ಲಂಚ ಪಡೆಯುತ್ತಾ ರೆಡ್​ಹ್ಯಾಂಡೆಡ್ ಆಗಿ ಸಿಕ್ಕ ಆಫೀಸರ್; ಸಿನಿಮೀಯ ರೀತಿಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದ ಲೋಕಾಯುಕ್ತ!

ರಾಯಚೂರಿನ ಸಿರವಾರ ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ಸುರೇಶ್ ಶೆಟ್ಟಿ, ಖಾತಾ ಮ್ಯೂಟೇಶನ್‌ಗೆ 2 ಲಕ್ಷ ರೂ. ಲಂಚ ಕೇಳಿದ್ದ ಆರೋಪದಡಿ ಲೋಕಾಯುಕ್ತರಿಂದ ಬಂಧನಕ್ಕೊಳಗಾಗಿದ್ದಾರೆ. ದಾಳಿ ವೇಳೆ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದ ಶೆಟ್ಟಿ, ಮೊಬೈಲ್ ಲೊಕೇಶನ್ ಟ್ರೇಸ್ ಮೂಲಕ ಕವಿತಾಳದ ತನ್ನ ಸ್ನೇಹಿತರ ಮನೆಯಲ್ಲಿ ಸಿಕ್ಕಿಬಿದ್ದಿದ್ದಾರೆ.

ಲಂಚ ಪಡೆಯುತ್ತಾ ರೆಡ್​ಹ್ಯಾಂಡೆಡ್ ಆಗಿ ಸಿಕ್ಕ ಆಫೀಸರ್; ಸಿನಿಮೀಯ ರೀತಿಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದ ಲೋಕಾಯುಕ್ತ!
ಲಂಚ ಪಡೆಯುತ್ತಾ ರೆಡ್​ಹ್ಯಾಂಡೆಡ್ ಆಗಿ ಸಿಕ್ಕ ಆಫೀಸರ್ ಸುರೇಶ್ ಶೆಟ್ಟಿ
Edited By:

Updated on: Apr 10, 2026 | 10:26 AM

ರಾಯಚೂರು, ಏಪ್ರಿಲ್ 10: ಜಿಲ್ಲೆಯಲ್ಲಿ ಲೋಕಾಯುಕ್ತರು (Lokayukta) ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಭ್ರಷ್ಟಾಚಾರ ಆರೋಪದಡಿ ಸಿರವಾರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ಪಂಚಾಯತ್‌ನ ಚೀಫ್ ಆಫೀಸರ್ ಸುರೇಶ್ ಶೆಟ್ಟಿ, ಖಾತಾ ಮ್ಯೂಟೇಶನ್ ಮಾಡಲು ಲೇಔಟ್ ಮಾಲೀಕ ರಘರಾಮ್ ರೆಡ್ಡಿಯಿಂದ 2 ಲಕ್ಷ ರೂ. ಲಂಚ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಈ ಆರೋಪದ ಹಿನ್ನೆಲೆ ಸುರೇಶ್​ನನ್ನು ವಶಕ್ಕೆ ಪಡೆಯಲಾಗಿದೆ.

ಲೇಔಟ್ ಮಾಲೀಕನಿಂದ ಲೋಕಾಯುಕ್ತಗೆ ದೂರು

ಸಿರವಾರ ಪಟ್ಟಣದ ಹೊಸ ಲೇಔಟ್‌ನ 34 ನಿವೇಶನಗಳ ಖಾತಾ ಮ್ಯೂಟೇಶನ್ ಪ್ರಕ್ರಿಯೆಗಾಗಿ ಸುರೇಶ್ ಲಂಚ ಕೇಳಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಘರಾಮ್ ರೆಡ್ಡಿ ಲೋಕಾಯುಕ್ತರಿಗೆ ದೂರು ನೀಡಿದ್ದರು. ದೂರು ಆಧಾರವಾಗಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ನಿನ್ನೆ ರಘರಾಮ್ ರೆಡ್ಡಿ ಅವರು 1 ಲಕ್ಷ ರೂ. ಹಣವನ್ನು ಸುರೇಶ್ ಶೆಟ್ಟಿಗೆ ನೀಡುವ ವೇಳೆ ದಾಳಿ ನಡೆಸಿದ್ದಾರೆ.

ಇದನ್ನೂ ಓದಿ ಕಿವಿ ಕೇಳಲ್ಲ, ಮಾತೂ ಬರಲ್ಲ! ಆದ್ರೂ ಸ್ನೇಹಿತನ ಹೆಂಡತಿ ಮೇಲೆ ಕಣ್ಣು ಹಾಕಿದ ವ್ಯಕ್ತಿ ಮಾಡಿದ್ದೇನು ಗೊತ್ತಾ?

ಸ್ನೇಹಿತನ ಮನೆಯಲ್ಲಿ ಅಡಗಿದ್ದ ಆರೋಪಿ ಬಲೆಗೆ!

ಆದರೆ ದಾಳಿ ವೇಳೆ ಸುರೇಶ್ ಶೆಟ್ಟಿ ಕಾರಿನಲ್ಲಿ ಹಣ ಸಮೇತ ಸ್ಥಳದಿಂದ ಪರಾರಿಯಾಗಿದ್ದು, ಬಳಿಕ ಸಿರವಾರದಿಂದ ಕವಿತಾಳ ಕಡೆಗೆ ಕಾರಿನಲ್ಲಿ ತೆರಳಿ ಸ್ನೇಹಿತರ ಮನೆಯಲ್ಲಿ ಅಡಗಿಕೊಂಡಿದ್ದರು ಎನ್ನಲಾಗಿದೆ. ಲೋಕಾಯುಕ್ತ ತಂಡ ಮೊಬೈಲ್ ಲೊಕೇಶನ್ ಟ್ರೇಸ್ ಮಾಡಿ ಕವಿತಾಳ ಪಟ್ಟಣದಲ್ಲಿ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದೆ. ಇದೀಗ ಆರೋಪಿಯನ್ನು ವಿಚಾರಣೆಗೊಳಪಡಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us