AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಬಸ್ ಡಿಕ್ಕಿಯಾಗಿ ತಂದೆ, ಮಗಳ ಸಾವು; ಮಂತ್ರಾಲಯಕ್ಕೆ ತೆರಳುವಾಗ ದುರ್ಘಟನೆ

Raichur News: ಮೃತ ಪ್ರಸಾದ್​ ಅಂಬಾರಮಠದ ಅರ್ಚಕರಾಗಿದ್ದರು ಎಂದು ತಿಳಿದುಬಂದಿದೆ. ಅಂಬಾರಮಠದಿಂದ ಮಂತ್ರಾಲಯಕ್ಕೆ ತೆರಳುವಾಗ ಘಟನೆ ನಡೆದಿದೆ. ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಯಚೂರು: ಬಸ್ ಡಿಕ್ಕಿಯಾಗಿ ತಂದೆ, ಮಗಳ ಸಾವು; ಮಂತ್ರಾಲಯಕ್ಕೆ ತೆರಳುವಾಗ ದುರ್ಘಟನೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 30, 2021 | 8:57 PM

Share

ರಾಯಚೂರು: ಸರ್ಕಾರಿ ಬಸ್ ಡಿಕ್ಕಿ ಆಗಿ ಕಾರಿನಲ್ಲಿದ್ದ ತಂದೆ, ಮಗಳ ಸಾವು ಸಂಭವಿಸಿದ ದುರ್ಘಟನೆ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಜವಳಗೇರಾ ಬಳಿ ನಡೆದಿದೆ. ಅಪಘಾತದಲ್ಲಿ ಪ್ರಸಾದ್ (50), ವಿದ್ಯಾ (11) ಎಂಬವರು ಸಾವನ್ನಪ್ಪಿದ್ದಾರೆ. ಮೃತ ಪ್ರಸಾದ್​ ಅಂಬಾರಮಠದ ಅರ್ಚಕರಾಗಿದ್ದರು ಎಂದು ತಿಳಿದುಬಂದಿದೆ. ಅಂಬಾರಮಠದಿಂದ ಮಂತ್ರಾಲಯಕ್ಕೆ ತೆರಳುವಾಗ ಘಟನೆ ನಡೆದಿದೆ. ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಮನಗರ: ಪ್ರೀತಿ ನಿರಾಕರಿಸಿದ್ದಕ್ಕೆ ವಿಷ ಕುಡಿದು ಯುವಕ ಆತ್ಮಹತ್ಯೆ ಪ್ರೀತಿ ನಿರಾಕರಿಸಿದ್ದಕ್ಕೆ ವಿಷ ಕುಡಿದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಹೊಂಗನೂರು ಎಂಬಲ್ಲಿ ನಡೆದಿದೆ. ಇಲ್ಲಿನ ಅರುಣ್ ರಾಜ್ ಅರಸ್(20) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷ ಕುಡಿಯುವುದನ್ನ ವಿಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿದ್ದಾರೆ. ಚನ್ನಪಟ್ಟಣ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಜಪ ಮಾಡುತ್ತಿದ್ದಾಗಲೇ ಕೊನೆಯುಸಿರೆಳೆದ ವೃದ್ಧೆ ಜಪ ಮಾಡುತ್ತಿದ್ದಾಗಲೇ ವೃದ್ಧೆ ಕೊನೆಯುಸಿರೆಳೆದ ಘಟನೆ ನೆಲಮಂಗಲದ ಶ್ರೀನಿಧಿ ಲಾಡ್ಜ್​​ನಲ್ಲಿ ನಡೆದಿದೆ. ಭಾರತಿ (75) ಎಂಬವರು ಸಾವನ್ನಪ್ಪಿದ್ದಾರೆ. ವೃದ್ಧೆಯ ಪತಿ ಮಹೇಶ್ ವಾಸುದೇವ್ (75) ಅಸ್ವಸ್ಥ ಆಗಿದ್ದಾರೆ. ಅಸ್ವಸ್ಥ ವೃದ್ಧನಿಗೆ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್​ನಲ್ಲಿ ದಂಪತಿ ವಿಶ್ರಾಂತಿಗಾಗಿ 3 ದಿನದ ಹಿಂದೆ ರೂಂ ಪಡೆದಿದ್ದರು. 2 ದಿನದಿಂದ ದಂಪತಿ ರೂಂನಿಂದ ಹೊರ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡು ಬಾಗಿಲು ತೆರೆದಾಗ ಘಟನೆ ಬೆಳಕಿಗೆ ಬಂದಿದೆ. ನೆಲಮಂಗಲ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Agumbe Ghat: ತೀರ್ಥಹಳ್ಳಿಯ ಆಗುಂಬೆ ಘಾಟ್​ನಲ್ಲಿ ಭೀಕರ ಅಪಘಾತ; 4 ಜನ ಸ್ಥಳದಲ್ಲೇ ಸಾವು, ಐವರ ಸ್ಥಿತಿ ಗಂಭೀರ

ಇದನ್ನೂ ಓದಿ: Crime: ಬೀರೂರಿನಲ್ಲಿ ತಂದೆಯಿಂದ ಮಗಳ ಕೊಲೆ, ಶ್ರೀನಿವಾಸಪುರದಲ್ಲಿ ಅಪಘಾತ, ಚಡಚಣದಲ್ಲಿ ಕಬ್ಬಿನಗದ್ದೆಗೆ ಬೆಂಕಿ

Published On - 7:45 pm, Sat, 30 October 21

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!