AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಸರ್ಕಾರಿ ಆಸ್ಪತ್ರೆಯಿಂದ ಸಿಸಿಟಿವಿಗಳ ಡಿವಿಆರ್ ಸಮೇತ ಲಕ್ಷಾಂತರ ರೂ. ಮೌಲ್ಯದ ಉಪಕರಣ ಕಳವು

ಸಾಮಾನ್ಯವಾಗಿ ಕಳ್ಳತನದಂಥ ಪ್ರಕರಣಗಳಾದಾಗ ಸಿಸಿಟಿವಿ ಕ್ಯಾಮರಾ ದೃಶ್ಯಗಳನ್ನು ಆಧರಿಸಿ ತನಿಖೆ ನಡೆಸುತ್ತಾರೆ. ಕಳ್ಳರ ಪತ್ತೆಗೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಆದರೆ, ರಾಯಚೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಕಳ್ಳರು ಅದಕ್ಕೂ ಅವಕಾಶ ಕೊಟ್ಟಿಲ್ಲ. ಸಿಸಿಟಿವಿಗಳ ಡಿವಿಆರ್​ಗಳನ್ನೇ ಕದ್ದೊಯ್ದಿದ್ದಾರೆ. ಜತೆಗೆ, ಲಕ್ಷಾಂತರ ರೂಪಾಯಿ ಮೌಲ್ಯದ ಉಪಕರಣಗಳನ್ನೂ ಕಳವು ಮಾಡಿದ್ದಾರೆ.

ರಾಯಚೂರು: ಸರ್ಕಾರಿ ಆಸ್ಪತ್ರೆಯಿಂದ ಸಿಸಿಟಿವಿಗಳ ಡಿವಿಆರ್ ಸಮೇತ ಲಕ್ಷಾಂತರ ರೂ. ಮೌಲ್ಯದ ಉಪಕರಣ ಕಳವು
ದೇವದುರ್ಗ ತಾಲೂಕು ಆಸ್ಪತ್ರೆ
ಭೀಮೇಶ್​​ ಪೂಜಾರ್
| Edited By: |

Updated on: Oct 18, 2024 | 10:38 AM

Share

ರಾಯಚೂರು, ಅಕ್ಟೋಬರ್ 18: ರಾಯಚೂರಿನ ಸರ್ಕಾರಿ ಆಸ್ಪತ್ರೆಯಲ್ಲೇ ಕಳ್ಳತನವಾಗಿದೆ. ಜಿಲ್ಲೆಯ ದೇವದುರ್ಗ ತಾಲೂಕು ಆಸ್ಪತ್ರೆಯ ಸಿಸಿಟಿವಿಗಳ ಡಿವಿಆರ್ ಸಮೇತ ಲ್ಯಾಬ್​​ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಉಪಕರಣಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಸುಮಾರು ಹತ್ತು ಲಕ್ಷ ರೂಪಾಯಿ ಮೌಲ್ಯದ ಮೂರು ಯಂತ್ರೋಪಕರಣಗಳು ಕಳವಾಗಿವೆ. ರಕ್ತ ಪರೀಕ್ಷೆ ಮಾಡುವ ಅತ್ಯಾಧುನಿಕ ಯಂತ್ರ, ಎಲೆಕ್ಟ್ರೋ‌ಲೈಟ್ ಸೇರಿದಂತೆ ಬೆಲೆ ಬಾಳುವ ವಸ್ತುಗಳು ಕಳವಾಗಿವೆ.

ಐದು ಲಕ್ಷ ರೂಪಾಯಿ ಮೌಲ್ಯದ ಎಜಿಡಿ ಫುಲಿ ಆಟೋಮೇಟೆಡ್ ಅನಲೈಸರ್, ಐದು ಲಕ್ಷ ಮೌಲ್ಯದ ಹೆಮೆಟಲಜಿ (ರಕ್ತಶಾಸ್ತ್ರ) ಅನಲೈಸರ್, 59 ಸಾವಿರ ಮೌಲ್ಯದ ಎಲೆಕ್ಟ್ರೋಲೈಟ್ ಕಳವಾಗಿವೆ. ಒಟ್ಟಾರೆಯಾಗಿ 10.59 ಲಕ್ಷ ರೂ. ಮೌಲ್ಯದ ಯಂತ್ರೋಪಕರಣಗಳ ಕಳ್ಳತನವಾಗಿದೆ.

ಆಗಂತುಕರು ಪ್ರಯೋಗಾಲಯದ ಬೀಗ ಮುರಿದು ಕೃತ್ಯ ಎಸಗಿದ್ದಾರೆ, ಯಂತ್ರೋಪಕರಣಗಳ ಕಳ್ಳತನದ ಬಳಿಕ, ಸುಳಿಸುವ ಸಿಗದಂತೆ ಮಾಡಲು ಸಿಸಿಟಿವಿ ಡಿವಿಆರ್ ಅನ್ನೂಬ ಕಳ್ಳರು ಹೊತ್ತೊಯ್ದಿದ್ದಾರೆ.

Raichur: Equipment worth lakhs of rupees including CCTV DVR stolen from government hospital in Devadurga

ದೇವದುರ್ಗ ತಾಲೂಕು ಆಸ್ಪತ್ರೆಯ ಲ್ಯಾಬ್

ಸದ್ಯ ತಾಲೂಕು ವೈದ್ಯಾಧಿಕಾರಿ ಡಾ. ಶಿವಾನಂದ್ ದೇವದುರ್ಗ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅದರಂತೆ, ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ದೇವದುರ್ಗ ಪೊಲೀಸರಿಂದ ಪ್ರಾಥಮಿಕ ಹಂತದ ತನಿಖೆ ಪ್ರಗತಿಯಲ್ಲಿದೆ.

ಇದನ್ನೂ ಓದಿ: ರಾಯಚೂರು: ಫಸ್ಟ್ ನೈಟ್ ವಿಡಿಯೋ ಮಾಡಿಟ್ಟುಕೊಂಡು ಸರ್ಕಾರಿ ಅಧಿಕಾರಿಯಿಂದ ಪತ್ನಿಗೆ ಬ್ಲ್ಯಾಕ್​ಮೇಲ್

ವಿದ್ಯುತ್ ತಂತಿ ತಗುಲಿ 2 ಮೇಕೆಗಳು ಸಾವು

ರಾಯಚೂರಿನ ರಾಲಿಂಗಸುಗೂರು ತಾಲೂಕಿನ ಮಲ್ಲಾಪುರದಲ್ಲಿ ವಿದ್ಯುತ್ ತಂತಿ ತಗುಲಿ 2 ಮೇಕೆಗಳು ಮೃತಪಟ್ಟಿವೆ. ತಿಮ್ಮಣ್ಣ ಪೂಜಾರಿ ಎಂಬುವರಿಗೆ ಸೇರಿದ ಮೇಕೆಗಳು ಮೃತಪಟ್ಟಿವೆ. ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ರೈತ ಮನವಿ ಸಲ್ಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ