AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶೇಷವಾಗಿ ಮಕ್ಕಳ ದಿನಾಚರಣೆ ಆಚರಿಸಿಕೊಂಡ ರಾಯಚೂರು ಜಿಲ್ಲಾ ಪೊಲೀಸರು

ರಾಯಚೂರು ಜಿಲ್ಲಾ ಪೊಲೀಸರು ವಿಭಿನ್ನವಾಗಿ ಮಕ್ಕಳ ದಿನಾಚರಣೆಯನ್ನು ಆಚರಿಸಿದ್ದಾರೆ. 24 ಗಂಟೆಗಳು ಬ್ಯುಸಿ ಇರೋ ಪೊಲೀಸರು ತಮ್ಮ ಸಿಬ್ಬಂದಿ ಮಕ್ಕಳ ಜೊತೆ ವಿನೂತನವಾಗಿ ಮಕ್ಕಳ ದಿನ ಆಚರಿಸಿದ್ದಾರೆ.

ವಿಶೇಷವಾಗಿ ಮಕ್ಕಳ ದಿನಾಚರಣೆ ಆಚರಿಸಿಕೊಂಡ ರಾಯಚೂರು ಜಿಲ್ಲಾ ಪೊಲೀಸರು
ರಾಯಚೂರು ಪೊಲೀಸ್ ಮಕ್ಕಳ ದಿನಾಚರಣೆ
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on: Nov 15, 2022 | 3:58 PM

Share

ರಾಯಚೂರು: ನವೆಂಬರ್ 14 ಮಕ್ಕಳ ದಿನಾಚರಣೆ ಹಿನ್ನೆಲೆ ರಾಯಚೂರು ಜಿಲ್ಲಾ ಪೊಲೀಸರು ತಮ್ಮ ಸಿಬ್ಬಂದಿ ಮಕ್ಕಳ ಜೊತೆ ವಿನೂತನವಾಗಿ ಮಕ್ಕಳ ದಿನಾಚರಣೆಯನ್ನು ಆಚರಿಸಿಕೊಂಡಿದ್ದಾರೆ. ತಮ್ಮ ಒತ್ತಡದ ಜೀವನದ ಮಧ್ಯೆ ಕುಟುಂಬಕ್ಕೆ ಸಮಯ ಕೊಡಲಾಗುತ್ತಿರಲಿಲ್ಲ, ಇದೇ ಕಾರಣಕ್ಕೆ ಸಿಬ್ಬಂದಿ, ಅವರ ಕುಟುಂಬಸ್ಥರು ಮತ್ತು ಮಕ್ಕಳನ್ನ ಒಟ್ಟುಗೂಡಿಸಿ ವಿನೂತನವಾಗಿ ಆಚರಿಸಲಾಯಿತು. ಪ್ರತಿ ಬಾರಿ ಪೊಲೀಸ್ ಇಲಾಖೆಯು ಕ್ರೀಡೆಯನ್ನ ಏರ್ಪಡಿಸುತ್ತಿದ್ದು, ಈ ಬಾರಿ ಜಿಲ್ಲಾ ಪೊಲೀಸ್ ವತಿಯಿಂದ ಸಿಬ್ಬಂದಿ ಮಕ್ಕಳಿಗಾಗಿಯೇ ಆಟಗಳನ್ನು ಏರ್ಪಡಿಸಲಾಗಿತ್ತು. ರಾಯಚೂರು ನಗರದಲ್ಲಿರುವ ಪೊಲೀಸ್ ಮೈದಾನದಲ್ಲಿ ಮಕ್ಕಳ ಕಾರ್ಯಕ್ರಮಗಳು ನಡೆಸಿದ್ದು. ಪುಟಾಣಿ ಮಕ್ಕಳಿಗಾಗಿ ಲೆಮೆನ್ ಸ್ಪೂನ್ ರೇಸ್, ಗೋಣಿ ಚೀಲದ ಓಟ ಹಾಗೂ ಕಪ್ಪೆ ಜಿಗಿತ ಸೇರಿ ವಿವಿಧ ಕ್ರೀಡೆಗಳನ್ನು ಆಡಿಸಿ ಮಕ್ಕಳನ್ನು ಮನರಂಜಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್. ಇದೇ ಮೊದಲ ಬಾರಿಗೆ ಸಿಬ್ಬಂದಿ ಮಕ್ಕಳು ಮತ್ತು ಕುಟುಂಬಸ್ಥರಿಗಾಗಿಯೇ ವಿಶೇಷ ಕಾರ್ಯಕ್ರಮವನ್ನು ನಡೆಸಲಾಗಿದೆ. ಮಕ್ಕಳು ಕ್ರೀಡೆ ಹಾಗೂ ವಿವಿಧ ಫ್ಯಾಂಟಸಿ ಆಟಗಳನ್ನು ಆಡಿ ಸಂಭ್ರಮಿಸಿದ್ದಾರೆ. ಇದರ ಜೊತೆಗೆ ನಟ ಪುನೀತ್ ರಾಜ್​ಕುಮಾರ್ ಅವರ ಜೀವನದ ಮೌಲ್ಯಗಳಿಂದ ಮಕ್ಕಳು ಪ್ರೇರೇಪಿತರಾಗಬೇಕು ಎನ್ನುವ ಉದ್ದೇಶದಿಂದ ನಟ ಪುನೀತ್ ರಾಜ್​ಕುಮಾರ್ ಅಭಿನಯದ ಗಂಧದಗುಡಿ ಸಿನಿಮಾವನ್ನು ತೋರಿಸಲಾಯಿತು ಎಂದರು.

ಎಸ್​ಪಿ ನಿಖಿಲ್ ಅವರು ತಮ್ಮ ಧರ್ಮಪತ್ನಿ ಜೊತೆ ಆಗಮಿಸಿ ಸಿಬ್ಬಂದಿ ಮಕ್ಕಳ ಜೊತೆ ಕೂತು ಗಂಧದಗುಡಿ ಸಿನಿಮಾ ವೀಕ್ಷಿಸಿದರು. ಅಷ್ಟೇ ಅಲ್ಲದೇ ಗಂಧದಗುಡಿ ಸಿನಿಮಾದಲ್ಲಿ ಇಡೀ ರಾಜ್ಯದ ಅರಣ್ಯಗಳು, ಪ್ರಾಣಿಗಳು ಅದರ ವೈಶಿಷ್ಟ್ಯಗಳನ್ನ ತೋರಿಸಲಾಗಿದ್ದು, ಪ್ರಾಣಿ ಸಂಕುಲಗಳು, ಅರಣ್ಯಗಳ ಇತಿಹಾಸಗಳನ್ನ ತಿಳಿದುಕೊಳ್ಳಲು ಮಕ್ಕಳಿಗೆ ಅನಕೂಲವಾಗಲಿದೆ ಎಂದರು.

ಇನ್ನು ಗಂಧದಗುಡಿ ಸಿನಿಮಾ ನೋಡುವಾಗ ಮಾತನಾಡಿದ ಬಾಲಕಿಯೊಬ್ಬಳು, ಇಂದಿನ ಕಾರ್ಯಕ್ರಮಗಳಿಂದ ತುಂಬಾ ಸಂತೋಷವಾಗಿದೆ. ಅದಕ್ಕಿಂತ ನನಗೆ ಅಪ್ಪು ಅವರ ಗಂಧದಗುಡಿ ಸಿನಿಮಾ ನೋಡಿ ನನ್ನಲ್ಲಿನ ಖುಷಿ ದುಪ್ಪಟ್ಟಾಗಿದೆ. ಆದರೆ ಅವರು ನಮ್ಮ ಜೊತೆಗೆ ಇಲ್ಲದಿರುವುದು ಬೇಸರವಾಗಿದೆ ಎಂದಿದ್ದಾಳೆ. ಇದಷ್ಟೇ ಅಲ್ಲದೆ ಪುಟಾಣಿ ಮಕ್ಕಳಿಗಾಗಿ ಚಿತ್ರಕಲಾ​, ಫ್ಯಾನ್ಸಿ ಡ್ರೆಸ್ ಸ್ಪರ್ಧೆ, ಹಾಡು ಹೇಳುವ ಹಾಗೂ ನೃತ್ಯ ಸ್ಪರ್ಧೆಗಳನ್ನು ನಡೆಸಲಾಯಿತು. ತಮ್ಮ ಒತ್ತಡದ ಜೀವನದ ಮಧ್ಯೆ ರಾಯಚೂರು ಜಿಲ್ಲಾ ಪೊಲೀಸರು ತಮ್ಮ ಮಕ್ಕಳ ಜೊತೆ ವಿನೂತನವಾಗಿ ಮಕ್ಕಳ ದಿನಾಚರಣೆ ಆಚರಿಸಿಕೊಂಡು ಸಂಭ್ರಮಿಸಿದ್ದಾರೆ.

ವರದಿ: ಭೀಮೇಶ್ ಪೂಜಾರ್,ಟಿವಿ9 ರಾಯಚೂರು

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ