AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಸಿಂಧನೂರು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಲಂಚ ಪಡೆದ ಸಿಬ್ಬಂದಿ

ಸಿಂಧನೂರು ತಾಲ್ಲೂಕಿನ ಕೆಂಗಲ್ ಗ್ರಾಮದ ಅಂಬಮ್ಮ (57) ಎಂಬವರು ಕೆಂಗಲ್ ಗ್ರಾಮದಿಂದ ದಡೆಸುಗೂರು ಆಸ್ಪತ್ರೆಗೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಮೂರ್ಛೆ ರೋಗದಿಂದ ಮೃತಪಟ್ಟಿದ್ದು, ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ಮೃತದೇಹವನ್ನು ಒಯ್ಯಲಾಗಿತ್ತು. ಈ ವೇಳೆ, ಸಿಬ್ಬಂದಿ ಲಂಚ ಪಡೆದಿದ್ದಾರೆ. ಅದೂ ಸಾಲದೆಂದು ಸತಾಯಿಸಿದ್ದಾರೆ.

ರಾಯಚೂರು: ಸಿಂಧನೂರು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಲಂಚ ಪಡೆದ ಸಿಬ್ಬಂದಿ
ಶವಾಗಾರದ ಬಳಿ ಕರ್ನಾಟಕ ಪ್ರಾಂತ್ಯ ಕೂಲಿಕಾರ್ಮಿಕರ ಸಂಘದ ಸದಸ್ಯರಿಂದ ಪ್ರತಿಭಟನೆ
ಭೀಮೇಶ್​​ ಪೂಜಾರ್
| Edited By: |

Updated on: Apr 27, 2024 | 12:05 PM

Share

ರಾಯಚೂರು, ಏಪ್ರಿಲ್ 27: ರಾಯಚೂರು (Raichur) ಜಿಲ್ಲೆ ಸಿಂಧನೂರು ಸರ್ಕಾರಿ ಆಸ್ಪತ್ರೆಯಲ್ಲಿ (Sindhanur Government Hospital) ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆ ಸಿಬ್ಬಂದಿ ಲಂಚ ಪಡೆದಿರುವುದು ಬೆಳಕಿಗೆ ಬಂದಿದೆ. ವಿಚಾರ ಬಹಿರಂಗವಾಗಿ ಪ್ರತಿಭಟನೆ ವ್ಯಕ್ತವಾಗುತ್ತಿದ್ದಂತೆಯೇ ಲಂಚ ಪಡೆದಿದ್ದ ಹಣವನ್ನು ವಾಪಸ್ ನೀಡಿ ಸಿಬ್ಬಂದಿ ಪರಾರಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 2000 ರೂ. ಲಂಚಕ್ಕೆ ಬೇಡಿಕೆ ಇಟ್ಟು 1,500 ರೂ. ಕೊಟ್ಟರೂ ಪೋಸ್ಟ್ ಮಾರ್ಟಂ ಮಾಡಿಲ್ಲ ಎಂದು ಸಂತ್ರಸ್ತೆಯ ಕುಟುಂಬದವರು ಆರೋಪಿಸಿದ್ದಾರೆ.

ಸಿಂಧನೂರು ತಾಲ್ಲೂಕಿನ ಕೆಂಗಲ್ ಗ್ರಾಮದ ಅಂಬಮ್ಮ (57) ಎಂಬವರು ಶುಕ್ರವಾರ ಕೆಂಗಲ್ ಗ್ರಾಮದಿಂದ ದಡೆಸುಗೂರು ಆಸ್ಪತ್ರೆಗೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಮೂರ್ಛೆ ರೋಗದಿಂದ ಮೃತಪಟ್ಟಿದ್ದರು. ಬಳಿಕ ಮರಣೋತ್ತರ ಪರೀಕ್ಷೆಗೆ ಸಿಂಧನೂರು ಸರ್ಕಾರಿ ಆಸ್ಪತ್ರೆಗೆ ಮೃತದೇಹವನ್ನು ಕೊಂಡೊಯ್ಯಲಾಗಿತ್ತು. ಈ ವೇಳೆ, ಮಂಜುನಾಥ್ ಎಂಬ ಸಿಬ್ಬಂದ ಮರಣೋತ್ತರ ಪರೀಕ್ಷೆಗೆ 2000 ರೂ.ಡಿಮ್ಯಾಂಡ್ ಮಾಡಿದ್ದಾರೆ. ಸಿಬ್ಬಂದಿ ದರ್ಪಕ್ಕೆ ಬೇಸತ್ತು‌ ಮೃತ ಮಹಿಳೆಯ ಕುಟುಂಬದವರು 1500 ರೂ.ನೀಡಿದ್ದರು. ಆದರೆ, ಇನ್ನೂ ‌500 ರೂ.ಕೊಟ್ಟರೆ ಮಾತ್ರ ಪೋಸ್ಟ್ ಮಾರ್ಟಮ್ ಎಂದಿ ಬೀಗ ಹಾಕಿಕೊಂಡು ಸಿಬ್ಬಂದಿ ಹೋಗಿದ್ದಾರೆ.

ಇದನ್ನೂ ಓದಿ: ರಾಯಚೂರು: ಅರೆಬೆಂದ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥ

ಆಗ ಶವಾಗಾರದ ಬಳಿ ಕರ್ನಾಟಕ ಪ್ರಾಂತ್ಯ ಕೂಲಿಕಾರ್ಮಿಕರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಲಂಚ ಪಡೆದ ಸಿಬ್ಬಂದಿ ಮಂಜುನಾಥ್ ಅಮಾನತಿಗೆ ಆಗ್ರಹಿಸಿದ್ದಾರೆ. ಕೊನೆಗೆ ಲಂಚ ಪಡೆದಿದ ವ್ಯಕ್ತಿ 1500 ರೂ. ವಾಪಸ್ ನೀಡಿ ಓಡಿ ಹೋಗಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ