನಮಗೆ ನ್ಯಾಯ ಕೊಡಿಸಬೇಕು ಅಂತ ಮಹದೇವ ದಂಪತಿ ಮನವಿ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:25 am, Wed, 27 August 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್