ನರೇಗಾ ಯೋಜನೆಯಲ್ಲಿ ಅಕ್ರಮ‌ ಕೇಸ್​: ದೇವದುರ್ಗ ತಾಲೂಕಿನ 32 ಪಿಡಿಒಗಳ ಅಮಾನತು

2020ರಿಂದ 2023ರ ಅವಧಿಯಲ್ಲಿ ನರೇಗಾ ಯೋಜನೆಯಲ್ಲಿ ಭ್ರಷ್ಟಾಚಾರ ಪ್ರಕರಣ ನಡೆದಿತ್ತು. ನರೇಗಾ ಯೋಜನೆಯಲ್ಲಿ 150 ಕೋಟಿಗೂ ಅಧಿಕ ಹಣ ಅಕ್ರಮ‌ ಕೇಸ್​ಗೆ ಸಂಬಂಧಿಸಿದಂತೆ ದೇವದುರ್ಗ ತಾಲೂಕಿನ 32 ಪಿಡಿಒಗಳ ಅಮಾನತುಗೊಳಿಸಿ ರಾಯಚೂರು ಜಿ.ಪಂ. CEO ಪಿ.ರಾಹುಲ್ ತುಕಾರಾಂ ಆದೇಶ ಹೊರಡಿಸಿದ್ದಾರೆ. ದೇವದುರ್ಗ ತಾಲೂಕಿನ ಒಟ್ಟು 33 ಗ್ರಾಮ ಪಂಚಾಯಿತಿಗಳಲ್ಲಿ ಅಕ್ರಮ ಪ್ರಕರಣ ನಡೆದಿದೆ.

ನರೇಗಾ ಯೋಜನೆಯಲ್ಲಿ ಅಕ್ರಮ‌ ಕೇಸ್​: ದೇವದುರ್ಗ ತಾಲೂಕಿನ 32 ಪಿಡಿಒಗಳ ಅಮಾನತು
ಅಮಾನತು ಆದವರು, CEO ಪಿ.ರಾಹುಲ್ ತುಕಾರಾಂ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jan 20, 2024 | 3:08 PM

ರಾಯಚೂರು, ಜನವರಿ 20: ನರೇಗಾ ಯೋಜನೆಯಲ್ಲಿ 150 ಕೋಟಿಗೂ ಅಧಿಕ ಹಣ ಅಕ್ರಮ‌ ಕೇಸ್​ಗೆ ಸಂಬಂಧಿಸಿದಂತೆ ದೇವದುರ್ಗ ತಾಲೂಕಿನ 32 ಪಿಡಿಒಗಳ ಅಮಾನತುಗೊಳಿಸಿ ರಾಯಚೂರು ಜಿ.ಪಂ. CEO ಪಿ.ರಾಹುಲ್ ತುಕಾರಾಂ ಆದೇಶ ಹೊರಡಿಸಿದ್ದಾರೆ. ದೇವದುರ್ಗ ತಾಲೂಕಿನ ಒಟ್ಟು 33 ಗ್ರಾಮ ಪಂಚಾಯಿತಿಗಳಲ್ಲಿ ಅಕ್ರಮ ಪ್ರಕರಣ ನಡೆದಿದೆ. 2020ರಿಂದ 2023ರ ಅವಧಿಯಲ್ಲಿ ನರೇಗಾ ಯೋಜನೆಯಲ್ಲಿ ಭ್ರಷ್ಟಾಚಾರ ಪ್ರಕರಣ ನಡೆದಿತ್ತು. ಲೆಕ್ಕ ಪರಿಶೋಧನಾ ಸಮಿತಿಯ ತನಿಖೆಯಿಂದ ಅಕ್ರಮ ಬಹಿರಂಗವಾಗಿತ್ತು.

ದೇವದುರ್ಗ ಠಾಣೆಯಲ್ಲಿ ಇಬ್ಬರು ಗೆಜೆಟೆಡ್ ಅಧಿಕಾರಿಗಳ ವಿರುದ್ಧ ಇತ್ತೀಚೆಗೆ ಎಫ್​ಐಆರ್ ದಾಖಲಾಗಿತ್ತು. ಇದರ ಬೆನ್ನಲ್ಲೇ ನಾಲ್ಕು ಪಿಡಿಓಗಳನ್ನ ಅಮಾನತ್ತು ಕೂಡ ಮಾಡಲಾಗಿತ್ತು. ಜಾಳಹಳ್ಳಿ ಪಂಚಾಯಿತಿ ಪಿಡಿಓ ಪತ್ಯಪ್ಪ ರಾಠೋಡ್, ಶಾವಂತಗೆರಾ ಪಿಡಿಓ ಗುರುಸ್ವಾಮಿ, ಕ್ಯಾದಿಗೆರಾ ಪಿಡಿಓ ಸಿಬಿ ಪಾಟೀಲ್ ಹಾಗೂ ಗಾಣದಾಳ ಪಿಡಿಓ ಮಲ್ಲಪ್ಪ ಅಮಾನತ್ತಾಗಿದ್ದರು.

ಈ ನಾಲ್ಕು ಪಿಡಿಓಗಳ ವಿರುದ್ಧ ಇಲಾಖಾ ತನಿಖೆ, ವಿಚಾರಣೆ ಕಾಯ್ದಿರಿಸಿ ರಾಯಚೂರು ಜಿಲ್ಲಾ ಪಂಚಾಯತ ಸಿಇಓ ಪಾಂಡ್ವೆ ರಾಹುಲ್ ತುಕಾರಾಮ್ ಆದೇಶಿಸಿದ್ದರು. ಆದರೆ ಇದರ ವಿರುದ್ಧ ಈಗ ಪಿಡಿಓಗಳು ಹಾಗೂ ವಿವಿಧ ನೌಕಕರ ಸಂಘಗಳ ಸದಸ್ಯರು ಬೀದಿಗಳಿದು ಹೋರಾಟಕ್ಕೆ ಮುಂದಾಗಿದ್ದರು.

ಇದನ್ನೂ ಓದಿ: ನರೇಗಾ ಯೋಜನೆಯಲ್ಲಿ ಅಕ್ರಮ; ಕಾಮಗಾರಿಯನ್ನೇ ನಡೆಸದೆ ಹಣ ಗುಳುಂ ಮಾಡಿದ ಗ್ರಾಪಂ ಅಧಿಕಾರಿಗಳು !

ದೇವದುರ್ಗ ತಾಲ್ಲೂಕಿನ 33 ಗ್ರಾ.ಪಂಚಾಯಿತಿಗಳಲ್ಲಿ ಅನುಷ್ಠಾನಗೊಂಡ ಒಟ್ಟು 5385 ಕಾಮಗಾರಿಗಳಲ್ಲಿ ಭಾರೀ ಅಕ್ರಮ ನಡೆದಿದ್ದು ಸುಮಾರು 100 ಕೋಟಿಗೂ ಅಧಿಕ ಹಣ ದುರುಪಯೋಗವಾಗಿದೆ ಅಂತ ಸಾಮಾಜಿಕ ಪರಿಶೋಧನಾ ಸಮೀತಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಆ ಪೈಕಿ 32 ಗ್ರಾಮ ಪಂಚಾಯತಿಗಳ ಕಾಮಗಾರಿಗಳ ಸಾಮಾಗ್ರಿಗಳನ್ನು ಒಂದೇ ಸಂಸ್ಥೆಯಲ್ಲಿ ಖರೀದಿಸಲಾಗಿತ್ತು.

ಒಟ್ಟು 102.32 ಕೋಟಿ ರೂ. ಅನ್ನ ಮಾರುತೇಶ್ವರ ಎಂಟರ್ ಪ್ರೈಸಸ್ ಅನ್ನೋ ಒಂದೇ ಸಂಸ್ಥೆಗೆ ಪಾವತಿಸುವುದರೊಳಗೆ ಬೆಳಕಿಗೆ ಬಂದಿತ್ತು. ಕಡತಗಳನ್ನು ನಿರ್ವಹಿಸದೇ 32.51 ಕೋಟಿ ರೂ.ಪಾವತಿ. ಅಂದಾಜು ಮೊತ್ತಕ್ಕಿಂತ ಹೆಚ್ಚುವರಿಯಾಗಿ 11.64 ಕೋಟಿ ರೂ. ಪಾವತಿ ಮಾಡಿರುವುದನ್ನೂ ಪತ್ತೆಹಚ್ಚಲಾಗಿತ್ತು. ಇದರ ಜೊತೆ ಸರ್ಕಾರಕ್ಕೆ 5.10 ಕೋಟಿ ರೂ. ತೆರಿಗೆ ವಂಚಿಸಲಾಗಿತ್ತು.

ಇದನ್ನೂ ಓದಿ: Koppal News: ನರೇಗಾ ಯೋಜನೆಯಡಿ ಪ್ರವಾಸಿಗರಿಗಾಗಿ ನಿರ್ಮಾಣವಾಯಿತು ಹೈಟೆಕ್ ಉದ್ಯಾನವನ

ನಕಲಿ ಜಾಬ್ ಕಾರ್ಡ್ ಸೃಷ್ಟಿ, ಫಲಾನುಭವಿಗಳಿಗೆ ಹಣ ಹಾಕದೇ ಸಾಮಾಗ್ರಿ ಪೂರೈಕೆದಾರರಿಗೆ ಹಣ ಸಂದಾಸಿದ್ದಲ್ಲದೇ, ಶೇಕಡಾ 95 ರಷ್ಟು ಕಾಮಗಾರಿಗಳಿಗೆ ನಾಮಫಲಕ ಅಳವಡಿಸದೇ ಪ್ರತಿ ನಾಮಫಲಕಕ್ಕೆ 5000 ರೂ.ಪಾವತಿಸಲಾಗಿತ್ತು. ಹೀಗೆ ವಿವಿಧ ವಿಧಾನಗಳಲ್ಲಿ 49 ಕೋಟಿ 27 ಲಕ್ಷ ರೂ. ಹಣ ದುರುಪಯೋಗವಾಗಿರೋದನ್ನ ಬಯಲಿಗೆಳೆಯಲಾಗಿತ್ತು. ಆದರೆ ಈ ವರದಿಯೇ ಅವೈಜ್ಞಾನಿಕ ಅಂತ ಪಿಡಿಓಗಳು ಹಾಗೂ ವಿವಿಧ ನೌಕಕರ ಸಂಘಟಗಳು ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ್ದರು.

ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ನೂರಾರು ಜನ ಸರ್ಕಾರಕ್ಕೆ ಸಲ್ಲಿಕೆಯಾದ ವರದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಸಾಮಾಜಿಕ ಪರಿಶೋಧನಾ ಸಮಿತಿಯ ವರದಿ ಅವೈಜ್ಞಾನಿಕವಾಗಿತ್ತು. ಇದು ಸುಳ್ಳು ವರದಿ. ವಾಸ್ತವದಲ್ಲಿರೋದಕ್ಕೂ ವರದಿಯಲ್ಲಿರೋದಕ್ಕೂ ವ್ಯತ್ಯಾಸವಿದೆ ಅಂತ ಆರೋಪಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ