AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಕಾನ್ಸ್​​​ಟೇಬಲ್ ಮೇಲೆ ಜೆಡಿಎಸ್​​​ ಶಾಸಕಿ ಕರೆಮ್ಮ ಪುತ್ರನಿಂದ ಹಲ್ಲೆ​

ರಾಯಚೂರು ಜಿಲ್ಲೆಯ ದೇವದುರ್ಗ ವಿಧಾನಸಭಾ ಕ್ಷೇತ್ರದ ಜೆಡಿಎಸ್​​ ಶಾಸಕಿ ಕರೆಮ್ಮ ನಾಯಕ್ ಅವರ ಪುತ್ರ ಸಂತೋಷ್ ದೇವದುರ್ಗ ಪೊಲೀಸ್​ ಠಾಣೆಯ ಕರ್ತವ್ಯನಿರತ ಕಾನ್ಸ್​​​ಟೇಬಲ್​ ಹನುಮಂತರಾಯ ಅವರನ್ನು ಪ್ರವಾಸಿ ಮಂದಿರಕ್ಕೆ ಕರೆಸಿಕೊಂಡು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

ರಾಯಚೂರು: ಕಾನ್ಸ್​​​ಟೇಬಲ್ ಮೇಲೆ ಜೆಡಿಎಸ್​​​ ಶಾಸಕಿ ಕರೆಮ್ಮ ಪುತ್ರನಿಂದ ಹಲ್ಲೆ​
ಕಾನ್ಸ್​​​ಟೇಬಲ್​ ಹನುಮಂತರಾಯ, ಶಾಸಕಿ ಪುತ್ರ ಸಂತೋಷ್​
TV9 Web
| Updated By: ವಿವೇಕ ಬಿರಾದಾರ|

Updated on:Feb 12, 2024 | 9:31 AM

Share

ರಾಯಚೂರು, ಫೆಬ್ರವರಿ 12: ದೇವದುರ್ಗ (Devadurga) ವಿಧಾನಸಭಾ ಕ್ಷೇತ್ರದ ಜೆಡಿಎಸ್ (JDS)​​ ಶಾಸಕಿ ಕರೆಮ್ಮ ನಾಯಕ್ (Karemma Nayak) ಅವರ ಪುತ್ರ ಸಂತೋಷ್, ಪಿಎ ಇಲಿಯಾಸ್ ಸೇರಿದಂತೆ ಎಂಟು ಜನರು ದೇವದುರ್ಗ ಪೊಲೀಸ್​ ಠಾಣೆಯ ಕರ್ತವ್ಯನಿರತ ಕಾನ್ಸ್​​​ಟೇಬಲ್​ (Devadurga Police Constable) ಹನುಮಂತರಾಯ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದ ಬಳಿಕ, ರಾಜಕೀಯ ಪ್ರಭಾವ ಬಳಸಿ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಹಲ್ಲೆಗೊಳಗಾದ ಕಾನ್ಸ್​​​ಟೇಬಲ್​ ಹನುಮಂತರಾಯ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಾನ್ಸ್​ಟೇಬಲ್ ಹನುಮಂತರಾಯ ಅವರು ರವಿವಾರ (ಫೆ.11) ರಂದು ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್​ ಅನ್ನು​ ತಡೆದಿದ್ದರು. ಟ್ರ್ಯಾಕ್ಟರ್​ ತಡೆಹಿಡಿದ ವಿಚಾರಕ್ಕೆ ಶಾಸಕಿ ಪುತ್ರ ಸಂತೋಷ್​​ ಕಾನ್ಸ್​ಟೇಬಲ್ ಹನುಮಂತರಾಯ ಅವರಿಗೆ ​ಕರೆ ಮಾಡಿ ಟ್ರ್ಯಾಕ್ಟರ್​ ಬಿಡುವಂತೆ ಹೇಳಿದ್ದಾರೆ. ಒತ್ತಡಕ್ಕೆ ಮಣಿಯದ ಕಾನ್ಸ್​ಟೇಬಲ್ ಹನುಮಂತರಾಯ ಅವರು ಟ್ರ್ಯಾಕ್ಟರ್​ ಅನ್ನು ಪೊಲೀಸ್​ ಠಾಣೆಗೆ ತಂದು ಪರಿಶೀಲನೆ ನಡೆಸಿದ್ದಾರೆ. ಇದರಿಂದ ಆಕ್ರೋಶಗೊಂಡ ಶಾಸಕಿ ಪುತ್ರ ಸಂತೋಷ್​ ಕಾನ್ಸ್​ಟೇಬಲ್ ಹನುಮಂತರಾಯ ಅವರನ್ನು​ ದೇವದುರ್ಗ ಪ್ರವಾಸಿ ಮಂದಿರಕ್ಕೆ ಕರೆಸಿಕೊಂಡು ಹಲ್ಲೆ ಮಾಡಿದ್ದಾರೆ. ಪ್ರಕರಣ ಸಂಬಂಧ ಶಾಸಕಿ ಕರೆಮ್ಮ ನಾಯಕ್ ಪುತ್ರ ಸಂತೋಷ್ ವಿರುದ್ಧ ದೇವದುರ್ಗ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.  ಎ1 ಸಂತೋಷ್, ಎ5 ಶಾಸಕಿ ಪಿಎ ಇಲಿಯಾಸ್ ಎಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಹೆಡ್​​ಕಾನ್ಸ್​ಟೇಬಲ್​ ಹತ್ಯೆ ಪ್ರಕರಣ, ಆರೋಪಿ ಕಾಲಿಗೆ ಫೈರಿಂಗ್

ಪೊಲೀಸರ ವಿರುದ್ಧ ಶಾಸಕಿ ಕರೆಮ್ಮ ನಾಯಕ್ ಪ್ರತಿಭಟನೆ

ಇನ್ನು ಪೊಲೀಸರ ವಿರುದ್ಧ ಶಾಸಕಿ ಕರೆಮ್ಮ ನಾಯಕ್ ಬೆಂಬಲಿಗರ ಜೊತೆ ಕಳೆದ ರಾತ್ರಿ ದೇವದುರ್ಗ ಠಾಣೆ ಎದುರು  ಪ್ರತಿಭಟನೆ ನಡೆಸಿದರು. ಬೇಕಂತಲೆ ಪೊಲೀಸರು ಪಿತೂರಿ ಮಾಡಿ ಈ ರೀತಿ ಆರೋಪ ಮಾಡಿದ್ದಾರೆ. ಪೊಲೀಸ್ ಕಾನ್ಸ್ ಟೇಬಲ್ ಮುಂದೆ ಬಿಟ್ಟು ಕುತಂತ್ರ ರೂಪಿಸಿದ್ದಾರೆ. ಈ ಕೃತ್ಯ ರಾಜಕೀಯ ಪ್ರೇರಿತ ಎಂದು ಶಾಸಕಿ ಕರೆಮ್ಮ ನಾಯಕ್ ಆರೋಪ ಮಾಡಿದ್ದಾರೆ.

ಹೆಡ್​ಕಾನ್ಸ್​ಟೇಬಲ್​ ಮೇಲೆ ಟ್ಯ್ರಾಕ್ಟರ್​​​ ಹರಿಸಿದ ಅಕ್ರಮ ಮರಳು ದಂಧೆಕೋರರು

ಕಲಬುರಗಿ: ಕಳೆದ ವರ್ಷ 2023ರ ಜೂನ್​ ತಿಂಗಳಿನಲ್ಲಿ ಜೇವರ್ಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಳಿ ನಡೆಯುತ್ತಿದ್ದ ದುಷ್ಕರ್ಮಿಗಳು ಭೀಮಾ ನದಿಯಿಂದ ಟ್ರ್ಯಾಕ್ಟರ್​ನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದರು. ಇದನ್ನು ತಡೆಯಲು ಹೆಚ್​ಸಿ ಮೈಸೂರು ಚೌಹಾಣ್, ಪಿಸಿ ಪ್ರಮೋದ್ ದೊಡ್ಮನಿ ಅವರಿಬ್ಬರು ರಾತ್ರಿ 10 ಗಂಟೆ ಸುಮಾರಿಗೆ ಬೈಕ್​ನಲ್ಲಿ ತೆರಳಿದ್ದರು.

ಈ ವೇಳೆ ದುಷ್ಕರ್ಮಿಗಳು ಪೊಲೀಸರಿದ್ದ ಬೈಕ್​ ಮೇಲೆ ಮರಳು ಟ್ರ್ಯಾಕ್ಟರ್​ ಹತ್ತಿಸಿದ್ದರು. ನೆಲೋಗಿ ಠಾಣೆ ಹೆಡ್​ಕಾನ್ಸ್​ಟೇಬಲ್​ ಮೈಸೂರು ಚೌಹಾಣ್​ (51) ಸ್ಥಳದಲ್ಲೇ ಮೃಪಟ್ಟರು. ಇನ್ನು ಕಾನ್ಸ್​ಟೇಬಲ್​ ಪ್ರಮೋದ್ ದೊಡ್ಮನಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆರೋಪಿ ಸಿದ್ದಪ್ಪ, ಸಾಯಿಬಣ್ಣನನ್ನು ನೆಲೋಗಿ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಇಬ್ಬರೂ ಆರೋಪಿಗಳ ಮೇಲೆ ಕೊಲೆ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:30 am, Mon, 12 February 24

IND vs ENG: ಇಂಡಿಯಾ ವಿರುದ್ಧ ಇಂಗ್ಲೆಂಡ್ ಮೋಸದಾಟ... ಆದ್ರೂ ಗೆಲ್ಲಲಿಲ್ಲ..
IND vs ENG: ಇಂಡಿಯಾ ವಿರುದ್ಧ ಇಂಗ್ಲೆಂಡ್ ಮೋಸದಾಟ... ಆದ್ರೂ ಗೆಲ್ಲಲಿಲ್ಲ..
ಟೀಮ್ ಇಂಡಿಯಾ ಆಟಗಾರರ ಶತಕ ತಪ್ಪಿಸಲು ಮುಂದಾಗಿದ್ದ ಸ್ಟೋಕ್ಸ್
ಟೀಮ್ ಇಂಡಿಯಾ ಆಟಗಾರರ ಶತಕ ತಪ್ಪಿಸಲು ಮುಂದಾಗಿದ್ದ ಸ್ಟೋಕ್ಸ್
ವರಮಹಾಲಕ್ಷ್ಮೀ ಹಬ್ಬ ಆಚರಣೆ ದಿನಾಂಕ ಯಾವಾಗ? ಆಚರಣೆ ಹೇಗೆ , ಫಲಗಳೇನು?
ವರಮಹಾಲಕ್ಷ್ಮೀ ಹಬ್ಬ ಆಚರಣೆ ದಿನಾಂಕ ಯಾವಾಗ? ಆಚರಣೆ ಹೇಗೆ , ಫಲಗಳೇನು?
ಇಂದು ವಿನಾಯಕಿ ಚತುರ್ಥಿ: ದ್ವಾದಶ ರಾಶಿ ಭವಿಷ್ಯ ಹೇಗಿದೆ ನೋಡಿ
ಇಂದು ವಿನಾಯಕಿ ಚತುರ್ಥಿ: ದ್ವಾದಶ ರಾಶಿ ಭವಿಷ್ಯ ಹೇಗಿದೆ ನೋಡಿ
ಪ್ರಥಮ್​ ಮೇಲೆ ಅಟ್ಯಾಕ್: ಅಲ್ಲೇ ಇದ್ದರು ರಕ್ಷಕ್ ಸುಮ್ಮನಿದ್ದಿದ್ದು ಏಕೆ?
ಪ್ರಥಮ್​ ಮೇಲೆ ಅಟ್ಯಾಕ್: ಅಲ್ಲೇ ಇದ್ದರು ರಕ್ಷಕ್ ಸುಮ್ಮನಿದ್ದಿದ್ದು ಏಕೆ?
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್