AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಜೀವನಾಡಿ ಯೋಜನೆ ಕಾಮಗಾರಿಯಲ್ಲಿ ಮತ್ತೆ ಅಕ್ರಮ?

ರಾಯಚೂರು: ಕಾಂಕ್ರೀಟ್​ ಕಿತ್ತು ಹೋಗಿದೆ.. ಕಲ್ಲುಗಳು ಮೇಲೆದ್ದು ಬಂದಿವೆ. ಅಡಿಗಡಿಗೂ ಬಿರುಕು ಬಿಟ್ಟಿದೆ. ಕಾಲುವೆ ಬಾಯ್ತೆರೆದು ಬಿಟ್ಟಿದೆ. ಯೆಸ್ ಇದು ಕಿತ್ತೋದ್ ಕಾಮಗಾರಿ. ದೇವರು ಕೂಡ ಮೆಚ್ಚುವಂತ ಕೆಲ್ಸ ಆಗ್ಲೇ ಇಲ್ಲ. ಕಳಪೆ ಅನ್ನೋ ಕರ್ಮಕಾಂಡ ಎಲ್ಲೆಲ್ಲೂ ರಾರಾಜಿಸ್ತಿದೆ. ಅಷ್ಟಕ್ಕೂ ಈ ಮಟ್ಟಿಗೆ ಹಾಳಾಗಿ ಹೋಗಿರೋದು ರಾಯಚೂರು ಜಿಲ್ಲೆ ನಾರಾಯಣಪುರ ಬಲದಂಡೆ ಯೋಜನೆ. ಕಳಪೆ ಕಾಮಗಾರಿ ಮಾಡಿರೋ ಕಂಪನಿಗೆ ಮತ್ತೆ ಗುತ್ತಿಗೆ! ನಾರಾಯಣಪುರ ಬಲದಂಡೆ ಕಾಲುವೆ ಯೋಜನೆ ರಾಯಚೂರು ಜಿಲ್ಲೆ ಅನ್ನದಾತರ ಜೀವನಾಡಿಯಾಗಿತ್ತು. ಇದೇ ಕಾಲುವೆ ನೀರನ್ನ […]

ರೈತರ ಜೀವನಾಡಿ ಯೋಜನೆ ಕಾಮಗಾರಿಯಲ್ಲಿ ಮತ್ತೆ ಅಕ್ರಮ?
ಸಾಧು ಶ್ರೀನಾಥ್​
|

Updated on:Feb 08, 2020 | 4:06 PM

Share

ರಾಯಚೂರು: ಕಾಂಕ್ರೀಟ್​ ಕಿತ್ತು ಹೋಗಿದೆ.. ಕಲ್ಲುಗಳು ಮೇಲೆದ್ದು ಬಂದಿವೆ. ಅಡಿಗಡಿಗೂ ಬಿರುಕು ಬಿಟ್ಟಿದೆ. ಕಾಲುವೆ ಬಾಯ್ತೆರೆದು ಬಿಟ್ಟಿದೆ. ಯೆಸ್ ಇದು ಕಿತ್ತೋದ್ ಕಾಮಗಾರಿ. ದೇವರು ಕೂಡ ಮೆಚ್ಚುವಂತ ಕೆಲ್ಸ ಆಗ್ಲೇ ಇಲ್ಲ. ಕಳಪೆ ಅನ್ನೋ ಕರ್ಮಕಾಂಡ ಎಲ್ಲೆಲ್ಲೂ ರಾರಾಜಿಸ್ತಿದೆ. ಅಷ್ಟಕ್ಕೂ ಈ ಮಟ್ಟಿಗೆ ಹಾಳಾಗಿ ಹೋಗಿರೋದು ರಾಯಚೂರು ಜಿಲ್ಲೆ ನಾರಾಯಣಪುರ ಬಲದಂಡೆ ಯೋಜನೆ.

ಕಳಪೆ ಕಾಮಗಾರಿ ಮಾಡಿರೋ ಕಂಪನಿಗೆ ಮತ್ತೆ ಗುತ್ತಿಗೆ! ನಾರಾಯಣಪುರ ಬಲದಂಡೆ ಕಾಲುವೆ ಯೋಜನೆ ರಾಯಚೂರು ಜಿಲ್ಲೆ ಅನ್ನದಾತರ ಜೀವನಾಡಿಯಾಗಿತ್ತು. ಇದೇ ಕಾಲುವೆ ನೀರನ್ನ ನಂಬ್ಕೊಂಡು ಲಕ್ಷಾಂತರ ಜನರು ಬದುಕು ಕಟ್ಟಿಕೊಂಡಿದ್ರು. ಒಟ್ಟು 95 ಕಿ.ಮೀ. ಉದ್ದದ ಈ ಕಾಲುವೆಯಲ್ಲಿ ಸಮರ್ಪಕವಾಗಿ ನೀರು ಹರಿಸದ ಕಾರಣ ಸಾಕಷ್ಟು ರೈತರ ಜಮೀನುಗಳಿಗೆ ನೀರು ತಲುಪ್ತಿಲ್ಲ. ಹೀಗಾಗಿ 30 ವರ್ಷಗಳ ಹಿಂದೆ ನಿರ್ಮಾಣವಾಗಿದ್ದ ಈ ಕಾಲುವೆ ಹಳ್ಳ ಹಿಡಿದಿದೆ. ಆದ್ರೀಗ ಬರೋಬ್ಬರಿ 848 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಲುವೆ ಆಧುನೀಕರಣಕ್ಕೆ ಸರ್ಕಾರ ಗ್ರೀನ್​ ಸಿಗ್ನಲ್ ನೀಡಿದೆ. ಅದ್ರಲ್ಲೂ ಡಿ.ವೈ.ಉಪ್ಪಾರ ಕಂಪನಿಗೆ ಗುತ್ತಿಗೆ ಕೊಟ್ಟಿರೋದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಕಳಪೆ ಕಾಮಗಾರಿಗೆ ಅನ್ನದಾತರ ಆಕ್ರೋಶ: ಇನ್ನು, ರಾಯಚೂರು ಜಿಲ್ಲೆಯಲ್ಲಿ ಡಿ.ವೈ.ಉಪ್ಪಾರ ಕಂಪನಿ ಮಾಡಿರೋ ಸಾಕಷ್ಟು ಕಾಮಗಾರಿಗಳು ಕಳಪೆಯಾಗಿವೆ. ಅಲ್ಲದೇ ದೇವದುರ್ಗ ತಾಲೂಕಿನ 9ಎ ಉಪ ಕಾಲುವೆಗೆ ಪ್ರಾಯೋಗಿಕವಾಗಿ ನೀರು ಹರಿಸಿದ್ದಾಗ ಕಾಂಕ್ರೀಟ್ ಕಿತ್ತೋಗಿತ್ತು. ಇಷ್ಟೆಲ್ಲ ಕಳಪೆ ಕಾಮಗಾರಿ ಇದೇ ಕಂಪನಿ ಮಾಡಿದ್ರು ಡಿ.ವೈ. ಕಂಪನಿಗೆ ಯೋಜನೆ ಗುತ್ತಿಗೆ ಕೊಟ್ಟಿರೋದಕ್ಕೆ ಅನ್ನದಾತರು ರೊಚ್ಚಿಗೆದ್ದಿದ್ದಾರೆ. ಸರ್ಕಾರ ಕೂಡಲೇ ಕಂಪನಿಗೆ ಕೊಟ್ಟಿರೋ ಕಂಟ್ರ್ಯಾಕ್ಟ್ ವಾಪಸ್ ಪಡೆಯುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ ಅಧಿಕಾರಿಗಳನ್ನ ಕೇಳಿದ್ರೆ ಅವರೊಂದು ಕಥೆ ಹೇಳ್ತಿದ್ದಾರೆ.

ಒಟ್ನಲ್ಲಿ ಅನ್ನದಾತರ ಪಾಲಿಗೆ ವರವಾಗಬೇಕಿದ್ದ ಯೋಜನೆ ಹೆಸ್ರಲ್ಲಿ ಗುತ್ತಿಗೆ ಕೈಗೆತ್ತಿಕೊಂಡವರು ಕೋಟಿ ಕೋಟಿ ನುಂಗಿದ್ದಾರೆ. ಕಾಲುವೆ ಆಧುನೀಕರಣದ ಹೆಸ್ರಲ್ಲಿ ಕೋಟಿ ಕೋಟಿ ಕೊಳ್ಳೆ ಹೊಡೆಯೋಕೆ ಹೆಜ್ಜೆ ಇಟ್ಟಿರೋರ ವಿರುದ್ಧ ರೈತರು ಸಿಡಿದೆದ್ದಿದ್ದಾರೆ.

Published On - 1:32 pm, Sat, 8 February 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!