AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಸರ್ಕಾರಿ ಶಾಲೆಯಲ್ಲಿ 1,000 ಕ್ಕೂ ಹೆಚ್ಚು ಮಕ್ಕಳಿಗೆ ಆರೇ ಕೊಠಡಿ; ಸುಡುವ ಬಿಸಿಲಲ್ಲಿ ಕುಳಿತು ಪಾಠ ಕೇಳುತ್ತಿರುವ ವಿದ್ಯಾರ್ಥಿಗಳು

ಸಗಮಕುಂಟಾ ಗ್ರಾಮದ ಶಾಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ಸೇರಿ ಸುಮಾರು 1,053 ಮಕ್ಕಳು ಓದುತ್ತಿದ್ದಾರೆ. ಆದರೆ ಈ ಶಾಲೆಯಲ್ಲಿ ಕೇವಲ ಆರು ತರಗತಿ ಕೊಠಡಿಗಳಿವೆ. ಒಂದೊಂದು ಕೊಠಡಿಯಲ್ಲಿ 100 ಕ್ಕೂ ಹೆಚ್ಚು ಮಕ್ಕಳಿರುತ್ತಾರೆ.

ರಾಯಚೂರು: ಸರ್ಕಾರಿ ಶಾಲೆಯಲ್ಲಿ 1,000 ಕ್ಕೂ ಹೆಚ್ಚು ಮಕ್ಕಳಿಗೆ ಆರೇ ಕೊಠಡಿ; ಸುಡುವ ಬಿಸಿಲಲ್ಲಿ ಕುಳಿತು ಪಾಠ ಕೇಳುತ್ತಿರುವ ವಿದ್ಯಾರ್ಥಿಗಳು
ಶಾಲೆ ಹೊರಗೆ ಕುಳಿತು ಪಾಠ ಕೇಳುತ್ತಿರುವ ವಿದ್ಯಾರ್ಥಿಗಳು
TV9 Web
| Edited By: |

Updated on:Jan 29, 2022 | 3:35 PM

Share

ರಾಯಚೂರು: ತಾಲೂಕಿನ ಸಗಮಕುಂಟಾ ಗ್ರಾಮದ ಸರ್ಕಾರಿ ಶಾಲೆಯಲ್ಲಿ (Government School) ಸಾವಿರಾರು ಮಕ್ಕಳಿದ್ದಾರೆ. ಆದರೆ ಸಾವಿರ ಮಕ್ಕಳಿಗೆ ಕೇವಲ ಆರೇ ಆರು ತರಗತಿ ಕೊಠಡಿಗಳಿವೆ. ಜಾಗವಿಲ್ಲದ ಕಾರಣಕ್ಕೆ ಮೈ ಸುಡುವ ಬಿಸಿನಲಲ್ಲಿ ಕುಳಿತು ಮಕ್ಕಳು ಪಾಠ ಕಲಿಯುತ್ತಿದ್ದಾರೆ. ಸದ್ಯ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಅಂತರ ಕಾಯ್ದುಕೊಳ್ಳಲು ಮೈದಾನದಲ್ಲಿ ಮಕ್ಕಳಿಗೆ ಪಾಠ ಹೇಳಲಾಗುತ್ತಿದೆ. ಮೈದಾನದಲ್ಲಿ ಕೂತು ಪಾಠ ಕೇಳುವುದರಿಂದ ಗ್ರಾಮಸ್ಥರ ಓಡಾಟ, ವಾಹನಗಳ ಓಡಾಟದಿಂದ ಮಕ್ಕಳಿಗೆ ತೀರಾ ತೊಂದರೆಯಾಗುತ್ತಿದೆ. ಹಿರಿಯ ಅಧಿಕಾರಿಗಳಿಗೆ ಈ ಬಗ್ಗೆ ಪತ್ರ ಬರೆದರೂ ಈವರೆಗೆ ಯಾವುದೇ ಕ್ರಮಕೈಗೊಂಡಿಲ್ಲ ಅಂತ ವಿದ್ಯಾರ್ಥಿಗಳು (Students) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಗಮಕುಂಟಾ ಗ್ರಾಮದ ಶಾಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ಸೇರಿ ಸುಮಾರು 1,053 ಮಕ್ಕಳು ಓದುತ್ತಿದ್ದಾರೆ. ಆದರೆ ಈ ಶಾಲೆಯಲ್ಲಿ ಕೇವಲ ಆರು ತರಗತಿ ಕೊಠಡಿಗಳಿವೆ. ಒಂದೊಂದು ಕೊಠಡಿಯಲ್ಲಿ 100 ಕ್ಕೂ ಹೆಚ್ಚು ಮಕ್ಕಳಿರುತ್ತಾರೆ. ಕುಳಿತುಕೊಳ್ಳಲು ಎಲ್ಲರಿಗೂ ಸರಿಯಾಗಿ ಜಾಗವಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಇದೇ ಕಾರಣಕ್ಕೆ ಶಿಕ್ಷಕರು ವಿಧಿಯಿಲ್ಲದೇ ಮಕ್ಕಳನ್ನು ಬಯಲಲ್ಲಿ ಕೂರಿಸಿ ಪಾಠ ಕಲಿಸುತ್ತಿದ್ದಾರೆ.

ಎರಡೇ ಶೌಚಾಲಯ: ವಿದ್ಯಾರ್ಥಿಗಳು ಹಾಗೂ 20ಕ್ಕೂ ಹೆಚ್ಚು ಶಿಬ್ಬಂದಿಗೆ ಇರುವುದು ಎರಡೇ ಶೌಚಾಲಯ. ಹೀಗಾಗಿ ಕೊರೊನಾ ನಿಯಮಗಳನ್ನ ಮಾಡುವವರು ನಮ್ಮ ಪರಿಸ್ಥಿತಿ ನೋಡಿ ಅಂತ ವಿದ್ಯಾರ್ಥಿಗಳು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಾವಿರಾರು ವಿದ್ಯಾರ್ಥಿಗಳ ಜೊತೆ ಅಂಗನವಾಡಿಯೂ ಶಾಲಾ ಆವರಣದಲ್ಲಿಯೇ ಇದೆ. ಈ ಬಗ್ಗೆ ಸಗಮಕುಂಟಾ ಗ್ರಾಮದ ಹಿರಿಯರು, ಶಿಕ್ಷಕರು ಸಾಕಷ್ಟು ಬಾರಿ ಹಿರಿಯ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಏನೂ ಪ್ರಯೋಜನವಾಗಿಲ್ಲ.

ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದೆ. ಈ ಬಗ್ಗೆ ಸೂಕ್ತ ವ್ಯವಸ್ಥೆ ಮಾಡಲು ಸಾಕಷ್ಟು ಬಾರಿ ಅಧಿಕಾರಿಗಳನ್ನು ಭೇಟಿಯಾದರೂ ಯಾವುದೇ ಪ್ರಯೋಜನವಾಗಿಲ್ಲ. ಒಬ್ಬರಿಗೆ ಕೊರೊನಾ ಬಂದರೆ ಇಡೀ ಶಾಲೆಗೆ ಅಂಟುವ ಸ್ಥಿತಿ ಇದೆ. ಕೂಡಲೇ ಇದಕ್ಕೆ ಪರ್ಯಾಯ ಮಾರ್ಗ ಕಲ್ಪಿಸಬೇಕು ಅಂತ ಶಾಲಾ ಮುಖ್ಯ ಶಿಕ್ಷಕರು ಇಕ್ಬಾಲ್ ಒತ್ತಾಯಿಸಿದ್ದಾರೆ.

ಇದನ್ನೂ ಓದಿ

Literature : ಅಭಿಜ್ಞಾನ ; ಪಾದರಸದಂತೆ ಹಗೂರ ತೇಲಿ ಬಂದ ಆ ಹೆಣ್ಣು, ಆ ಸುವಾಸನೆ ಅವನ ನಿರ್ಧಾರಕ್ಕೆ ಮೂಲ ಕಾರಣವಾಯಿತು

‘100’ ಓಟಿಟಿ ಬಿಡುಗಡೆಗೆ ಮುಹೂರ್ತ ಫಿಕ್ಸ್; ಯಾವಾಗ ತೆರೆಗೆ? ಎಲ್ಲಿ ವೀಕ್ಷಿಸಬಹುದು? ಇಲ್ಲಿದೆ ಮಾಹಿತಿ

Published On - 3:35 pm, Sat, 29 January 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ