AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಕಾನ್ಸ್​​​ಟೇಬಲ್ ಮೇಲೆ ಜೆಡಿಎಸ್​​​ ಶಾಸಕಿ ಕರೆಮ್ಮ ಪುತ್ರನಿಂದ ಹಲ್ಲೆ​

ರಾಯಚೂರು ಜಿಲ್ಲೆಯ ದೇವದುರ್ಗ ವಿಧಾನಸಭಾ ಕ್ಷೇತ್ರದ ಜೆಡಿಎಸ್​​ ಶಾಸಕಿ ಕರೆಮ್ಮ ನಾಯಕ್ ಅವರ ಪುತ್ರ ಸಂತೋಷ್ ದೇವದುರ್ಗ ಪೊಲೀಸ್​ ಠಾಣೆಯ ಕರ್ತವ್ಯನಿರತ ಕಾನ್ಸ್​​​ಟೇಬಲ್​ ಹನುಮಂತರಾಯ ಅವರನ್ನು ಪ್ರವಾಸಿ ಮಂದಿರಕ್ಕೆ ಕರೆಸಿಕೊಂಡು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

ರಾಯಚೂರು: ಕಾನ್ಸ್​​​ಟೇಬಲ್ ಮೇಲೆ ಜೆಡಿಎಸ್​​​ ಶಾಸಕಿ ಕರೆಮ್ಮ ಪುತ್ರನಿಂದ ಹಲ್ಲೆ​
ಕಾನ್ಸ್​​​ಟೇಬಲ್​ ಹನುಮಂತರಾಯ, ಶಾಸಕಿ ಪುತ್ರ ಸಂತೋಷ್​
TV9 Web
| Updated By: ವಿವೇಕ ಬಿರಾದಾರ|

Updated on:Feb 12, 2024 | 9:31 AM

Share

ರಾಯಚೂರು, ಫೆಬ್ರವರಿ 12: ದೇವದುರ್ಗ (Devadurga) ವಿಧಾನಸಭಾ ಕ್ಷೇತ್ರದ ಜೆಡಿಎಸ್ (JDS)​​ ಶಾಸಕಿ ಕರೆಮ್ಮ ನಾಯಕ್ (Karemma Nayak) ಅವರ ಪುತ್ರ ಸಂತೋಷ್, ಪಿಎ ಇಲಿಯಾಸ್ ಸೇರಿದಂತೆ ಎಂಟು ಜನರು ದೇವದುರ್ಗ ಪೊಲೀಸ್​ ಠಾಣೆಯ ಕರ್ತವ್ಯನಿರತ ಕಾನ್ಸ್​​​ಟೇಬಲ್​ (Devadurga Police Constable) ಹನುಮಂತರಾಯ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದ ಬಳಿಕ, ರಾಜಕೀಯ ಪ್ರಭಾವ ಬಳಸಿ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಹಲ್ಲೆಗೊಳಗಾದ ಕಾನ್ಸ್​​​ಟೇಬಲ್​ ಹನುಮಂತರಾಯ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಾನ್ಸ್​ಟೇಬಲ್ ಹನುಮಂತರಾಯ ಅವರು ರವಿವಾರ (ಫೆ.11) ರಂದು ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್​ ಅನ್ನು​ ತಡೆದಿದ್ದರು. ಟ್ರ್ಯಾಕ್ಟರ್​ ತಡೆಹಿಡಿದ ವಿಚಾರಕ್ಕೆ ಶಾಸಕಿ ಪುತ್ರ ಸಂತೋಷ್​​ ಕಾನ್ಸ್​ಟೇಬಲ್ ಹನುಮಂತರಾಯ ಅವರಿಗೆ ​ಕರೆ ಮಾಡಿ ಟ್ರ್ಯಾಕ್ಟರ್​ ಬಿಡುವಂತೆ ಹೇಳಿದ್ದಾರೆ. ಒತ್ತಡಕ್ಕೆ ಮಣಿಯದ ಕಾನ್ಸ್​ಟೇಬಲ್ ಹನುಮಂತರಾಯ ಅವರು ಟ್ರ್ಯಾಕ್ಟರ್​ ಅನ್ನು ಪೊಲೀಸ್​ ಠಾಣೆಗೆ ತಂದು ಪರಿಶೀಲನೆ ನಡೆಸಿದ್ದಾರೆ. ಇದರಿಂದ ಆಕ್ರೋಶಗೊಂಡ ಶಾಸಕಿ ಪುತ್ರ ಸಂತೋಷ್​ ಕಾನ್ಸ್​ಟೇಬಲ್ ಹನುಮಂತರಾಯ ಅವರನ್ನು​ ದೇವದುರ್ಗ ಪ್ರವಾಸಿ ಮಂದಿರಕ್ಕೆ ಕರೆಸಿಕೊಂಡು ಹಲ್ಲೆ ಮಾಡಿದ್ದಾರೆ. ಪ್ರಕರಣ ಸಂಬಂಧ ಶಾಸಕಿ ಕರೆಮ್ಮ ನಾಯಕ್ ಪುತ್ರ ಸಂತೋಷ್ ವಿರುದ್ಧ ದೇವದುರ್ಗ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.  ಎ1 ಸಂತೋಷ್, ಎ5 ಶಾಸಕಿ ಪಿಎ ಇಲಿಯಾಸ್ ಎಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಹೆಡ್​​ಕಾನ್ಸ್​ಟೇಬಲ್​ ಹತ್ಯೆ ಪ್ರಕರಣ, ಆರೋಪಿ ಕಾಲಿಗೆ ಫೈರಿಂಗ್

ಪೊಲೀಸರ ವಿರುದ್ಧ ಶಾಸಕಿ ಕರೆಮ್ಮ ನಾಯಕ್ ಪ್ರತಿಭಟನೆ

ಇನ್ನು ಪೊಲೀಸರ ವಿರುದ್ಧ ಶಾಸಕಿ ಕರೆಮ್ಮ ನಾಯಕ್ ಬೆಂಬಲಿಗರ ಜೊತೆ ಕಳೆದ ರಾತ್ರಿ ದೇವದುರ್ಗ ಠಾಣೆ ಎದುರು  ಪ್ರತಿಭಟನೆ ನಡೆಸಿದರು. ಬೇಕಂತಲೆ ಪೊಲೀಸರು ಪಿತೂರಿ ಮಾಡಿ ಈ ರೀತಿ ಆರೋಪ ಮಾಡಿದ್ದಾರೆ. ಪೊಲೀಸ್ ಕಾನ್ಸ್ ಟೇಬಲ್ ಮುಂದೆ ಬಿಟ್ಟು ಕುತಂತ್ರ ರೂಪಿಸಿದ್ದಾರೆ. ಈ ಕೃತ್ಯ ರಾಜಕೀಯ ಪ್ರೇರಿತ ಎಂದು ಶಾಸಕಿ ಕರೆಮ್ಮ ನಾಯಕ್ ಆರೋಪ ಮಾಡಿದ್ದಾರೆ.

ಹೆಡ್​ಕಾನ್ಸ್​ಟೇಬಲ್​ ಮೇಲೆ ಟ್ಯ್ರಾಕ್ಟರ್​​​ ಹರಿಸಿದ ಅಕ್ರಮ ಮರಳು ದಂಧೆಕೋರರು

ಕಲಬುರಗಿ: ಕಳೆದ ವರ್ಷ 2023ರ ಜೂನ್​ ತಿಂಗಳಿನಲ್ಲಿ ಜೇವರ್ಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಳಿ ನಡೆಯುತ್ತಿದ್ದ ದುಷ್ಕರ್ಮಿಗಳು ಭೀಮಾ ನದಿಯಿಂದ ಟ್ರ್ಯಾಕ್ಟರ್​ನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದರು. ಇದನ್ನು ತಡೆಯಲು ಹೆಚ್​ಸಿ ಮೈಸೂರು ಚೌಹಾಣ್, ಪಿಸಿ ಪ್ರಮೋದ್ ದೊಡ್ಮನಿ ಅವರಿಬ್ಬರು ರಾತ್ರಿ 10 ಗಂಟೆ ಸುಮಾರಿಗೆ ಬೈಕ್​ನಲ್ಲಿ ತೆರಳಿದ್ದರು.

ಈ ವೇಳೆ ದುಷ್ಕರ್ಮಿಗಳು ಪೊಲೀಸರಿದ್ದ ಬೈಕ್​ ಮೇಲೆ ಮರಳು ಟ್ರ್ಯಾಕ್ಟರ್​ ಹತ್ತಿಸಿದ್ದರು. ನೆಲೋಗಿ ಠಾಣೆ ಹೆಡ್​ಕಾನ್ಸ್​ಟೇಬಲ್​ ಮೈಸೂರು ಚೌಹಾಣ್​ (51) ಸ್ಥಳದಲ್ಲೇ ಮೃಪಟ್ಟರು. ಇನ್ನು ಕಾನ್ಸ್​ಟೇಬಲ್​ ಪ್ರಮೋದ್ ದೊಡ್ಮನಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆರೋಪಿ ಸಿದ್ದಪ್ಪ, ಸಾಯಿಬಣ್ಣನನ್ನು ನೆಲೋಗಿ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಇಬ್ಬರೂ ಆರೋಪಿಗಳ ಮೇಲೆ ಕೊಲೆ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:30 am, Mon, 12 February 24

ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್