AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಮುಸ್ಲಿಂ ವ್ಯಕ್ತಿಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನ, 15 ಹಿಂದೂ ಗ್ರಾ.ಪಂ. ಸದಸ್ಯರು ರಾಜೀನಾಮೆ

ಮುಸ್ಲಿಂ ಧರ್ಮದ ವ್ಯಕ್ತಿಗೆ ಅಧ್ಯಕ್ಷಗಿರಿ ನೀಡಿದ್ದಕ್ಕೆ ಹಿಂದೂ ಧರ್ಮದ 15 ಜನ ಗ್ರಾ.ಪಂ. ಸದಸ್ಯರು ಏಕಕಾಲಕ್ಕೆ ರಾಜೀನಾಮೆ ನೀಡಿದ ಘಟನೆ ನಡೆದಿದೆ. ಇಂದು ಇನ್ನೂ ನಾಲ್ಕು ಜನ ರಾಜೀನಾಮೆ ನೀಡುವ ಸಾಧ್ಯತೆ ಇದೆ.

ರಾಯಚೂರು: ಮುಸ್ಲಿಂ ವ್ಯಕ್ತಿಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನ, 15 ಹಿಂದೂ ಗ್ರಾ.ಪಂ. ಸದಸ್ಯರು ರಾಜೀನಾಮೆ
ರಾಜೀನಾಮೆ ನೀಡಿದ ಗ್ರಾ.ಪಂ. ಸದಸ್ಯರು
ಭೀಮೇಶ್​​ ಪೂಜಾರ್
| Edited By: |

Updated on:Aug 05, 2023 | 1:27 PM

Share

ರಾಯಚೂರು, ಆ.05: ರಾಯಚೂರು ಜಿಲ್ಲೆಯ ಗ್ರಾಮ ಪಂಚಾಯತಿ(Gram Panchayat) ಚುನಾವಣೆಗೂ ಧರ್ಮ ದಂಗಲ್ ಕಾಲಿಟ್ಟಿದೆ. ಮುಸ್ಲಿಂ(Muslim) ಧರ್ಮದ ವ್ಯಕ್ತಿಗೆ ಅಧ್ಯಕ್ಷಗಿರಿ ನೀಡಿದ್ದಕ್ಕೆ ಹಿಂದೂ(Hindu) ಧರ್ಮದ 15 ಜನ ಗ್ರಾ.ಪಂ. ಸದಸ್ಯರು ಏಕಕಾಲಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಆರ್​ಎಚ್ ಕ್ಯಾಂಪ್ 2 ರಲ್ಲಿ ಮುಸ್ಲಿಂ ಧರ್ಮದ ಕೆಲ ಕಿಡಿಗೇಡಿಗಳು ಹಿಂದೂ ಧರ್ಮದ ಜನರ ಮೇಲೆ ಹಲ್ಲೆ ನಡೆಸಿದ್ದರು. ಇದೇ ಕಾರಣಕ್ಕೆ ಅಧ್ಯಕ್ಷಗಿರಿ ವಿರೋಧಿಸಿ‌ ಹಿಂದೂ ಸದಸ್ಯರು ರಾಜೀನಾಮೆ ನೀಡಿದ್ದಾರೆ.

ಗ್ರಾಮ ಪಂಚಾಯತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್​ನ 15 ಜನ ಗ್ರಾಮ ಪಂಚಾಯತಿ ಸದಸ್ಯರು ರಾಜೀನಾಮೆ ನೀಡಿದ್ದಾರೆ. RH 01 ಗ್ರಾಮ್ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಅಧ್ಯಕ್ಷಗಿರಿ ಸ್ಥಾನವನ್ನು ಸಾಮಾನ್ಯ ವರ್ಗಕ್ಕೆ ಮೀಸಲಿಡಲಾಗಿತ್ತು. ಸಾಮಾನ್ಯ ವರ್ಗದವರಿದ್ದರೂ, ಅನ್ಯಕೋಮಿನ ವ್ಯಕ್ತಿ ಕಾಂಗ್ರೆಸ್​ನ ರಹಮತ್ ಪಾಷಾಗೆ ಅಧ್ಯಕ್ಷಪಟ್ಟ ನೀಡಿದ್ದರು.

ಇದನ್ನೂ ಓದಿ: Viral Video: ಅಲ್ಝೈಮರ್​; ‘ಅಪ್ಪಾ, ನಮ್ಮ ನೌಕಾಯಾನದ ನೆನಪಿದೆಯೇ, ಈ ಟ್ಯಾಟೂ ನೋಡಿ’

ರೆಹಮತ್ ಪಾಷಾಗೆ ಅಧ್ಯಕ್ಷಗಿರಿ ನೀಡಿದಕ್ಕೆ ಹಿಂದೂ ಸದಸ್ಯರು ಕ್ಯಾತೆ ತೆಗೆದಿದ್ದು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಆರ್ ಎಚ್ ಕ್ಯಾಂಪ್ 01 ಒಟ್ಟು 38 ಸದಸ್ಯರನ್ನ ಹೊಂದಿದ್ದು ಅದರಲ್ಲಿ ಓರ್ವ ಮಾತ್ರ ಮುಸ್ಲಿಂ ವ್ಯಕ್ತಿ ಗ್ರಾ.ಪಂ‌ ಸದಸ್ಯರಾಗಿದ್ದಾರೆ. ಉಳಿದವರೆಲ್ಲಾ ಹಿಂದೂ ಧರ್ಮಕ್ಕೆ ಸೇರಿದ ಸದಸ್ಯರು. ಈ ಹಿನ್ನೆಲೆ ಅಸಮಾಧಾನಗೊಂಡು ರಾಜೀನಾಮೆ ‌ಸಲ್ಲಿಸಿದ್ದಾರೆ. ಇಂದು ಇನ್ನೂ ನಾಲ್ಕು ಜನ ರಾಜೀನಾಮೆ ನೀಡುವ ಸಾಧ್ಯತೆ ಇದೆ.

ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ; ನಾಲ್ವರು ಸದಸ್ಯರು ಅಪಹರಣ

ಇನ್ನು ಮತ್ತೊಂದೆಡೆ ಚಿಂಚೋಳಿ ತಾಲೂಕಿನ ಐನೊಳ್ಳಿ ಗ್ರಾಮ ಪಂಚಾಯಿತಿಯ ಬಿಜೆಪಿ ಬೆಂಬಲಿತ ನಾಲ್ವರು ಗ್ರಾಮ ಪಂಚಾಯಿತಿ ಸದಸ್ಯರನ್ನು ಕಾಂಗ್ರೆಸ್ ಕಾರ್ಯಕರ್ತರು ಅಪಹರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆ.7 ರಂದು ಐನೊಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ನಡೆಯಲಿದೆ. ಮಹಿಳಾ ಮೀಸಲಾತಿ ಇರುವ ಅಧ್ಯಕ್ಷ ಸ್ಥಾನಕ್ಕೆ ಏರಲು 10 ಸದಸ್ಯರ ಬೆಂಬಲ ಅವಶ್ಯಕತೆ ಇದೆ. ಅಧ್ಯಕ್ಷ ಸ್ಥಾನಕ್ಕೆ ಇಬ್ಬರು ಪರಿಶಿಷ್ಟ ಜಾತಿಯ (ಬಂಜಾರಾ ಹಾಗೂ ಎಸ್​​ಸಿ ಬಲ) ಮಹಿಳೆಯರ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದ್ದು ನಾಲ್ವರು ಸದಸ್ಯರ ಅಪಹರಣ ಮಾಡಲಾಗಿದೆ.

ರಾಯಚೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:14 pm, Sat, 5 August 23

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ