AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಾಲಯ ರಾಯರ 352ನೇ ಉತ್ತರಾಧನಾ ಮಹೋತ್ಸವ: ರಾಜಬೀದಿಯಲ್ಲಿ ಜರುಗಿದ ಮಹಾ ರಥೋತ್ಸವ

ತುಂಗಭದ್ರಾ ದಡದಲ್ಲಿರುವ ರಾಯರ ಸನ್ನಿಧಿಯಲ್ಲಿಂದು ರಾಯರ ಉತ್ತರಾಧನೆ ಸಡಗರ ಮನೆ ಮಾಡಿತ್ತು. ರಾಘವೇಂದ್ರ ಸ್ವಾಮಿಗಳ 352 ನೇ ಆರಾಧನಾ ಮಹೋತ್ಸವದ ಆರಾಧನೆ ಜೊತೆ ಶ್ರೀಗಳು, ಭಕ್ತರು ಬಣ್ಣದೋಕುಳಿಯಲ್ಲಿ ಮಿಂದೆದ್ದು ವಸಂತೋತ್ಸವ ಆಚರಿಸಿದರು. ಮಹಾರಥೋತ್ಸವಕ್ಕೆ ಶ್ರೀಗಳು ಹೆಲಿಕಾಪ್ಟರ್ ಮೂಲಕ ಆಗಮಿಸಿ ಪುಷ್ಪಾರ್ಚನೆ ಮಾಡಲಾಯಿತು.

ಭೀಮೇಶ್​​ ಪೂಜಾರ್
| Edited By: |

Updated on: Sep 02, 2023 | 8:42 PM

Share

ರಾಯಚೂರು, ಸೆಪ್ಟೆಂಬರ್​ 2: ತುಂಗಭದ್ರಾ ದಡದಲ್ಲಿರುವ ರಾಯರ ಸನ್ನಿಧಿಯಲ್ಲಿಂದು ರಾಯರ ಉತ್ತರಾಧನೆ (UTTARADHANE) ಸಡಗರ ಮನೆ ಮಾಡಿತ್ತು. ರಾಘವೇಂದ್ರ ಸ್ವಾಮಿಗಳ 352 ನೇ ಆರಾಧನಾ ಮಹೋತ್ಸವದ ಆರಾಧನೆ ಜೊತೆ ಶ್ರೀಗಳು, ಭಕ್ತರು ಬಣ್ಣದೋಕುಳಿಯಲ್ಲಿ ಮಿಂದೆದ್ದು ವಸಂತೋತ್ಸವ ಆಚರಿಸಿದರು. ಕೊನೆಗೆ ಮಹಾರಥೋತ್ಸವಕ್ಕೆ ಶ್ರೀಗಳು ಹೆಲಿಕಾಪ್ಟರ್ ಮೂಲಕ ಆಗಮಿಸಿ ಪುಷ್ಪಾರ್ಚನೆ ಮಾಡಿದರು. ಲಿಯುಗ ಕಾಮಧೇನು ಗುರು ರಾಘವೇಂದ್ರ ಸಾರ್ವಭೌಮರು ವೃಂದಾವನಸ್ಥರಾದ ಮರುದಿನವನ್ನ ಮಂತ್ರಾಲಯದಲ್ಲಿ ಉತ್ತರರಾಧನೆಯಾಗಿ ಆಚರಿಸಲಾಗುತ್ತೆ. ಅದೇ ರೀತಿ ಇಂದು ರಾಯರ ಸನ್ನಿಧಿಯಲ್ಲಿ ಸಂಭ್ರಮದಿಂದ ಉತ್ತರಾಧನೆ ಆಚರಿಸಲಾಯಿತು.

ಇಂದು ಎಂದಿನಂತೆ ಶ್ರೀ ಮಠದಲ್ಲಿ ಪಾರಾಯಣ, ನೈರ್ಮಲ್ಯ ವಿಸರ್ಜನೆ,ಮೂಲರಾಮದೇವರ ಪೂಜೆಗಳ ನ್ನ ನೆರವೇರಿಸಲಾಯಿತು. ಜೊತೆಗೆ ರಾಯರ ಮೂಲ ಬೃಂದಾವನಕ್ಕೆ ಶ್ರೀಗಳಾದ ಸುಬುಧೇಂದ್ರ ತೀರ್ಥರು ವಿಶೇಷ ಪೂಜೆ ಸಲ್ಲಿಸಿದ್ದರು. ನಂತರ ಉತ್ತರಾಧನೆ ವೇಳೆ ಆಚರಿಸಲಾಗುವ ವಸಂತೋತ್ಸವದ ಅಂಗವಾಗಿ ಶ್ರೀಗಳು ರಾಯರಿಗೆ ಬಣ್ಣವನ್ನ ಅರ್ಪಿಸಿದರು. ನಂತರ ಶ್ರೀಗಳು ಭಕ್ತರಿಗೆ, ಅರ್ಚಕರಿಗೆ ಬಣ್ಣವನ್ನ ಎರಸಿ ಬಣ್ಣದೋಕುಳಿ ಆಡುವ ಮೂಲಕ ವಸಂತೋತ್ಸವ ಆಚರಣೆ ಮಾಡಿದರು. ಅಪಾರ ಭಕ್ತರು ಈ ವಸಂತೋತ್ಸವದಲ್ಲಿ ಭಾಗಿಯಾಗಿದ್ದು ವಿಶೇಷ.

ಇದನ್ನೂ ಓದಿ: ಮಂತ್ರಾಲಯದಲ್ಲಿ ರಾಯರ ಆರಾಧನೆಯ ಸಪ್ತರಾತ್ರೋತ್ಸವ ಶುರು, ಮಠದಲ್ಲಿ ಮನೆಮಾಡಿದ ಸಂಭ್ರಮ

ಉತ್ತರಾಧನೆ ಹಿನ್ನೆಲೆ ಇಂದು ರಾಯರು ಪ್ರಹ್ಲಾದ್ ರಾಜರ ಉತ್ಸವ ಮೂರ್ತಿ ರೂಪದಿಂದ ಹೊರ ಪ್ರಾಕಾರದಲ್ಲಿ ಬಂದು ಭಕ್ತರಿಗೆ ರಾಜ ಬೀದಿಯಲ್ಲಿ ದರ್ಶನ ಕೊಡುತ್ತಾರೆ ಅನ್ನೋ ಪ್ರತೀತಿಯಿದೆ. ಬಳಿಕ ಗುರುರಾಯರನ್ನ ಪ್ರಹ್ಲಾದ್ ರಾಜರ ರೂಪದಲ್ಲಿ ಸಂಸ್ಕೃತ ಪಾಠಶಾಲೆಗೆ ಮೆರವಣಿಗೆಯಲ್ಲಿ ಕರೆದೊಯ್ಯಲಾಯಿತು.

ಮಠದ ಮದ್ವದ್ವಾರ ಮೂಲಕ ರಾಜಬೀದಿಯಲ್ಲಿ ಮಹಾರಥೋತ್ಸದತ್ತ ಶ್ರೀಗಳು ಆಗಮಿಸಿ ಪೂಜೆ ಸಲ್ಲಿಸಿದರು. ನಂತರ ಶ್ರೀಗಳು ಭಕ್ತರಿಗೆ ಆಶಿರ್ವಚನೆ ಮಾಡಿದರು. ಈ ಬಾರಿ ವಿಶೇಷವಾಗಿ ಚಂದ್ರಯಾನ 3 ಯಶಸ್ವಿಯಾಗಿದ್ದನ್ನ ನೆನೆದರು. ಇದು ವಿಶ್ವದಲ್ಲೇ ಹೆಮ್ಮೆಯ ವಿಷಯ. ಹೀಗಾಗಿ ಚಂದ್ರಯಾನ 3 ರ ಮಾದರಿಯಲ್ಲಿ ಸೂರ್ಯನತ್ತ ಹೊರಟಿರುವ ಆದಿತ್ಯ ಎಲ್​1 ಕೂಡ ಯಶಸ್ವಿಯಾಗಲಿ ಅಂತ ಹಾರೈಸಿದರು. ಜೊತೆಗೆ ದೇಶ ಭಕ್ತಿ ಮುಖ್ಯ ಅನ್ನೋದನ್ನ ಭಕ್ತರಿಗೆ ಸಾರಿ ಹೇಳಿದರು.

ಇದನ್ನೂ ಓದಿ: ಮಂತ್ರಾಲಯ ಶ್ರೀ ಗುರು ರಾಘವೇಂದ್ರ ರಥೋತ್ಸವಕ್ಕೆ ಹರಿದುಬಂದ ಭಕ್ತ ಸಾಗರ, ಇಲ್ಲಿದೆ ವಿಡಿಯೋ

ಶ್ರೀ ಮಠದ ರಾಜಬೀದಿಯಲ್ಲಿ ಮಹಾ ರಥೋತ್ಸವ ಜರುಗಿತು. ಮಹಾರಥೋತ್ಸವಕ್ಕೆ ಸಹಸ್ರಾರು ಭಕ್ತರು ಸಾಕ್ಷಿಯಾದರು. ರಥೋತ್ಸವದ ವೇಳೆ ಶ್ರೀಗಳಾದ ಸುಬುಧೇಂದ್ರ ತೀರ್ಥರು ಹೆಲಿಕಾಪ್ಟರ್ ಮೂಲಕ ಆಗಮಿಸಿ ರಥೋತ್ಸವಕ್ಕೆ ಪುಷ್ಪಾರ್ಚನೆ ಮಾಡಿದರು. ಒಟ್ಟು ಮೂರು ಬಾರಿ ಹೆಲಿಕಾಪ್ಟರ್ ಮೂಲಕ ಮಹಾ ರಥೋತ್ಸವಕ್ಕೆ ಪುಷ್ಪಾರ್ಚನೆ ಮಾಡಲಾಯ್ತು.

ಮಹಾರಥೋತ್ಸವ ವೇಳೆ ವಿವಿಧೆಡೆಯಿಂದ ಆಗಮಿಸಿದ್ದ ಭಜನಾ ಮಂಡಳಿಗಳು, ಕಲಾತಂಡಗಳು ರಾಜಬೀದಿಯಲ್ಲಿ ರಥೋತ್ಸವಕ್ಕೆ ಮೆರಗು ನೀಡಿದವು. ಉತ್ತರಾಧನೆ ಸಂಭ್ರಮಕ್ಕೆ ಸಾಕ್ಷಿಯಾದ ಭಕ್ತರು ಸಂತಸ ಇಮ್ಮಡಿಗೊಂಡಿದ್ದಂತು ಸುಳ್ಳಳ್ಳ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Bhemesh Poojar
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?