ರಾಯಚೂರು: ಸರ್ಕಾರಿ ಆಸ್ಪತ್ರೆಯಿಂದ ಸಿಸಿಟಿವಿಗಳ ಡಿವಿಆರ್ ಸಮೇತ ಲಕ್ಷಾಂತರ ರೂ. ಮೌಲ್ಯದ ಉಪಕರಣ ಕಳವು

ಸಾಮಾನ್ಯವಾಗಿ ಕಳ್ಳತನದಂಥ ಪ್ರಕರಣಗಳಾದಾಗ ಸಿಸಿಟಿವಿ ಕ್ಯಾಮರಾ ದೃಶ್ಯಗಳನ್ನು ಆಧರಿಸಿ ತನಿಖೆ ನಡೆಸುತ್ತಾರೆ. ಕಳ್ಳರ ಪತ್ತೆಗೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಆದರೆ, ರಾಯಚೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಕಳ್ಳರು ಅದಕ್ಕೂ ಅವಕಾಶ ಕೊಟ್ಟಿಲ್ಲ. ಸಿಸಿಟಿವಿಗಳ ಡಿವಿಆರ್​ಗಳನ್ನೇ ಕದ್ದೊಯ್ದಿದ್ದಾರೆ. ಜತೆಗೆ, ಲಕ್ಷಾಂತರ ರೂಪಾಯಿ ಮೌಲ್ಯದ ಉಪಕರಣಗಳನ್ನೂ ಕಳವು ಮಾಡಿದ್ದಾರೆ.

ರಾಯಚೂರು: ಸರ್ಕಾರಿ ಆಸ್ಪತ್ರೆಯಿಂದ ಸಿಸಿಟಿವಿಗಳ ಡಿವಿಆರ್ ಸಮೇತ ಲಕ್ಷಾಂತರ ರೂ. ಮೌಲ್ಯದ ಉಪಕರಣ ಕಳವು
ದೇವದುರ್ಗ ತಾಲೂಕು ಆಸ್ಪತ್ರೆ
Follow us
| Updated By: ಗಣಪತಿ ಶರ್ಮ

Updated on: Oct 18, 2024 | 10:38 AM

ರಾಯಚೂರು, ಅಕ್ಟೋಬರ್ 18: ರಾಯಚೂರಿನ ಸರ್ಕಾರಿ ಆಸ್ಪತ್ರೆಯಲ್ಲೇ ಕಳ್ಳತನವಾಗಿದೆ. ಜಿಲ್ಲೆಯ ದೇವದುರ್ಗ ತಾಲೂಕು ಆಸ್ಪತ್ರೆಯ ಸಿಸಿಟಿವಿಗಳ ಡಿವಿಆರ್ ಸಮೇತ ಲ್ಯಾಬ್​​ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಉಪಕರಣಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಸುಮಾರು ಹತ್ತು ಲಕ್ಷ ರೂಪಾಯಿ ಮೌಲ್ಯದ ಮೂರು ಯಂತ್ರೋಪಕರಣಗಳು ಕಳವಾಗಿವೆ. ರಕ್ತ ಪರೀಕ್ಷೆ ಮಾಡುವ ಅತ್ಯಾಧುನಿಕ ಯಂತ್ರ, ಎಲೆಕ್ಟ್ರೋ‌ಲೈಟ್ ಸೇರಿದಂತೆ ಬೆಲೆ ಬಾಳುವ ವಸ್ತುಗಳು ಕಳವಾಗಿವೆ.

ಐದು ಲಕ್ಷ ರೂಪಾಯಿ ಮೌಲ್ಯದ ಎಜಿಡಿ ಫುಲಿ ಆಟೋಮೇಟೆಡ್ ಅನಲೈಸರ್, ಐದು ಲಕ್ಷ ಮೌಲ್ಯದ ಹೆಮೆಟಲಜಿ (ರಕ್ತಶಾಸ್ತ್ರ) ಅನಲೈಸರ್, 59 ಸಾವಿರ ಮೌಲ್ಯದ ಎಲೆಕ್ಟ್ರೋಲೈಟ್ ಕಳವಾಗಿವೆ. ಒಟ್ಟಾರೆಯಾಗಿ 10.59 ಲಕ್ಷ ರೂ. ಮೌಲ್ಯದ ಯಂತ್ರೋಪಕರಣಗಳ ಕಳ್ಳತನವಾಗಿದೆ.

ಆಗಂತುಕರು ಪ್ರಯೋಗಾಲಯದ ಬೀಗ ಮುರಿದು ಕೃತ್ಯ ಎಸಗಿದ್ದಾರೆ, ಯಂತ್ರೋಪಕರಣಗಳ ಕಳ್ಳತನದ ಬಳಿಕ, ಸುಳಿಸುವ ಸಿಗದಂತೆ ಮಾಡಲು ಸಿಸಿಟಿವಿ ಡಿವಿಆರ್ ಅನ್ನೂಬ ಕಳ್ಳರು ಹೊತ್ತೊಯ್ದಿದ್ದಾರೆ.

Raichur: Equipment worth lakhs of rupees including CCTV DVR stolen from government hospital in Devadurga

ದೇವದುರ್ಗ ತಾಲೂಕು ಆಸ್ಪತ್ರೆಯ ಲ್ಯಾಬ್

ಸದ್ಯ ತಾಲೂಕು ವೈದ್ಯಾಧಿಕಾರಿ ಡಾ. ಶಿವಾನಂದ್ ದೇವದುರ್ಗ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅದರಂತೆ, ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ದೇವದುರ್ಗ ಪೊಲೀಸರಿಂದ ಪ್ರಾಥಮಿಕ ಹಂತದ ತನಿಖೆ ಪ್ರಗತಿಯಲ್ಲಿದೆ.

ಇದನ್ನೂ ಓದಿ: ರಾಯಚೂರು: ಫಸ್ಟ್ ನೈಟ್ ವಿಡಿಯೋ ಮಾಡಿಟ್ಟುಕೊಂಡು ಸರ್ಕಾರಿ ಅಧಿಕಾರಿಯಿಂದ ಪತ್ನಿಗೆ ಬ್ಲ್ಯಾಕ್​ಮೇಲ್

ವಿದ್ಯುತ್ ತಂತಿ ತಗುಲಿ 2 ಮೇಕೆಗಳು ಸಾವು

ರಾಯಚೂರಿನ ರಾಲಿಂಗಸುಗೂರು ತಾಲೂಕಿನ ಮಲ್ಲಾಪುರದಲ್ಲಿ ವಿದ್ಯುತ್ ತಂತಿ ತಗುಲಿ 2 ಮೇಕೆಗಳು ಮೃತಪಟ್ಟಿವೆ. ತಿಮ್ಮಣ್ಣ ಪೂಜಾರಿ ಎಂಬುವರಿಗೆ ಸೇರಿದ ಮೇಕೆಗಳು ಮೃತಪಟ್ಟಿವೆ. ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ರೈತ ಮನವಿ ಸಲ್ಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ