AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಟ್ಟಿ ಚಿನ್ನದ ಗಣಿ ಕಂಪನಿ ವಿರುದ್ಧ ಸಿಡಿದೆದ್ದ ರೈತರು; ಅನಿರ್ದಿಷ್ಟಾವಧಿ ಹೋರಾಟಕ್ಕೆ ಕರೆ!

ರಾಯಚೂರು ಜಿಲ್ಲೆಯ ಹಟ್ಟಿ ಚಿನ್ನದ ಗಣಿ ಕಂಪನಿಯು 390 ಎಕರೆ ಜಮೀನಿಗೆ ಪರಿಹಾರ ನೀಡದೇ ರೈತರ ಗಮನಕ್ಕೆ ತರದೆ ಇಸಿ ದಾಖಲೆಗಳಲ್ಲಿ ಕಂಪನಿ ಹೆಸರು ನಮೂದಿಸಿದೆ ಎಂದು ರೈತರು ಆರೋಪಿಸಿದ್ದಾರೆ. ಇದರಿಂದ ಸಾಲ ಸೌಲಭ್ಯ ಹಾಗೂ ಬೆಳೆ ಪರಿಹಾರ ಸಿಗದೆ ತೊಂದರೆಗೊಳಗಾಗಿರುವ ಸಂತ್ರಸ್ತ ರೈತರು ಜಮೀನಿನ ದಾಖಲೆ ಸರಿಪಡಿಸುವಂತೆ ಆಗ್ರಹಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಮುಂದಾಗಿದ್ದಾರೆ.

ಹಟ್ಟಿ ಚಿನ್ನದ ಗಣಿ ಕಂಪನಿ ವಿರುದ್ಧ ಸಿಡಿದೆದ್ದ ರೈತರು; ಅನಿರ್ದಿಷ್ಟಾವಧಿ ಹೋರಾಟಕ್ಕೆ ಕರೆ!
ಹಟ್ಟಿ ಚಿನ್ನದ ಗಣಿ ಕಂಪನಿ ವಿರುದ್ಧ ಸಿಡಿದೆದ್ದ ರೈತರು
ಭೀಮೇಶ್​​ ಪೂಜಾರ್
| Edited By: |

Updated on: Jul 31, 2026 | 8:32 AM

Share

ಮುಖ್ಯಾಂಶಗಳು

  • ಹಟ್ಟಿ ಚಿನ್ನದ ಗಣಿ ಕಂಪನಿಯ ವಂಚನೆ ವಿರುದ್ಧ ತೀವ್ರವಾಗಿ ಸಿಡಿದೆದ್ದ ರಾಯಚೂರಿನ ರೈತರು.
  • ಪರಿಹಾರವನ್ನು ನೀಡದೇ ಬರೋಬ್ಬರಿ 390 ಎಕರೆ ಭೂಮಿಯ ದಾಖಲೆಯಲ್ಲಿ ಕಂಪನಿಯ ಹೆಸರು ನಮೂದು.
  • ದಾಖಲೆಗಳನ್ನು ತಕ್ಷಣ ಸರಿಪಡಿಸುವಂತೆ ಆಗ್ರಹಿಸಿ ಸಂತ್ರಸ್ತ ರೈತರಿಂದ ಅನಿರ್ದಿಷ್ಟಾವಧಿ ಬೃಹತ್ ಪ್ರತಿಭಟನೆ ಆರಂಭ.

ರಾಯಚೂರು, ಜುಲೈ 31: ದೇಶಕ್ಕೆ ಪ್ರಸಿದ್ಧ ಚಿನ್ನವನ್ನು ನೀಡುವ ಹಟ್ಟಿ ಚಿನ್ನದ ಗಣಿ ಕಂಪನಿಯ (HGML) ವಿರುದ್ಧವೇ ರಾಯಚೂರು ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಮ್ಮ ಭೂ ಹಕ್ಕಿಗಾಗಿ ಬೀದಿಗಿಳಿದು ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ. ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ಗಣಿ ಕಂಪನಿಯ ಮುಖ್ಯ ದ್ವಾರದ ಎದುರು ‘ಹಟ್ಟಿ ಭೂ ಹಕ್ಕು ವಂಚಿತ ರೈತ ಹೋರಾಟ ಸಮಿತಿ’ ನೇತೃತ್ವದಲ್ಲಿ ಬೃಹತ್ ಹೋರಾಟ ನಡೆಯುತ್ತಿದೆ.

ವಂಚನೆ ಆರೋಪ ಮತ್ತು ರೈತರ ಸಂಕಷ್ಟ

ಗಣಿ ಅಭಿವೃದ್ಧಿ ಹೆಸರಿನಲ್ಲಿ ಹಟ್ಟಿ-ಕೋಠಾ ಸೀಮಾಂತರದ ಒಟ್ಟು 1,305 ಎಕರೆ ಜಮೀನನ್ನು ಗುತ್ತಿಗೆ ಪಡೆಯಲಾಗಿತ್ತು. ಈ ಪೈಕಿ 915 ಎಕರೆ ಭೂಮಿಯನ್ನು ಮಾತ್ರ ಭೂಸ್ವಾಧೀನಪಡಿಸಿಕೊಂಡು ರೈತರಿಗೆ ಸೂಕ್ತ ಪರಿಹಾರ ಹಾಗೂ ಉದ್ಯೋಗ ನೀಡಲಾಗಿದೆ. ಇನ್ನುಳಿದ 390 ಎಕರೆ ಜಮೀನನ್ನು ಕಂಪನಿಯು ಸ್ವಾಧೀನಪಡಿಸಿಕೊಳ್ಳದೇ, ರೈತರ ಗಮನಕ್ಕೂ ತರದೆ ಅವರ ಜಮೀನಿನ ಋಣಭಾರ ಪ್ರಮಾಣಪತ್ರದ (EC) ದಾಖಲೆಗಳಲ್ಲಿ ‘ಹಟ್ಟಿ ಚಿನ್ನದ ಗಣಿ’ ಹೆಸರು ನಮೂದಿಸಿಕೊಂಡಿದೆ.

ಸಾಲವೂ ಇಲ್ಲ, ಪರಿಹಾರವೂ ಇಲ್ಲ!

ದಶಕಗಳಿಂದ ಜಮೀನಿನ ಹಕ್ಕು ದಾಖಲೆಗಳಲ್ಲಿ ಗಣಿ ಕಂಪನಿಯ ಹೆಸರು ಇರುವುದರಿಂದ, ರೈತರಿಗೆ ಬ್ಯಾಂಕುಗಳಲ್ಲಿ ಬೆಳೆ ಸಾಲವಾಗಲಿ ಅಥವಾ ಇತರ ಯಾವುದೇ ಸಾಲ ಸೌಲಭ್ಯಗಳಾಗಲಿ ಸಿಗುತ್ತಿಲ್ಲ. ಜಮೀನನ್ನು ಮಾರಾಟ ಮಾಡಲು ಸಾಧ್ಯವಾಗದೆ, ಇತ್ತ ಸರ್ಕಾರದಿಂದ ಸಿಗುವ ಬೆಳೆ ಪರಿಹಾರವೂ ಲಭಿಸದೆ ರೈತರು ಸಂಪೂರ್ಣ ಅತಂತ್ರರಾಗಿದ್ದಾರೆ.

18 ವರ್ಷಗಳಿಂದ ಈ ಸಮಸ್ಯೆಗೆ ಪರಿಹಾರ ಸಿಗದ ಹಿನ್ನೆಲೆಯಲ್ಲಿ, ರೈತರು ತೀವ್ರ ಆಕ್ರೋಶಗೊಂಡಿದ್ದು, ತಕ್ಷಣವೇ ನಮ್ಮ ಜಮೀನಿನ ದಾಖಲೆಗಳಿಂದ ಹಟ್ಟಿ ಕಂಪನಿಯ ಹೆಸರನ್ನು ತೆಗೆದುಹಾಕಬೇಕು ಅಥವಾ ಸಂಪೂರ್ಣ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಪರಿಹಾರ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಬೇಡಿಕೆ ಈಡೇರುವವರೆಗೂ ಹೋರಾಟ ಹಿಂಪಡೆಯುವುದಿಲ್ಲ ಎಂದು ರೈತರು ಎಚ್ಚರಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್