AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣ್ಣೆತ್ತಿನ ಅಮಾವಾಸ್ಯೆ ದಿನವೇ ರೈತನ ಎತ್ತುಗಳನ್ನು ಹೊತ್ತೊಯ್ದ ಸಾಲ ನೀಡಿದವ

ಮುಂಗಾರಿನ ವೇಳೆ ಬಿತ್ತನೆ ಸಮಯದಲ್ಲಿ ಬರುವ ಮಣ್ಣೆತ್ತಿನ ಅಮವಾಸ್ಯೆ ರೈತರ ಹಬ್ಬ. ಬುಧವಾರ ಮಣ್ಣೆತ್ತಿನ ಅಮಾವಾಸ್ಯೆಯನ್ನು ರೈತರು ರಾಜ್ಯಾದ್ಯಂತ ಅದ್ಧೂರಿಯಾಗಿ ಆಚರಿಸಿದರು. ಆದರೆ, ಈ ರೈತ ಕುಟುಂಬಕ್ಕೆ ಮಣ್ಣೆತ್ತಿನ ಅಮಾವಾಸ್ಯೆ ದಿನ ಸಾಲಗಾರ ಬಿಗ್ ಶಾಕ್ ಕೊಟ್ಟಿದ್ದಾನೆ. ಏನದು? ಇಲ್ಲಿದೆ ವಿವರ

ಮಣ್ಣೆತ್ತಿನ ಅಮಾವಾಸ್ಯೆ ದಿನವೇ ರೈತನ ಎತ್ತುಗಳನ್ನು ಹೊತ್ತೊಯ್ದ ಸಾಲ ನೀಡಿದವ
ಎತ್ತುಗಳು, ರೈತ ದಂಪತಿ
ಭೀಮೇಶ್​​ ಪೂಜಾರ್
| Edited By: |

Updated on: Jun 25, 2025 | 7:43 PM

Share

ರಾಯಚೂರು, ಜೂನ್​ 25: ಸಾಲ ಕಟ್ಟಿಲ್ಲ ಎಂಬ ಒಂದೇ ಕಾರಣಕ್ಕೆ ವ್ಯಕ್ತಿಯೋರ್ವ ಮಣ್ಣೆತ್ತಿನ ಅಮಾವಾಸ್ಯೆ (Mannettina Amavasye) ದಿನವೇ ರೈತ ದಂಪತಿಯ ಎತ್ತುಗಳನ್ನು ಹೊಡೆದುಕೊಂಡು ಹೋಗಿದ್ದಾನೆ. ರಾಯಚೂರು (Raichur) ಜಿಲ್ಲೆಯ ದೇವದುರ್ಗ ತಾಲೂಕಿನ ಮಸರಕಲ್ ಗ್ರಾಮದಲ್ಲಿ ಘಟನೆ ನಡೆದಿದೆ. ಮಸರಕಲ್ ಗ್ರಾಮದ ಮರಿಯಪ್ಪ ಹಾಗೂ ಮರಿಯಮ್ಮ ದಂಪತಿ ಕೃಷಿಯನ್ನು ನಂಬಿಕೊಂಡು ಜೀವನ ಸಾಗಿಸುತ್ತಿದ್ದಾರೆ.

ಮುಂಗಾರು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ರೈತ ದಂಪತಿ ಬಿತ್ತನೆ ಕಾರ್ಯ ಆರಂಭಿಸುವ ತವಕದಲ್ಲಿದ್ದರು. ಆದರೆ, ಸಾಲ ತೀರಿಸಿಲ್ಲ ಅಂತ ಜಯಪ್ಪ ಎಂಬುವರು ಈ ರೈತ ದಂಪತಿಗೆ ಸೇರಿದ ಜೋಡೆತ್ತುಗಳನ್ನು ಹೊಡೆದುಕೊಂಡು ಹೋಗಿದ್ದಾರೆ. ಈ ದಂಪತಿಗೆ ಜಯಪ್ಪ ಐದು ವರ್ಷಗಳ ಹಿಂದೆ ಕರಾರು ಪತ್ರದ ಮೂಲಕ ಬಡ್ಡಿ ಆಧಾರದಲ್ಲಿ ಒಂದು ಲಕ್ಷ ಸಾಲ ಕೊಟ್ಟಿದ್ದರು. ದಂಪತಿ ಪ್ರತಿ ವರ್ಷ ಸಮಯಕ್ಕೆ ಸರಿಯಾಗಿ ಬಡ್ಡಿ ಕಟ್ಟುತ್ತಲೇ ಬಂದಿದ್ದರು. ಆದರೆ, ಈ ವರ್ಷ ಸ್ವಲ್ಪ ಹಣವನ್ನು ರೈತ ಮರಿಯಪ್ಪ, ತುರ್ತು ಪರಿಸ್ಥಿತಿ ಇದೆ ಅಂತ ತನ್ನ ಸಂಬಂಧಿಯ ಓರ್ವ ಮಹಿಳೆಗೆ ನೀಡಿದ್ದಾರೆ. ಮಹಿಳೆ ಹಣ ವಾಪಸ್​ ನೀಡುವಲ್ಲಿ ತಡ ಮಾಡಿದ್ದಾರೆ. ಈ ವಿಚಾರವನ್ನು ಮರಿಯಪ್ಪ ಜಯಪ್ಪಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಚಿನ್ನಾಭರಣ ಹಾಕೊಂಡು ಓಡಾಡಿದ್ರೆ ದಂಡ: ಪೊಲೀಸರ ಸೋಗಿನಲ್ಲಿ ಸುಲಿಗೆ

ಇದನ್ನೂ ಓದಿ
Image
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
Image
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
Image
ಆರ್​ಸಿಬಿ ಫೈನಲ್​ಗೇರಿದ ಖುಷಿಯಲ್ಲಿ ಪೆಟ್ರೋಲ್ ಚೀಲ ಸಿಡಿಸಿದ 8 ಯುವಕರ ಬಂಧನ
Image
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ

ಆದರೂ ಕೂಡ ಜಯಪ್ಪ ರೈತ ದಂಪತಿಯ ಒಂದುವರೆ ಲಕ್ಷ ಮೌಲ್ಯದ ಜೋಡೆತ್ತುಗಳನ್ನು ಹೊಡೆದುಕೊಂಡು ಹೋಗಿದ್ದಾರೆ. ಆಗ, ರೈತ ದಂಪತಿ ಎತ್ತುಗಳನ್ನು ಕೊಡಿಸಿ ಅಂತ ಗಬ್ಬೂರು ಪೊಲೀಸ್ ಠಾಣೆಗೆ ಹೋಗಿದ್ದಾರೆ. ಆದರೆ, ಠಾಣೆಯಲ್ಲಿ ರೈತ ದಂಪತಿಗೆ ಸೂಕ್ತ ಸ್ಪಂದನೆ ದೊರೆಯುವುದಿಲ್ಲ. ಅದಕ್ಕೆ, ರೈತ ದಂಪತಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಕದ ತಟ್ಟಿದ್ದಾರೆ.

ಕೊನೆಗೆ, ಹಿರಿಯ ಅಧಿಕಾರಿಗಳ ಸೂಚನೆ ಮೆರೆಗೆ ಗಬ್ಬೂರು ಪೊಲೀಸರು ಜಯಪ್ಪಗೆ ಎಚ್ಚರಿಕೆ ನೀಡಿ ಎತ್ತುಗಳನ್ನು ವಾಪಸ್ ಕೊಡಿಸಿದ್ದಾರೆ. ಎತ್ತುಗಳು ವಾಪಸ್ ಮನೆಗೆ ಬಂದಿದ್ದು, ರೈತ ದಂಪತಿ ನಿಟ್ಟುಸಿರು ಬಿಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್