Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನಿಂದ ಗೆದ್ದು ಕೆಆರ್‌ಪಿ‌ಪಿ ಪರ ಪ್ರಚಾರ: ಲಿಂಗಸುಗೂರು ಪುರಸಭೆಯ ನಾಲ್ವರು ಸದಸ್ಯರ ಸದಸ್ಯತ್ವ ಅನರ್ಹ

ಕಾಂಗ್ರೆಸ್​ನಿಂದ ಗೆದ್ದಿದ್ದ ಲಿಂಗಸುಗೂರು ಪುರಸಭೆಯ ನಾಲ್ವರು ಸದಸ್ಯರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೆಆರ್​ಪಿಸಿ ಪರ ಪ್ರಚಾರ ಮಾಡಿದ್ದು, ಇದೀಗ ಆರೋಪ ಸಾಬೀತಾಗಿದ್ದರಿಂದ ಈ ನಾಲ್ವರು ತಮ್ಮ ಸದಸ್ಯತ್ವನ್ನು ಕಳೆದುಕೊಂಡಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ಆಧಾರದ ಮೇಲೆ ನಾಲ್ವರ ಸದಸ್ಯತ್ವವನ್ನು ಅನರ್ಹಗೊಳಿಸಿ ಜಿಲ್ಲಾ ದಂಡಾಧಿಕಾರಿಗಳ ನಾಯಾಲಯ ತೀರ್ಪು ನೀಡಿದೆ.

ಕಾಂಗ್ರೆಸ್​ನಿಂದ ಗೆದ್ದು ಕೆಆರ್‌ಪಿ‌ಪಿ ಪರ ಪ್ರಚಾರ: ಲಿಂಗಸುಗೂರು ಪುರಸಭೆಯ ನಾಲ್ವರು ಸದಸ್ಯರ ಸದಸ್ಯತ್ವ ಅನರ್ಹ
ಅನರ್ಹಗೊಂಡವರು
Follow us
ಭೀಮೇಶ್​​ ಪೂಜಾರ್
| Updated By: ರಮೇಶ್ ಬಿ. ಜವಳಗೇರಾ

Updated on: Sep 05, 2023 | 10:37 AM

ರಾಯಚೂರು, (ಸೆಪ್ಟೆಂಬರ್​ 05): ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023,) ಗಾಲಿ ಜನಾರ್ದನ ರೆಡ್ಡಿ ಅವರ ಕೆಆರ್​ಪಿಪಿ ಪಕ್ಷದ (KRPP) ಪರ ಪ್ರಚಾರ ಮಾಡಿದ್ದ ಲಿಂಗಸುಗೂರು ಪುರಸಭೆಯ ನಾಲ್ವರು ಕಾಂಗ್ರೆಸ್​ ಸದಸ್ಯರ ಸದಸ್ಯತ್ವ ಅನರ್ಹಗೊಂಡಿದೆ. ಕಾಂಗ್ರೆಸ್​ನಿಂದ ಆಯ್ಕೆಯಾಗಿ KRPP ಪರ ಪ್ರಚಾರ ಮಾಡಿರುವ ಆರೋಪ ಸಾಬೀತು ಆಗಿರುವ ಹಿನ್ನೆಲೆಯಲ್ಲಿ ಫಾತೀಮಾ, ಮೌಲಾಸಾಬ್, ಎ.ಪ್ರಮೋದ್ ಕುಮಾರ್, ಶರಣಪ್ಪ ಅವರ ಲಿಂಗಸುಗೂರು ಪುರಸಭೆ ಸದಸ್ಯತ್ವವನ್ನು ಅನರ್ಹಗೊಳಿಸಿ ಜಿಲ್ಲಾ‌ ದಂಡಾಧಿಕಾರಿಗಳ ನ್ಯಾಯಾಲಯ ತೀರ್ಪು ನೀಡಿದೆ. ಫಾತೀಮಾ, ಮೌಲಾಸಾಬ್, ಎ.ಪ್ರಮೋದ್ ಕುಮಾರ್, ಶರಣಪ್ಪ ಅನರ್ಹಗೊಂಡವರು.

ಫಾತೀಮಾ, ಮೌಲಾಸಾಬ್, ಎ.ಪ್ರಮೋದ್ ಕುಮಾರ್, ಶರಣಪ್ಪ ಎನ್ನುವವರು ಲಿಂಗಸುಗೂರು ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಸ್ಙರ್ಧಿಸಿ ಗೆಲುವು ಸಾಧಿಸಿದ್ದರು. ಆದ್ರೆ, ವಿಧಾನಸಭೆ ಚುನಾವಣೆ ವೇಳೆ ಬಹಿರಂಗವಾಗಿ ಕೆಆರ್‌ಪಿಪಿ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದರು. ಇದು ಜಿಲ್ಲಾ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿತ್ತು.

ಇದನ್ನೂ ಓದಿ: ಪ್ರಜ್ವಲ್​ ರೇವಣ್ಣ ಅನರ್ಹ ಬೆನ್ನಲ್ಲೇ ಇದೀಗ ತಂದೆ ಹೆಚ್​.ಡಿ.ರೇವಣ್ಣ ಶಾಸಕ ಸ್ಥಾನಕ್ಕೂ ಕುತ್ತು

ಚುನಾವಣೆ ಫಲಿತಾಂಶ ಹೊರಬಿದ್ದ ಬಳಿಕ ಲಿಂಗಸುಗೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದು, ಪಕ್ಷ‌ ವಿರೋಧಿ ಚಟುವಟಿಕೆ ಮೇರೆಗೆ ಇವರ ಸದಸ್ಯತ್ವವನ್ನು ಅನರ್ಹಗೊಳಿಸಬೇಕೆಂದು ಮನವಿ ಮಾಡಿದ್ದರು. ಇದನ್ನು ವಿಚಾರಣೆ ನಡೆಸಿದ್ದ ಜಿಲ್ಲಾ‌ ದಂಡಾಧಿಕಾರಿಗಳ ನ್ಯಾಯಾಲಯವು, ಪಕ್ಷ ವಿರೋಧಿ ಚಟುವಟಿಕೆ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ನಾಲ್ವರ ಸದಸ್ಯತ್ವವನ್ನು ಅಸಿಂಧುಗೊಳಿಸಿ ಆದೇಶ ಹೊರಡಿಸಿದೆ. ಇದರಿಂದ ಕಾಂಗ್ರೆಸ್​ ಮೇಲುಗೈ ಸಾಧಿಸಿದೆ.

ನಿಮ್ಮ ಜಿಲ್ಲೆಗಳ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ