AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ತಂದೆ, ಮಗನ ಜೀವವನ್ನೇ ಬಲಿ ಪಡೆದ ಯಮ ಸ್ವರೂಪಿ ಲಾರಿ

ರಾಯಚೂರು ಹೊರವಲಯದ ಯರಮರಸ್ ಬೈಪಾಸ್ ಬಳಿ ನಡೆದ ಭೀಕರ ಲಾರಿ ಅಪಘಾತದಲ್ಲಿ ತಂದೆ ಮತ್ತು ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಸ್ತೆ ಬದಿ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದಾಗ ಏಕಾಏಕಿ ಲಾರಿ ಹರಿದು ದುರಂತ ಸಂಭವಿಸಿದೆ. ರಾಯಚೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ರಾಯಚೂರು: ತಂದೆ, ಮಗನ ಜೀವವನ್ನೇ ಬಲಿ ಪಡೆದ ಯಮ ಸ್ವರೂಪಿ ಲಾರಿ
ಮೃತ ತಂದೆ, ಮಗ ಮತ್ತು ಲಾರಿ
ಭೀಮೇಶ್​​ ಪೂಜಾರ್
| Updated By: ಗಂಗಾಧರ​ ಬ. ಸಾಬೋಜಿ|

Updated on: Dec 01, 2025 | 3:53 PM

Share

ರಾಯಚೂರು, ಡಿಸೆಂಬರ್​ 01: ಲಾರಿ ಹರಿದು ರಸ್ತೆ (Accident) ಬದಿ ನಿಂತಿದ್ದ ತಂದೆ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಘಟನೆ ರಾಯಚೂರು ಹೊರವಲಯದ ಯರಮರಸ್ ಬೈಪಾಸ್​ನಲ್ಲಿ ನಡೆದಿದೆ. ತಂದೆ ನಾಗಪ್ಪ(65), ಪುತ್ರ ರಮೇಶ್(46) ಮೃತರು. ರಸ್ತೆ ಬದಿ ಮೊಬೈಲ್​ನಲ್ಲಿ ಮಾತನಾಡುತ್ತ ನಿಂತಿದ್ದ ವೇಳೆ ದುರಂತ ಸಂಭವಿಸಿದೆ. ಏಕಾಏಕಿ ತಂದೆ, ಮಗನ ಲಾರಿ ಹರಿದಿದ್ದರಿಂದ ಮೃತದೇಹಗಳು ಛಿದ್ರವಾಗಿದೆ. ರಾಯಚೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಟ್ರಾಕ್ಟರ್ ಹಿಂಭಾಗಕ್ಕೆ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಉಪನ್ಯಾಸಕಿ ಸಾವು

ಇನ್ನು ಮತ್ತೊಂದು ಪ್ರಕರಣದಲ್ಲಿ ಹುಲ್ಲಿನ ಟ್ರಾಕ್ಟರ್ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದ ಉಪನ್ಯಾಸಕಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಕಲಮಂಗಿ ಬಳಿ ನವೆಂಬರ್​ 24ರಂದು ಘಟನೆ ನಡೆದಿತ್ತು.

ಇದನ್ನೂ ಓದಿ: ರಸ್ತೆಗುಂಡಿ ತಪ್ಪಿಸಲು ಹೋಗಿ ಆನೇಕಲ್​​ ಬಳಿ ಕೆರೆಗೆ ಬಿದ್ದ ಲಾರಿ: ಮುಂದಾಗಿದ್ದು ದುರಂತ

ಅಕ್ಕಮಹಾದೇವಿ (36) ಮೃತ ಖಾಸಗಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ. ಘಟನೆ ನಡೆದ ದಿನ ಸಂಬಂಧಿಕರ ವಿವಾಹ ಸಮಾರಂಭಕ್ಕೆ ಹೋಗಿ ವಾಪಸ್ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ರಾತ್ರಿ ವೇಳೆ ಹುಲ್ಲಿನ ಮೇವು ಸಾಗಾಟ ಮಾಡುತ್ತಿದ್ದ ಟ್ರಾಕ್ಟರ್ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: ಬೆಳಗ್ಗೆ ನಮಾಜ್​ಗೆ ಬಂದವನ ಅಟ್ಟಾಡಿಸಿ ಚುಚ್ಚಿ ಚುಚ್ಚಿ ಕೊಂದ ದುಷ್ಕರ್ಮಿಗಳು: ಸಿಸಿಟಿವಿ ವಿಡಿಯೋ ನೋಡಿ ಬೆಚ್ಚಿಬಿದ್ದ ಮೈಸೂರು ಜನ

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಉಪನ್ಯಾಸಕಿಗೆ ಕಳೆದ ಒಂದು ವಾರದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೃತರ ಪತಿ ವೀರಭದ್ರ, ಇಬ್ಬರು ಮಕ್ಕಳು ತೀವ್ರವಾಗಿ ಗಾಯಗೊಂಡಿದ್ದಾರೆ. ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆ ಬದಿಯ ಕಾಂಕ್ರೀಟ್ ಕಟ್ಟೆಗೆ ಬೈಕ್​ ಡಿಕ್ಕಿ: ಇಬ್ಬರು ಯುವಕರು ಸಾವು

ರಸ್ತೆ ಬದಿಯ ಕಾಂಕ್ರೀಟ್ ಕಟ್ಟೆಗೆ ಬೈಕ್​ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸಾವನ್ನಪ್ಪಿರುವಂತಹ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಉಡೆಗೋಳ ಬಳಿ ನಡೆದಿದೆ. ಶಿವಕುಮಾರ್(17), ಶ್ರೀಕಾಂತ್(18) ಮೃತರು. ಕೆಂಚನಗುಡ್ಡ ಗ್ರಾಮದಿಂದ ಮಣ್ಣೂರಿಗೆ ಹೊರಟಿದ್ದರು. ತೆಕ್ಕಲಕೋಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ