AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರಿನ ಹಟ್ಟಿ ನ್ಯಾಯ ಬೆಲೆ ಅಂಗಡಿಗಳಲ್ಲಿ ಹಣ ವಸೂಲಿ; ರೇಷನ್ ಚೀಟಿಗೆ 40 ರೂ ಫಿಕ್ಸ್, ಹಣ ಇಲ್ದಿದ್ರೆ ಅಕ್ಕಿಯಿಲ್ಲ, ಬೇಳೆ ಇಲ್ಲ!

ಅದು ಬಡವರ ಹೊಟ್ಟೆ ತುಂಬಿಸುವ ಮಹತ್ವದ ಯೋಜನೆ. ಒಂದು ರೂಪಾಯಿಯನ್ನು ಪಡಯದೇ ಸರ್ಕಾರ ಪಡಿತರ ನೀಡುತ್ತಿದೆ. ಆದ್ರೆ, ಗಡಿ ಜಿಲ್ಲೆ ರಾಯಚೂರಿನಲ್ಲಿ ಕೆಲ ನ್ಯಾಯ ಬೆಲೆ ಅಂಗಡಿಯವರು ಬಡವರಿಂದ ಹಣ ವಸೂಲಿಗಿಳಿದಿದ್ದು, ಈ ಬಗ್ಗೆ ಟಿವಿ9 ವರದಿ ಬೆನ್ನಲ್ಲೇ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ‌.

ರಾಯಚೂರಿನ ಹಟ್ಟಿ ನ್ಯಾಯ ಬೆಲೆ ಅಂಗಡಿಗಳಲ್ಲಿ ಹಣ ವಸೂಲಿ; ರೇಷನ್ ಚೀಟಿಗೆ 40 ರೂ ಫಿಕ್ಸ್, ಹಣ ಇಲ್ದಿದ್ರೆ ಅಕ್ಕಿಯಿಲ್ಲ, ಬೇಳೆ ಇಲ್ಲ!
ರಾಯಚೂರು ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಹಣ ವಸೂಲಿ ಆರೋಪ
ಭೀಮೇಶ್​​ ಪೂಜಾರ್
| Edited By: |

Updated on: Feb 03, 2024 | 3:01 PM

Share

ರಾಯಚೂರು, ಫೆ.03: ರಾಜ್ಯದಲ್ಲಿ ಬಡವರ ಹೊಟ್ಟೆ ತುಂಬಿಸಲೆಂದೇ ಸರ್ಕಾರ ಪ್ರತಿ ತಿಂಗಳು ಸಂಪೂರ್ಣ ಉಚಿತವಾಗಿ ರೇಷನ್ ಕೊಡುತ್ತಿದೆ. ಪ್ರತಿ ತಿಂಗಳು ಅಕ್ಕಿ ಸೇರಿದಂತೆ ಗೋಧಿ, ಬೇಳೆ ಹೀಗೆ ಇನ್ನಿತರ ಪದ್ದಾರ್ಥವನ್ನ ಸರ್ಕಾರವೇ ಜನರಿಗೆ ನೀಡುತ್ತದೆ. ಈ ಮೂಲಕ ಬಡವರು, ಬಲ್ಲಿದರು ಮೂರು ಹೊತ್ತು ಊಟ ಮಾಡುತ್ತಿದ್ದಾರೆ. ಆದ್ರೆ, ಗಡಿ ಜಿಲ್ಲೆ ರಾಯಚೂರಿನಲ್ಲಿ ನ್ಯಾಯ ಬೆಲೆ ಅಂಗಡಿ(Nyaya bele angadi)ಗಳಲ್ಲಿ ಮಹಾನ್ ಮೋಸ‌ ನಡೆಯಿತ್ತಿರುವ ಆರೋಪ ಕೇಳಿ ಬಂದಿದೆ. ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಪಟ್ಟಣದಲ್ಲಿ ಬಹುತೇಕ ನ್ಯಾಯ ಬೆಲೆ ಅಂಗಡಿಗಳಲ್ಲಿ ಬಡವರು ರೇಷನ್ ಪಡೆಯಬೇಕೆಂದರೆ ಪ್ರತಿ ಚೀಟಿಗೆ 40 ರೂ. ಕೊಡಲೇಬೇಕು.

ವರದಿ ಬೆನ್ನಲ್ಲೇ ಅಲರ್ಟ್​ ಆದ ಅಧಿಕಾರಿಗಳು

ಅಮಾಯಕ ಜನರು ಹೊಟ್ಟೆ ತುಂಬಿಸಿಕೊಳ್ಳುವುದಕ್ಕೆ ತಾವು ದುಡಿದ ದುಡ್ಡಲ್ಲಿ ಸರ್ಕಾರದ ಉಚಿತ ಅಕ್ಕಿಗೂ 40 ರೂ ಕೊಡುತ್ತಿದ್ದಾರೆ. ಹೀಗೆ ಜನರಿಂದ ಬಸವರಾಜ ಎನ್ನುವ ವ್ಯಕ್ತಿ ನ್ಯಾಯ ಬೆಲೆ ಅಂಗಡಿಯಲ್ಲಿ ಜನರಿಂದ ಹಣ ವಸೂಲಿ ಮಾಡುತ್ತಿರುವ ವಿಡಿಯೋ ಆಧರಿಸಿ ಟಿವಿ9 ಸುದ್ದಿ ಬಿತ್ತರಿಸಿತ್ತು. ಇದರ ಭಾಗವಾಗಿ ಈಗ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಈ ಕುರಿತು ಮಾತನಾಡಿದ ಲಿಂಗಸುಗೂರು ಸಹಾಯಕ ಆಯುಕ್ತ ಅವಿನಾಶ್ ಶಿಂಧೆ, ಹಟ್ಟಿ ಪಟ್ಟಣದಲ್ಲಿ ಹಣ ವಸೂಲಿ ಮಾಡಿ ರೇಷನ್ ಕೊಡುತ್ತಿರುವ ವಿಷಯ ಬೆಳಕಿಗೆ ಬಂದಿದೆ. ಕೂಡಲೇ ಈ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳುವಂತೆ ಸೂಚಿಸಿದ್ದೇನೆ. ತಪ್ಪಿತಸ್ಥರ ವಿರುದ್ಧ ಕ್ರಮವಾಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ:ಅಕ್ಕಿ ಬದಲು ಹಣ ನೀಡುವುದರ ವಿರುದ್ಧ ಸಿಡಿದ ಪಡಿತರ ವಿತರಕರು: ಇಂದು ರಾಜ್ಯಾದ್ಯಂತ ನ್ಯಾಯಬೆಲೆ‌ ಅಂಗಡಿಗಳು ಬಂದ್

ಇದು ಬರೀ ಬಸವರಾಜ್​ಗೆ ಸೇರಿದ ನ್ಯಾಯ ಬೆಲೆ ಅಂಗಡಿಯ ಕಥೆಯಲ್ಲ. ಈ ಭಾಗದ ಬಹುತೇಕ ನ್ಯಾಯ ಬೆಲೆ ಅಂಗಡಿಗಳ ಕರಾಳ ಮುಖ ಇದು. ತೂಕ ಇಲ್ಲ, ರೂಲ್ಸ್ ಇಲ್ಲ, 40 ರೂ. ಕೊಟ್ಟರೆ ಮಾತ್ರ ರೇಷನ್ ಎಂದು ಸರ್ಕಾರದ ಮಹತ್ವದ ಯೋಜನೆಯ ಉದ್ದೇಶವನ್ನೇ ಮರೆತಿದ್ದಾರೆ. ಈ ಬಗ್ಗೆ ಟಿವಿ9 ವರದಿ ಬೆನ್ನಲ್ಲೇ ಅಧಿಕಾರಿಗಳು ಹಟ್ಟಿ ಪಟ್ಟಣದ ನ್ಯಾಯ ಬೆಲೆ ಅಂಗಡಿಗಳ ವಾಸ್ತವ ಸ್ಥಿತಿ, ಹಣ ವಸೂಲಿ ಬಗ್ಗೆ ತನಿಖೆಗೆ ಮುಂದಾಗಿದ್ದಾರೆ. ಕೂಡಲೇ ಈ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಆಹಾರ ಇಲಾಖೆಯ ಉಪ ನಿರ್ದೇಶಕ ಕೃಷ್ಣ ಎಂಬುವವರು ಆದೇಶಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Bhemesh Poojar
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!