AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣ್ಣೆತ್ತಿನ ಅಮಾವಾಸ್ಯೆ ದಿನವೇ ರೈತನ ಎತ್ತುಗಳನ್ನು ಹೊತ್ತೊಯ್ದ ಸಾಲ ನೀಡಿದವ

ಮುಂಗಾರಿನ ವೇಳೆ ಬಿತ್ತನೆ ಸಮಯದಲ್ಲಿ ಬರುವ ಮಣ್ಣೆತ್ತಿನ ಅಮವಾಸ್ಯೆ ರೈತರ ಹಬ್ಬ. ಬುಧವಾರ ಮಣ್ಣೆತ್ತಿನ ಅಮಾವಾಸ್ಯೆಯನ್ನು ರೈತರು ರಾಜ್ಯಾದ್ಯಂತ ಅದ್ಧೂರಿಯಾಗಿ ಆಚರಿಸಿದರು. ಆದರೆ, ಈ ರೈತ ಕುಟುಂಬಕ್ಕೆ ಮಣ್ಣೆತ್ತಿನ ಅಮಾವಾಸ್ಯೆ ದಿನ ಸಾಲಗಾರ ಬಿಗ್ ಶಾಕ್ ಕೊಟ್ಟಿದ್ದಾನೆ. ಏನದು? ಇಲ್ಲಿದೆ ವಿವರ

ಮಣ್ಣೆತ್ತಿನ ಅಮಾವಾಸ್ಯೆ ದಿನವೇ ರೈತನ ಎತ್ತುಗಳನ್ನು ಹೊತ್ತೊಯ್ದ ಸಾಲ ನೀಡಿದವ
ಎತ್ತುಗಳು, ರೈತ ದಂಪತಿ
ಭೀಮೇಶ್​​ ಪೂಜಾರ್
| Updated By: ವಿವೇಕ ಬಿರಾದಾರ|

Updated on: Jun 25, 2025 | 7:43 PM

Share

ರಾಯಚೂರು, ಜೂನ್​ 25: ಸಾಲ ಕಟ್ಟಿಲ್ಲ ಎಂಬ ಒಂದೇ ಕಾರಣಕ್ಕೆ ವ್ಯಕ್ತಿಯೋರ್ವ ಮಣ್ಣೆತ್ತಿನ ಅಮಾವಾಸ್ಯೆ (Mannettina Amavasye) ದಿನವೇ ರೈತ ದಂಪತಿಯ ಎತ್ತುಗಳನ್ನು ಹೊಡೆದುಕೊಂಡು ಹೋಗಿದ್ದಾನೆ. ರಾಯಚೂರು (Raichur) ಜಿಲ್ಲೆಯ ದೇವದುರ್ಗ ತಾಲೂಕಿನ ಮಸರಕಲ್ ಗ್ರಾಮದಲ್ಲಿ ಘಟನೆ ನಡೆದಿದೆ. ಮಸರಕಲ್ ಗ್ರಾಮದ ಮರಿಯಪ್ಪ ಹಾಗೂ ಮರಿಯಮ್ಮ ದಂಪತಿ ಕೃಷಿಯನ್ನು ನಂಬಿಕೊಂಡು ಜೀವನ ಸಾಗಿಸುತ್ತಿದ್ದಾರೆ.

ಮುಂಗಾರು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ರೈತ ದಂಪತಿ ಬಿತ್ತನೆ ಕಾರ್ಯ ಆರಂಭಿಸುವ ತವಕದಲ್ಲಿದ್ದರು. ಆದರೆ, ಸಾಲ ತೀರಿಸಿಲ್ಲ ಅಂತ ಜಯಪ್ಪ ಎಂಬುವರು ಈ ರೈತ ದಂಪತಿಗೆ ಸೇರಿದ ಜೋಡೆತ್ತುಗಳನ್ನು ಹೊಡೆದುಕೊಂಡು ಹೋಗಿದ್ದಾರೆ. ಈ ದಂಪತಿಗೆ ಜಯಪ್ಪ ಐದು ವರ್ಷಗಳ ಹಿಂದೆ ಕರಾರು ಪತ್ರದ ಮೂಲಕ ಬಡ್ಡಿ ಆಧಾರದಲ್ಲಿ ಒಂದು ಲಕ್ಷ ಸಾಲ ಕೊಟ್ಟಿದ್ದರು. ದಂಪತಿ ಪ್ರತಿ ವರ್ಷ ಸಮಯಕ್ಕೆ ಸರಿಯಾಗಿ ಬಡ್ಡಿ ಕಟ್ಟುತ್ತಲೇ ಬಂದಿದ್ದರು. ಆದರೆ, ಈ ವರ್ಷ ಸ್ವಲ್ಪ ಹಣವನ್ನು ರೈತ ಮರಿಯಪ್ಪ, ತುರ್ತು ಪರಿಸ್ಥಿತಿ ಇದೆ ಅಂತ ತನ್ನ ಸಂಬಂಧಿಯ ಓರ್ವ ಮಹಿಳೆಗೆ ನೀಡಿದ್ದಾರೆ. ಮಹಿಳೆ ಹಣ ವಾಪಸ್​ ನೀಡುವಲ್ಲಿ ತಡ ಮಾಡಿದ್ದಾರೆ. ಈ ವಿಚಾರವನ್ನು ಮರಿಯಪ್ಪ ಜಯಪ್ಪಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಚಿನ್ನಾಭರಣ ಹಾಕೊಂಡು ಓಡಾಡಿದ್ರೆ ದಂಡ: ಪೊಲೀಸರ ಸೋಗಿನಲ್ಲಿ ಸುಲಿಗೆ

ಇದನ್ನೂ ಓದಿ
Image
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
Image
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
Image
ಆರ್​ಸಿಬಿ ಫೈನಲ್​ಗೇರಿದ ಖುಷಿಯಲ್ಲಿ ಪೆಟ್ರೋಲ್ ಚೀಲ ಸಿಡಿಸಿದ 8 ಯುವಕರ ಬಂಧನ
Image
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ

ಆದರೂ ಕೂಡ ಜಯಪ್ಪ ರೈತ ದಂಪತಿಯ ಒಂದುವರೆ ಲಕ್ಷ ಮೌಲ್ಯದ ಜೋಡೆತ್ತುಗಳನ್ನು ಹೊಡೆದುಕೊಂಡು ಹೋಗಿದ್ದಾರೆ. ಆಗ, ರೈತ ದಂಪತಿ ಎತ್ತುಗಳನ್ನು ಕೊಡಿಸಿ ಅಂತ ಗಬ್ಬೂರು ಪೊಲೀಸ್ ಠಾಣೆಗೆ ಹೋಗಿದ್ದಾರೆ. ಆದರೆ, ಠಾಣೆಯಲ್ಲಿ ರೈತ ದಂಪತಿಗೆ ಸೂಕ್ತ ಸ್ಪಂದನೆ ದೊರೆಯುವುದಿಲ್ಲ. ಅದಕ್ಕೆ, ರೈತ ದಂಪತಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಕದ ತಟ್ಟಿದ್ದಾರೆ.

ಕೊನೆಗೆ, ಹಿರಿಯ ಅಧಿಕಾರಿಗಳ ಸೂಚನೆ ಮೆರೆಗೆ ಗಬ್ಬೂರು ಪೊಲೀಸರು ಜಯಪ್ಪಗೆ ಎಚ್ಚರಿಕೆ ನೀಡಿ ಎತ್ತುಗಳನ್ನು ವಾಪಸ್ ಕೊಡಿಸಿದ್ದಾರೆ. ಎತ್ತುಗಳು ವಾಪಸ್ ಮನೆಗೆ ಬಂದಿದ್ದು, ರೈತ ದಂಪತಿ ನಿಟ್ಟುಸಿರು ಬಿಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!