AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್​ ದೋಖಾ: ಗಣೇಶ ಹಬ್ಬಕ್ಕೆ ಹೊಸ ವ್ಯಾಪಾರ ಆರಂಭಿಸಬಿಸಲು ಸೀರೆ ಆರ್ಡರ್​​ ಮಾಡಿದ್ದ ದಂಪತಿಗೆ ಮೋಸ

ರಾಯಚೂರಿನ ಮಾನ್ವಿ ಪಟ್ಟಣದ ಮಹಾದೇವ್ ಮತ್ತು ಕಾಳಮ್ಮ ದಂಪತಿಗಳು ಸಾಮಾಜಿಕ ಜಾಲತಾಣದ ಜಾಹೀರಾತಿನಲ್ಲಿ ನೋಡಿದ ಸೀರೆಗಳನ್ನು ಆರ್ಡರ್ ಮಾಡಿದ್ದಾರೆ. 10,000 ರೂ. ಪಾವತಿಸಿ ಸೀರೆಗಳನ್ನು ಆರ್ಡರ್ ಮಾಡಿದ್ದ ಅವರಿಗೆ ಹರಿದ ಮತ್ತು ದುರ್ವಾಸನೆಯ ಸೀರೆಗಳು ಬಂದಿವೆ. ಪೊಲೀಸರು ದೂರು ದಾಖಲಿಸಲು ನಿರಾಕರಿಸಿದ್ದಾರೆ ಎಂದು ದಂಪತಿ ಆರೋಪಿಸಿದ್ದಾರೆ. ನ್ಯಾಯಕ್ಕಾಗಿ ಅವರು ಮನವಿ ಮಾಡುತ್ತಿದ್ದಾರೆ.

ಆನ್​ಲೈನ್​ ದೋಖಾ: ಗಣೇಶ ಹಬ್ಬಕ್ಕೆ ಹೊಸ ವ್ಯಾಪಾರ ಆರಂಭಿಸಬಿಸಲು ಸೀರೆ ಆರ್ಡರ್​​ ಮಾಡಿದ್ದ ದಂಪತಿಗೆ ಮೋಸ
ಮೋಸ ಹೋದ ದಂಪತಿ
ಭೀಮೇಶ್​​ ಪೂಜಾರ್
| Updated By: ವಿವೇಕ ಬಿರಾದಾರ|

Updated on:Aug 27, 2025 | 10:26 AM

Share

ರಾಯಚೂರು, ಆಗಸ್ಟ್​ 27: ಸಾಮಾಜಿಕ ಜಾಲತಾಣದಲ್ಲಿನ (Social Media) ಜಾಹಿರಾತು ನಂಬಿ ಸೀರೆ ಆರ್ಡ್​ರ್ ಮಾಡಿದ್ದ ದಂಪತಿ ಮೊಸ ಹೋಗಿದ್ದಾರೆ. ಮನೆಯಲ್ಲೇ ಕುಳಿತು ಸೀರೆ ಬ್ಯುಸಿನೆಸ್ ಮಾಡಬೇಕು, ಗೌರಿ-ಗಣೇಶ ಹಬ್ಬಕ್ಕೆ (Ganesha Festival) ಹೊಸ ವ್ಯಾಪಾರ ಆರಂಭಿಸಬೇಕು ಎಂದು ರಾಯಚೂರಿನ (Raichur) ಮಾನ್ವಿ ಪಟ್ಟಣದ ನಿವಾಸಿ ಮಹಾದೇವ್ ಹಾಗೂ ಕಾಳಮ್ಮ ದಂಪತಿ ಕನಸು ಕಂಡಿದ್ದರು. ಹೀಗಿರುವಾಗ, ದಂಪತಿ ಸಾಮಾಜಿಕ ಜಾಲತಾಣದಲ್ಲಿ 100 ರೂ.ಗೆ 3 ಸಾರಿ ಎಂಬ ಜಾಹಿರಾತು ನೋಡಿದ್ದಾರೆ. ಜಾಹಿರಾತಿದಲ್ಲಿ ಇದ್ದ ಸೀರೆಗಳ ಬಣ್ಣ, ವೆರೈಟಿ ಡಿಸೈನ್​ಗಳನ್ನು ನೋಡಿ ಫಿದಾ ಆಗಿದ್ದಾರೆ.

ನಂತರ, ಜಾಹಿರಾತು ನೀಡಿದವರನ್ನು ಸಂಪರ್ಕಿಸಿ, 10 ಸಾವಿರ ರೂ. ಹಣವನ್ನು ಆನ್​ಲೈನ್​ ಮೂಲಕ ಪೇ ಮಾಡಿ 70 ಸೀರೆ ಆರ್ಡರ್ ಮಾಡಿದ್ದಾರೆ. ಒಂದು ವಾರದ ಬಳಿಕ ಮನೆಗೆ ಬಂದಿದ್ದ ಪಾರ್ಸಲ್ ನೋಡಿ ದಂಪತಿ ಕಕ್ಕಾಬಿಕ್ಕಿಯಾಗಿದ್ದಾರೆ. ಆರ್ಡರ್​ ಮಾಡಿದ್ದ ಅಷ್ಟೂ ಸೇರೆಗಳು ಹರಿದು ಹೋಗಿದ್ದವು. ಇದಷ್ಟೇ ಅಲ್ಲದೆ ಸೀರೆಗಳು ದುರ್ವಾಸನೆ ಬರುತ್ತಿದ್ದವು. ಇದರಿಂದ ಕಕ್ಕಾಬಿಕ್ಕಿಯಾದ ದಂಪತಿಗಳು ಆನ್​ಲೈನ್​ ಮಾರಾಟಗಾರನನ್ನು ಸಂಪರ್ಕಿಸಿದಾಗ ಮಾರಾಟಗಾರ ಬೇಕಾಬಿಟ್ಟಿಯಾಗಿ ಪ್ರತಿಕ್ರಿಯಿಸಿದ್ದಾನೆ. ತಾವು ಮೋಸ ಹೋದ ಬಗ್ಗೆ ದೂರು ನೀಡಲು ಹೋದರೂ ಮಾನ್ವಿ ಠಾಣೆ ಪೊಲೀಸರು ದೂರು ತೆಗೆದುಕೊಳ್ಳಲು ಹಿಂದೇಟು ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪೊಲೀಸರು ನಮಗೆ ನ್ಯಾಯ ಕೊಡಿಸಬೇಕು ಅಂತ ಮಹದೇವ ದಂಪತಿ ಮನವಿ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:25 am, Wed, 27 August 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ