ರಾಜ್ಯೋತ್ಸವ ಪ್ರಶಸ್ತಿ ಪಡೆದ ರಾಯಚೂರು ಜಿಲ್ಲೆಯ ಸರ್ಕಾರಿ ಶಾಲೆಯ ಚಟುವಟಿಕೆಗಳೇ ವಿಭಿನ್ನ..!

ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಬೆಂಡೋಣಿ ಗ್ರಾಮದ ಸರ್ಕಾರಿ ಶಾಲೆ ರಾಜೋತ್ಸವ ಪ್ರಶಸ್ತಿ ಆಯ್ಕೆಯಾಗಿದೆ. ಸ್ವತಃ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಘೋಷಣೆ ಮಾಡಿದ್ದಾರೆ. ಹಾಗಾದ್ರೆ, ರಾಜೋತ್ಸವ ಪ್ರಶಸ್ತಿ ಆಯ್ಕೆಯಾದ ರಾಜ್ಯದ ಏಕೈಕ ಬೆಂಡೋಣಿ ಸರ್ಕಾರಿ ಶಾಲೆಯ ವಿಶೇಷತೆಗಳೇನು? ಏನು ನೋಡಿ ಈ ಶಾಲೆಯನ್ನು ರಾಜೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎನ್ನುವ ವಿವರ ಇಲ್ಲಿದೆ.

ರಾಜ್ಯೋತ್ಸವ ಪ್ರಶಸ್ತಿ ಪಡೆದ ರಾಯಚೂರು ಜಿಲ್ಲೆಯ ಸರ್ಕಾರಿ ಶಾಲೆಯ ಚಟುವಟಿಕೆಗಳೇ ವಿಭಿನ್ನ..!
Edited By:

Updated on: Nov 01, 2023 | 1:12 PM

ರಾಯಚೂರು, (ನವೆಂಬರ್ 01): ವಿವಿಧ ವಿನೂತನ ಚಟುವಟಿಕೆಗಳ ಮೂಲಕ ಖ್ಯಾತಿ ಪಡೆದಿರುವ ರಾಯಚೂರು (Raichur) ಜಿಲ್ಲೆಯ ಲಿಂಗಸುಗೂರು (Lingasuru) ತಾಲೂಕಿನ ಬೆಂಡೋಣಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮಲೆನಾಡಿನ ಗಾಂಧಿ ದಿ.ಹೆಚ್.ಜಿ.ಗೋವಿಂದೇಗೌಡ ಅತ್ಯುತ್ತಮ ಸರ್ಕಾರಿ ಶಾಲೆ ಪ್ರಶಸ್ತಿ ದೊರೆತಿದೆ. ಇದರ ಬೆನ್ನಲ್ಲೇ ಇದೀಗ ಇದೇ ಶಾಲೆ ಮುಡಿಗೆ ರಾಜ್ಯದ ಅತ್ಯುನ್ನತ ಪ್ರಶಸ್ತಿ ಲಭಿಸಿದೆ. ಹೌದು..2023ರ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ(rajyotsava award )ಬೆಂಡೋಣಿ ಸರ್ಕಾರಿ ಶಾಲೆ ಭಾಜನವಾಗಿದೆ.

ಅದರಂತೆ ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಬೆಂಡೋಣಿ ಸರ್ಕಾರಿ ಪ್ರಾಥಮಿಕ ಶಾಲೆಗೆ  ಪ್ರಶಸ್ತಿ ಪ್ರಧಾನ ಮಾಡಲಾಯ್ತು. ಪ್ರಶಸ್ತಿ ಜೊತೆ ನೀಡುವ ನಗದು ಪುರಸ್ಕಾರದ ಮೊತ್ತದಲ್ಲಿ ಶಾಲೆಯ ಶೈಕ್ಷಣಿಕ ಚಟುವಟಿಕೆ, ಮೂಲಸೌಕರ್ಯಗಳಾದ ಗ್ರಂಥಾಲಯ, ಕಂಪ್ಯೂಟರ್ ಪ್ರಯೋಗಾಲಯ, ಮಕ್ಕಳ ಸೃಜನ ಶೀಲತೆ ಹೆಚ್ಚಿಸುವ ಉದ್ದೇಶಕ್ಕಾಗಿ ಬಳಕೆ ಮಾಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

ಇದನ್ನೂ ಓದಿ: ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಾದ ಏಕೈಕ ರಾಯಚೂರು ಜಿಲ್ಲೆಯ ಸರ್ಕಾರಿ ಶಾಲೆಯ ವಿಶೇಷತೆಗಳೇನು?

ನಮ್ಮ ಶಾಲೆಯ ವಿಭಿನ್ನ ಚಟುವಟಿಕೆಗಳು,ಮಕ್ಕಳ ಭವಿಷ್ಯದ ನಿಟ್ಟಿನಲ್ಲಿನ ನೀಡಲಾಗುತ್ತಿರೊ ಪ್ರಾಕ್ಟಿಕಲ್ ಪಾಠಗಳು ಹಾಗೂ ಶಾಲೆಯ ಉತ್ತಮ ಪರಿಸರ ಸೇರಿದಂತೆ ಇನ್ನಿತರ ಮಾನದಂಡಗಳು ಆಧರಿಸಿ ಹೆಚ್.ಜಿ.ಗೋವಿಂದೇಗೌಡ ಅತ್ಯತ್ತಮ ಸರ್ಕಾರಿ ಶಾಲೆ ಪ್ರಶಸ್ತಿಗೆ ಭಾಜನವಾಗ್ತಿದೆ. ಇದರಿಂದ ಖುಷಿ ಜೊತೆಗೆ ಎ ಜವಾಬ್ದಾರಿಯೂ ಹೆಚ್ಚಾಗುತ್ತಿದೆ ಅಂತಾರೆ ಶಾಲೆಯ ಶಿಕ್ಷಕ ವರ್ಗ.

ಹಚ್ಚ ಹಸಿರಿನಿಂದ ಕೂಡಿದ ಶಾಲೆ ಆವರಣ

ಈ ಶಾಲೆಯೊಳಗೆ ಕಾಲಿಟ್ಟಿರೆ ಸಾಕು ಅರಣ್ಯ ಪ್ರದೇಶಕ್ಕೆ ಬಂದಿದ್ದೇವೆ ಎನ್ನುವಂತೆ ಭಾಸವಾಗುತ್ತದೆ. ಅದರಂತೆ ಇರುವ ಅಲ್ಪಸ್ವಲ್ಪ ಜಾಗದಲ್ಲಿ ಗಿಡಗಳನ್ನು ನೆಡಲಾಗಿದೆ. ಇದರೊಂದಿಗೆ ಉತ್ತಮ ಪರಿಸರ ಬೆಳೆಸಿ ಮಕ್ಕಳಿಗೆ ಪಠ್ಯ ಜೊತೆ ಪರಿಸರ ಸಂರಕ್ಷಣೆ ಬಗ್ಗೆ ಪ್ರಜ್ಞೆ ಮೂಡಿಸಲಾಗುತ್ತಿದೆ. ಪರಿಸರವಲ್ಲದೆ ಪಕ್ಷಿಸಂಕುಲ ಉಳಿವಿಗಾಗಿ ಅವುಗಳ ಆಹಾರ ಹಾಗೂ ಕುಡಿಯಲು ನೀರಿನ ಅರವಟಿಕೆ ಮಾಡಲಾಗಿದೆ. ಈಗಾಗಲೇ ಶಾಲೆಗೆ “ಹಸಿರು ಶಾಲೆ” ಅನ್ನೊ ಪ್ರಶಸ್ತಿ ಕೂಡ ಸಿಕ್ಕಿದೆ.

ಈ ಶಾಲೆಯ ಚಟುವಟಿಕೆಗಳೇ ವಿಭಿನ್ನ..!

ಶಾಲೆಯಲ್ಲಿ ಸರ್ಕಾರ ನಿಗದಿಪಡಿಸಿದ ಪಠ್ಯ ಭೋದನೆ ಮಾತ್ರವಲ್ಲದೆ ಮಕ್ಕಳಿಗೆ ಕೃಷಿಯತ್ತ ಒಲವು ಮೂಡಿಸುವ ಹಿನ್ನಲೆಯಲ್ಲಿ ಬ್ಯಾಗ್ ರಹಿತ ದಿನವೆಂದು ಆಚರಿಸಲಾಗುತ್ತದೆ.ಗ್ಯಾಗ್ ರಹಿತ ದಿನದಂದು ಶಿಕ್ಷಕರು ಮಕ್ಕಳನ್ನ ಕರೆದುಕೊಂಡು ಹೊಲ ಗದ್ದೆಗಳಿಗೆ ಹೋಗುತ್ತಾರೆ.ಅಲ್ಲಿ ಕೃಷಿ ಚಟುವಟಿಕೆಗಳು, ಬಿತ್ತನೆಯ ವಿಧಾನ ಸೇರಿ ಹಂತಹಂತವಾದ ಕೃಷಿ ಬಗ್ಗೆ ಮಾಹಿತಿ ನೀಡಲಾಗುತ್ತದೆ.

ಇದಷ್ಟೆ ಅಲ್ಲದೇ ಕೃಷಿ ಉಪಕರಣಗಳನ್ನ ತೋರಿಸಿ ಅವುಗಳ ವೈಶಿಷ್ಟ್ಯ ಲಾಭಗಳ ಬಗ್ಗೆ ಪಾಠ ಮಾಡಲಾಗುತ್ತದೆ.ಭಿತ್ತನೆ ಹಾಗೂ ಕೃಷಿ ಚಟುವಟಿಕೆಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಶಾಲೆಯಲ್ಲಿ ಮಕ್ಕಳಿಗೆ ವ್ಯಾಪಾರ ವ್ಯವಹಾರದ ಬಗ್ಗೆ ಮಾಹಿತಿ ಒದಗಿಸಸಲಾಗುತ್ತದೆ. ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿ ಚುನಾವಣೆ ಮೂಲಕ ಶಾಲಾ ಹಂತದಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳ ಆಯ್ಕೆ ಮಾಡಲಾಗತ್ತೆ. ಇದರಿಂದ ಪ್ರಾಥಮಿಕ ಹಂತದಿದಲೇ ಮಕ್ಕಳಿಗೆ ಚುನಾವಣಾ ಬಗ್ಗೆ ಅರಿವು ಮೂಡಿಸುವ ಸೇರಿದಂತೆ ವಿಭಿನ್ನ ಕಾರ್ಯಚಟುವಟಿಕೆಗಳಿಗೆ ಖ್ಯಾತಿ ಪಡೆದಿದೆ.

ರಾಜ್ಯದಲ್ಲೇ ಮಾದರಿಯಾದ ಏಕೈಕ ಶಾಲೆ..!

ಶಾಲೆಯಲ್ಲಿ ಮೂಲಸೌಕರ್ಯ, ಶಾಲಾ ಹಂತದಲ್ಲಿ ಕೈಗೊಂಡ ಚಟುವಟಿಕೆಗಳ, ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹಾಗೂ ಗ್ರಾಮದಲ್ಲಿ ಶಿಕ್ಷಣ ಅಭಿವೃದ್ಧಿಗೆ ಗ್ರಾಮಸ್ಥರ ಸಹಕಾರದೊಂದಿಗೆ  ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳ ತಂಡ ನಡೆಸುವ ಮೌಲ್ಯಮಾಪನ ಪರೀಕ್ಷೆಯಲ್ಲಿ ತೇರ್ಗಡೆಯಾಗಿದೆ. ಅಲ್ಲದೇ ಮಲೆನಾಡಿನ ಗಾಂಧಿ ಮಾಜಿ ಶಿಕ್ಷಣ ಸಚಿವ ದಿ.ಹೆಚ್.ಜಿ.ಗೋವಿಂದೇಗೌಡ ಅತ್ಯತ್ತಮ ಸರ್ಕಾರಿ ಶಾಲೆಗೆ ಪ್ರಶಸ್ತಿ ಪಡೆದುಕೊಂಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
Follow Us