AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡೆಂದು ಹೆಣ್ಣು ಮಗು ಕೊಟ್ಟ ಸಿಬ್ಬಂದಿ: ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶು ಅದಲು-ಬದಲು

ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶುವಿನ ಅದಲು ಬದಲು ಆರೋಪ ಕೇಳಿಬಂದಿದೆ. ತಮ್ಮ ಗಂಡು ಮಗುವನ್ನು ಆಸ್ಪತ್ರೆ ಸಿಬ್ಬಂದಿ ಬದಲಾಯಿಸಿದ್ದಾರೆ ಎಂದು ದಂಪತಿ ಆರೋಪಿಸಿದ್ದಾರೆ. ಮೊದಲು ಗಂಡು ಮಗುವನ್ನು ನೀಡಿ ನಂತರ ಹೆಣ್ಣು ಮಗು ಹುಟ್ಟಿರುವುದಾಗಿ ಹೇಳುತ್ತಿದ್ದಾರೆ ಎಂದು ದಂಪತಿಗಳು ದೂರಿದ್ದಾರೆ.

ಗಂಡೆಂದು ಹೆಣ್ಣು ಮಗು ಕೊಟ್ಟ ಸಿಬ್ಬಂದಿ: ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶು ಅದಲು-ಬದಲು
ಸರ್ಕಾರಿ ಆಸ್ಪತ್ರೆ
ಭೀಮೇಶ್​​ ಪೂಜಾರ್
| Edited By: |

Updated on: Jul 06, 2025 | 1:27 PM

Share

ರಾಯಚೂರು, ಜುಲೈ 06: ಜಿಲ್ಲೆಯ ಸಿಂಧನೂರು (Sindhanur) ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶುಗಳನ್ನು (baby) ಅದಲು ಬದಲು ಮಾಡಿರುವ ಆರೋಪ ಕೇಳಿಬಂದಿದೆ. ಗಂಡು ಮಗು ಕೊಟ್ಟು ಬಳಿಕ ಹೆಣ್ಣು ಹುಟ್ಟಿದೆ ಎಂದು ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ. ಸದ್ಯ ಸಿಂಧನೂರು ನಗರ ಪೊಲೀಸ್ ಠಾಣೆಗೆ ಕುಟುಂಬಸ್ಥರು ದೂರು ನೀಡಿದ್ದಾರೆ.

ನಡೆದದ್ದೇನು?

ಸಿಂಧನೂರು ತಾಲ್ಲೂಕಿನ ಗಾಂಧಿನಗರದ ಹುಲ್ಲಪ್ಪ ಹಾಗೂ ರೇವತಿ ದಂಪತಿ ಮಗು ಅದಲು-ಬದಲು ಮಾಡಿರುವ ಆರೋಪ ಕೇಳಿಬಂದಿದೆ. ಹೆರಿಗೆ ಬಳಿಕ ರೇವತಿಗೆ ಗಂಡು ಮಗು ನೀಡಿ ಎದೆ ಹಾಲುಣಿಸಲು ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ.

ಇದನ್ನೂ ಓದಿ: ಕೃಷಿಯಲ್ಲಿ ಸಾಧನೆಗೈದ ಅಪ್ಪ: ಓದಿನಲ್ಲಿ ಸಾಧನೆ ಮಾಡಿ 6 ಚಿನ್ನದ ಪದಕ ಗಿಟ್ಟಿಸಿಕೊಂಡ ಮಗ

ಆದರೆ ಆ ಬಳಿಕ ತಮ್ಮ ವರಸೆ ಬದಲಾಯಿಸಿದ ಆಸ್ಪತ್ರೆ ಸಿಬ್ಬಂದಿ ರೇವತಿ ಅವರಿಗೆ ನಿಮಗೆ ಹೆಣ್ಣು ಮಗು ‌ಹುಟ್ಟಿದೆ. ಗಂಡು ಮಗು ಅಲ್ಲ ತಪ್ಪಾಗಿದೆ ಎಂದಿದ್ದಾರೆ. ನಿಮಗೆ ಸಿಸೇರಿಯನ್ ಆಗಿ ಹೆಣ್ಣು ‌ಮಗು ಹುಟ್ಟಿದೆ ಎಂದು ನರ್ಸ್​ಗಳು ಹೇಳಿದ್ದಾರೆ. ಹೀಗಾಗಿ ಆಸ್ಪತ್ರೆ ನಡೆ ಬಗ್ಗೆ ರೇವತಿ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.

ಕೆರೆಯಲ್ಲಿ ಮುಳುಗಿ ಅವಳಿ-ಜವಳಿ ಮಕ್ಕಳು ಸಾವು

ಕೆರೆಯಲ್ಲಿ ಮುಳುಗಿ ಅವಳಿ-ಜವಳಿ ಮಕ್ಕಳು ಮೃತಪಟ್ಟಿರುವಂತಹ ಘಟನೆ ಇತ್ತೀಚೆಗೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮದಲ್ಲಿ ನಡೆದಿತ್ತು. ಗ್ರಾಮದ ಮೂರುವರೆ ವರ್ಷದ ಮುದಸ್ಸೀರ್ ಮತ್ತು ಮುಜಮ್ಮಿಲ್ ಮೃತ ಮಕ್ಕಳು.

ಇದನ್ನೂ ಓದಿ: ಕೇಂದ್ರ ಸಚಿವರಾಗಿರುವ ಕುಮಾರಸ್ವಾಮಿ ಮೇಕೆದಾಟು ಯೋಜನೆಗೆ ಅನುಮೋದನೆ ತರಲಿ: ಡಿಕೆ ಸುರೇಶ್

ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದರೆ, ಇತ್ತ ತಂದೆ ಮನೆಯಲ್ಲಿಯೇ ಇದ್ದರು. ಅಂಗನವಾಡಿಗೆ ಹೋಗೋದಾಗಿ ಹೇಳಿ ಮನೆಯಿಂದ ಹೋಗಿದ್ದ ಮಕ್ಕಳು, ಮನೆ ಬಳಿಯೇ ಇರುವ ಕೆರೆ ಬಳಿ ಆಟವಾಡಲು ಹೋಗಿದ್ದರು. ಆದರೆ ಕಾಲು ಜಾರಿ ಕೆರೆಯಲ್ಲಿ ಬಿದ್ದಿದ್ದರಿಂದ ಮಕ್ಕಳಿಬ್ಬರು ಮೃತಪಟ್ಟಿದ್ದರು. ಕುಂದಗೋಳ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Bhemesh Poojar
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ