AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raichur News: ಜೀವದ ಹಂಗು ತೊರೆದು ಶಾಲೆಗೆ ಹೋಗುತ್ತಿರುವ ವಿದ್ಯಾರ್ಥಿಗಳು: ಸೇತುವೆ ಇಲ್ಲದೇ ವಿದ್ಯಾರ್ಥಿಗಳ ಪರದಾಟ

ರಾತ್ರಿ ಊಟ ಸೇವಿಸಿದ್ದ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿರುವಂತಹ ಘಟನೆ ಹಳಿಯಾಳದ ಪರಿಶಿಷ್ಟ ವರ್ಗ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ನಡೆದಿದೆ.

Raichur News: ಜೀವದ ಹಂಗು ತೊರೆದು ಶಾಲೆಗೆ ಹೋಗುತ್ತಿರುವ ವಿದ್ಯಾರ್ಥಿಗಳು: ಸೇತುವೆ ಇಲ್ಲದೇ ವಿದ್ಯಾರ್ಥಿಗಳ ಪರದಾಟ
ಪ್ರಾಣದ ಹಂಗು ತೊರೆದು ಹಳ್ಳ ದಾಟುತ್ತಿರುವ ವಿದ್ಯಾರ್ಥಿಗಳು.
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Jul 19, 2022 | 10:22 AM

Share

ರಾಯಚೂರು: ಹಳ್ಳ ದಾಟಿ ಶಾಲೆಗೆ ಹೋಗಲು ವಿದ್ಯಾರ್ಥಿಗಳು (Students) ಪರದಾಡುತ್ತಿರುವಂತಹ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ದೇವರಗುಡಿ ಗ್ರಾಮದಲ್ಲಿ ನಡೆದಿದೆ. ಪ್ಯಾಂಟ್ ಬಿಚ್ಚಿ ಕೈಯಲ್ಲಿ ಹಿಡಿದುಕೊಂಡು ಮಕ್ಕಳು ಹಳ್ಳ ದಾಟುವಂತಹ ಪರಿಸ್ಥತಿ ನಿರ್ಮಾಣವಾಗಿದೆ. ಜಿಲ್ಲೆಯ ದೇವರಗುಡಿ ಗ್ರಾಮದಿಂದ ಪಗಡದಿನ್ನಿ ಗ್ರಾಮದ ಶಾಲೆಗೆ ಹೈಸ್ಕೂಲ್ ವಿದ್ಯಾರ್ಥಿಗಳು ಹೋಗುತ್ತಿದ್ದು, 1-7 ವರೆಗೆ ದೇವರಗುಡಿಯಲ್ಲೇ ಪ್ರಾಥಮಿಕವರೆಗಿದೆ. 8-10 ಹೈಸ್ಕೂಲ್​ಗಾಗಿ ಪಗಡದಿನ್ನಿ ಗ್ರಾಮಕ್ಕೆ ವಿದ್ಯಾರ್ಥಿಗಳು ಹೋಗುತ್ತಾರೆ. ದೇವರಗುಡಿ, ಮಲ್ಲಾಪುರ ಕ್ಯಾಂಪ್, ದುಗ್ಗಮ್ಮನ ಗುಂಡಾ ಸೇರಿ ನಾಲ್ಕೈದು ಹಳ್ಳಿಗಳ ಮಕ್ಕಳ ಸ್ಥಿತಿ ಅಯೋಮಯವಾಗಿದ್ದು, ಸೇತುವೆ, ರಸ್ತೆ ಇಲ್ಲದ ಹಿನ್ನೆಲೆ ಪ್ಯಾಂಟ್ ಕಳಚಿ ಅರೆಬೆತ್ತಲೆಯಾಗಿ ಮಕ್ಕಳು ಹಳ್ಳವನ್ನು ದಾಟುತ್ತಾರೆ. ಜೊತೆಗೆ ಜೀವ ಪಣಕ್ಕಿಟ್ಟು ಶಾಲೆಗೆ ತೆರಳಬೇಕಾದ ದುಸ್ಥಿತಿ ನಿರ್ಮಾಣವಾಗಿದ್ದು, ಸೂಕ್ತ ರಸ್ತೆ, ಸೇತುವೆ ಇಲ್ಲದ ಕಾರಣ ಹಳ್ಳ ದಾಟಿಕೊಂಡು ಹೋಗೊ ಅನಿವಾರ್ಯತೆ ಉಂಟಾಗಿದೆ. ಕೂಡಲೇ ಈ ಬಗ್ಗೆ ಕ್ರಮಕೈಗೊಳ್ಳುವಂತೆ ದೇವರಗುಡಿ, ಸೇರಿ ಸುತ್ತಲಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಹಾಸ್ಟೆಲ್​​ನಲ್ಲಿ ಊಟ ಸೇವಿಸಿದ್ದ ವಿದ್ಯಾರ್ಥಿಗಳಿಗೆ ವಾಂತಿ-ಭೇದಿ

ಕಾರವಾರ: ರಾತ್ರಿ ಊಟ ಸೇವಿಸಿದ್ದ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿರುವಂತಹ ಘಟನೆ ಹಳಿಯಾಳದ ಪರಿಶಿಷ್ಟ ವರ್ಗ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ನಡೆದಿದೆ. ಮೂವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ವಾಂತಿ-ಭೇದಿ ಉಂಟಾಗಿದ್ದು, ಹಳಿಯಾಳದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲು ಮಾಡಿ, ಚಿಕಿತ್ಸೆ ನೀಡಲಾಗಿದೆ. ಹಾಸ್ಟೆಲ್ ಅವ್ಯವಸ್ಥೆ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ