ಆನ್​ಲೈನ್​ ದೋಖಾ: ಗಣೇಶ ಹಬ್ಬಕ್ಕೆ ಹೊಸ ವ್ಯಾಪಾರ ಆರಂಭಿಸಬಿಸಲು ಸೀರೆ ಆರ್ಡರ್​​ ಮಾಡಿದ್ದ ದಂಪತಿಗೆ ಮೋಸ

ರಾಯಚೂರಿನ ಮಾನ್ವಿ ಪಟ್ಟಣದ ಮಹಾದೇವ್ ಮತ್ತು ಕಾಳಮ್ಮ ದಂಪತಿಗಳು ಸಾಮಾಜಿಕ ಜಾಲತಾಣದ ಜಾಹೀರಾತಿನಲ್ಲಿ ನೋಡಿದ ಸೀರೆಗಳನ್ನು ಆರ್ಡರ್ ಮಾಡಿದ್ದಾರೆ. 10,000 ರೂ. ಪಾವತಿಸಿ ಸೀರೆಗಳನ್ನು ಆರ್ಡರ್ ಮಾಡಿದ್ದ ಅವರಿಗೆ ಹರಿದ ಮತ್ತು ದುರ್ವಾಸನೆಯ ಸೀರೆಗಳು ಬಂದಿವೆ. ಪೊಲೀಸರು ದೂರು ದಾಖಲಿಸಲು ನಿರಾಕರಿಸಿದ್ದಾರೆ ಎಂದು ದಂಪತಿ ಆರೋಪಿಸಿದ್ದಾರೆ. ನ್ಯಾಯಕ್ಕಾಗಿ ಅವರು ಮನವಿ ಮಾಡುತ್ತಿದ್ದಾರೆ.

ಆನ್​ಲೈನ್​ ದೋಖಾ: ಗಣೇಶ ಹಬ್ಬಕ್ಕೆ ಹೊಸ ವ್ಯಾಪಾರ ಆರಂಭಿಸಬಿಸಲು ಸೀರೆ ಆರ್ಡರ್​​ ಮಾಡಿದ್ದ ದಂಪತಿಗೆ ಮೋಸ
ಮೋಸ ಹೋದ ದಂಪತಿ
Edited By: ವಿವೇಕ ಬಿರಾದಾರ

Updated on: Aug 27, 2025 | 10:26 AM

ರಾಯಚೂರು, ಆಗಸ್ಟ್​ 27: ಸಾಮಾಜಿಕ ಜಾಲತಾಣದಲ್ಲಿನ (Social Media) ಜಾಹಿರಾತು ನಂಬಿ ಸೀರೆ ಆರ್ಡ್​ರ್ ಮಾಡಿದ್ದ ದಂಪತಿ ಮೊಸ ಹೋಗಿದ್ದಾರೆ. ಮನೆಯಲ್ಲೇ ಕುಳಿತು ಸೀರೆ ಬ್ಯುಸಿನೆಸ್ ಮಾಡಬೇಕು, ಗೌರಿ-ಗಣೇಶ ಹಬ್ಬಕ್ಕೆ (Ganesha Festival) ಹೊಸ ವ್ಯಾಪಾರ ಆರಂಭಿಸಬೇಕು ಎಂದು ರಾಯಚೂರಿನ (Raichur) ಮಾನ್ವಿ ಪಟ್ಟಣದ ನಿವಾಸಿ ಮಹಾದೇವ್ ಹಾಗೂ ಕಾಳಮ್ಮ ದಂಪತಿ ಕನಸು ಕಂಡಿದ್ದರು. ಹೀಗಿರುವಾಗ, ದಂಪತಿ ಸಾಮಾಜಿಕ ಜಾಲತಾಣದಲ್ಲಿ 100 ರೂ.ಗೆ 3 ಸಾರಿ ಎಂಬ ಜಾಹಿರಾತು ನೋಡಿದ್ದಾರೆ. ಜಾಹಿರಾತಿದಲ್ಲಿ ಇದ್ದ ಸೀರೆಗಳ ಬಣ್ಣ, ವೆರೈಟಿ ಡಿಸೈನ್​ಗಳನ್ನು ನೋಡಿ ಫಿದಾ ಆಗಿದ್ದಾರೆ.

ನಂತರ, ಜಾಹಿರಾತು ನೀಡಿದವರನ್ನು ಸಂಪರ್ಕಿಸಿ, 10 ಸಾವಿರ ರೂ. ಹಣವನ್ನು ಆನ್​ಲೈನ್​ ಮೂಲಕ ಪೇ ಮಾಡಿ 70 ಸೀರೆ ಆರ್ಡರ್ ಮಾಡಿದ್ದಾರೆ. ಒಂದು ವಾರದ ಬಳಿಕ ಮನೆಗೆ ಬಂದಿದ್ದ ಪಾರ್ಸಲ್ ನೋಡಿ ದಂಪತಿ ಕಕ್ಕಾಬಿಕ್ಕಿಯಾಗಿದ್ದಾರೆ. ಆರ್ಡರ್​ ಮಾಡಿದ್ದ ಅಷ್ಟೂ ಸೇರೆಗಳು ಹರಿದು ಹೋಗಿದ್ದವು. ಇದಷ್ಟೇ ಅಲ್ಲದೆ ಸೀರೆಗಳು ದುರ್ವಾಸನೆ ಬರುತ್ತಿದ್ದವು. ಇದರಿಂದ ಕಕ್ಕಾಬಿಕ್ಕಿಯಾದ ದಂಪತಿಗಳು ಆನ್​ಲೈನ್​ ಮಾರಾಟಗಾರನನ್ನು ಸಂಪರ್ಕಿಸಿದಾಗ ಮಾರಾಟಗಾರ ಬೇಕಾಬಿಟ್ಟಿಯಾಗಿ ಪ್ರತಿಕ್ರಿಯಿಸಿದ್ದಾನೆ. ತಾವು ಮೋಸ ಹೋದ ಬಗ್ಗೆ ದೂರು ನೀಡಲು ಹೋದರೂ ಮಾನ್ವಿ ಠಾಣೆ ಪೊಲೀಸರು ದೂರು ತೆಗೆದುಕೊಳ್ಳಲು ಹಿಂದೇಟು ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪೊಲೀಸರು ನಮಗೆ ನ್ಯಾಯ ಕೊಡಿಸಬೇಕು ಅಂತ ಮಹದೇವ ದಂಪತಿ ಮನವಿ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:25 am, Wed, 27 August 25

Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
Follow Us