
ರಾಯಚೂರು, ಏಪ್ರಿಲ್ 28: ರಾಜ್ಯದಲ್ಲಿ ಬಿಸಿಲಿನ ತಾಪಮಾನ (Summer) ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಬಿಸಲಿನ ತಾಪಕ್ಕೆ ನಿರ್ಜಲೀಕರಣ (Dehydration) ಉಂಟಾಗಿ ಇಬ್ಬರು ಮಕ್ಕಳು ಮೃತಪಟ್ಟಿದ್ದು, ಇಬ್ಬರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಯಚೂರು (Raichur) ತಾಲೂಕಿನ ಚಿಕ್ಕಸುಗೂರು ಗ್ರಾಮದ ಹುಸೇನಮ್ಮ ಹಾಗೂ ಮಾರುತಿ ದಂಪತಿ ಮಕ್ಕಳಾದ ಆರತಿ (9) ಹಾಗೂ ಪ್ರಿಯಾಂಕಾ (7) ಮೃತ ದುರ್ದೈವಿಗಳು. ಪುತ್ರ ಲಕ್ಕಪ್ಪ (5)ಗೆ ರಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಗೂ ಮಾರುತಿ ತಂದೆ ಲಕ್ಷ್ಮಣ ಅವರನ್ನೂ ಕೂಡ ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ (ಏ.27)ರ ಸಂಜೆ ಏಕಾಏಕಿ ಸಮಸ್ಯೆ ಉಲ್ಬಣಗೊಂಡಿತ್ತು. ಕುಟುಂಬ ಕೃಷ್ಣಾ ನದಿ ನೀರನ್ನ ಕುಡಿಯುತ್ತಿತ್ತು ಎಂಬ ಮಾಹಿತಿ ದೊರೆತಿದೆ.
ಘಟನಾ ಸ್ಥಳಕ್ಕೆ ರಾಯಚೂರು ಗ್ರಾಮೀಣ ಪೊಲೀಸರು,ಆರೋಗ್ಯ ಇಲಾಖೆ ಮತ್ತು ಆಹಾರ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಗ್ಯ ಇಲಾಖೆ ಅಧಿಕಾರಿಗಳು ಮೃತರ ಮನೆಯಲ್ಲಿ ನೀರಿನ ಸ್ಯಾಂಪಲ್, ಆಹಾರದ ಸ್ಯಾಂಪಲ್ ಪಡೆದರು.
ಇದನ್ನೂ ಓದಿ: ಲೋಕಸಭೆ ಚುನಾವಣೆಯ ಅವಧಿಯಲ್ಲಿ ದೇಶದಲ್ಲಿ ಭಾರೀ ಬಿಸಿಲು; ಐಎಂಡಿ ಮುನ್ಸೂಚನೆ
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:02 am, Sun, 28 April 24