ರಾಯಚೂರು: ಒಗ್ಗರಣೆ ತಂದು ಕೊಡಲು ತಡ ಮಾಡಿದಕ್ಕೆ ಹೋಟೆಲ್ ಮಾಲೀಕನ ಮುಖಕ್ಕೆ ಎಣ್ಣೆ ಎರಚಿ ವಿಕೃತಿ

ಭೀಮಾ ನಾಯಕ್ ಎಂಬಾತ ಹೋಟೆಲ್​ನಲ್ಲಿ ತಿಂಡಿ ತಿನ್ನಲು ಬಂದಿದ್ದು ಒಗ್ಗರಣೆ ಆರ್ಡರ್​ ಮಾಡಿದ್ದ. ಈ ವೇಳೆ ಒಗ್ಗರಣೆ ಕೊಡುವಲ್ಲಿ ತಡವಾಗಿದಕ್ಕೆ ಹೊಟೆಲ್ ಮಾಲೀಕ ರಂಗಯ್ಯ ಶೆಟ್ಟಿ ಎಂಬುವವರ ಮುಖಕ್ಕೆ ಎಣ್ಣೆ ಎರಚಿ ವಿಕೃತಿ ಮೆರೆದಿದ್ದಾನೆ. ಗಾಯಾಳು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಯಚೂರು: ಒಗ್ಗರಣೆ ತಂದು ಕೊಡಲು ತಡ ಮಾಡಿದಕ್ಕೆ ಹೋಟೆಲ್ ಮಾಲೀಕನ ಮುಖಕ್ಕೆ ಎಣ್ಣೆ ಎರಚಿ ವಿಕೃತಿ
ಘಟನಾ ಸ್ಥಳ
Follow us
| Updated By: ಆಯೇಷಾ ಬಾನು

Updated on: Nov 12, 2023 | 10:43 AM

ರಾಯಚೂರು, ನ.12: ತಿಂಡಿ ಕೊಡಲು ಲೇಟ್ ಮಾಡಿದಕ್ಕೆ ಗ್ರಾಹಕನೋರ್ವ ಹೋಟೆಲ್​ ಮಾಲೀಕನ ಮುಖಕ್ಕೆ ಎಣ್ಣೆ ಎರಚಿ ವಿಕೃತಿ ಮೆರೆದಿರುವ ಘಟನೆ ರಾಯಚೂರು (Raichur) ಜಿಲ್ಲೆ ಮಾನ್ವಿ ತಾಲೂಕಿನ ರಾಜೋಳ್ಳಿ ಗ್ರಾಮದಲ್ಲಿ ನಡೆದಿದೆ. ಭೀಮಾ ನಾಯಕ್ ಎಂಬಾತ ಹೋಟೆಲ್​ನಲ್ಲಿ ತಿಂಡಿ ತಿನ್ನಲು ಬಂದಿದ್ದು ಒಗ್ಗರಣೆ ಆರ್ಡರ್​ ಮಾಡಿದ್ದ. ಈ ವೇಳೆ ಒಗ್ಗರಣೆ ಕೊಡುವಲ್ಲಿ ತಡವಾಗಿದಕ್ಕೆ ಹೊಟೆಲ್ ಮಾಲೀಕ ರಂಗಯ್ಯ ಶೆಟ್ಟಿ ಎಂಬುವವರ ಮುಖಕ್ಕೆ ಎಣ್ಣೆ ಎರಚಿ ವಿಕೃತಿ ಮೆರೆದಿದ್ದಾನೆ. ಗಾಯಾಳು ಆಸ್ಪತ್ರೆಗೆ ದಾಖಲಾಗಿದ್ದು ಈ ಘಟನೆ ಸಂಬಂಧ ಮಾನ್ವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸುವ ಸಾಧ್ಯತೆ ಇದೆ.

ರಾಜೋಳ್ಳಿ ಗ್ರಾಮದ ಭೀಮಾ ನಾಯಕ್ ಎಂಬಾತ ಬೆಳ್ಳಂ ಬೆಳಗ್ಗೆ ಹೋಟೆಲ್​ಗೆ ಬಂದು ಇಡ್ಲಿ ಕೇಳಿದ್ದ. ಆಗ ಇಡ್ಲಿ ಇಲ್ಲ ಎಂದು ಹೋಟೆಲ್ ಮಾಲೀಕ ರಂಗಯ್ಯ ಶೆಟ್ಟಿ ವಾಪಸ್ ಕಳಿಸಿದ್ರು. ಸ್ವಲ್ಪ ಸಮಯದ ನಂತರ ಮತ್ತೆ ಬಂದ ಭೀಮಾ ನಾಯಕ್ ಒಗ್ಗರಣೆ ಮಿರ್ಚಿ ಕೊಡುವಂತೆ ಕೇಳಿದ್ದ. ಈ ವೇಳೆ ಒಗ್ಗರಣೆ ತರಲು ತಡವಾಗಿದೆ. ಇದರಿಂದ ಸಿಟ್ಟಿಗೆದ್ದ ಭೀಮಾ ನಾಯಕ್, ಉಪ್ಪಿಟ್ಟು ಮಾಡಲು ಇಟ್ಟಿದ್ದ ಬಿಸಿ ಎಣ್ಣೆಯನ್ನು ಹೋಟೆಲ್ ಮಾಲೀಕನಿಗೆ ಎರಚಿ ವಿಕೃತಿ ಮೆರೆದಿದ್ದಾನೆ. ಬಳಿಕ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ರಂಗಯ್ಯ ಶೆಟ್ಟಿ ಮುಖಕ್ಕೆ ಸುಟ್ಟ ಗಾಯಗಳಾಗಿದ್ದು ಮಾನ್ವಿ ಸರಕಾರಿ ಆಸ್ಪತ್ರೆಗೆ ಗಾಯಾಳು ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಾನ್ವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಬಳ್ಳಾರಿ: ಉಸ್ತುವಾರಿ ಸಚಿವರಿಂದ ಬರ ವೀಕ್ಷಣೆ: 60 ಸಾವಿರ ಹೆಕ್ಟೇರ್ ಬೆಳೆ ಹಾನಿ, ಅನುದಾನಕ್ಕೆ ರೈತರು ಒತ್ತಾಯ

ಜಮೀನು ವಿವಾದ, ಖಾಕಿ ಎದುರೇ ಬಡಿದಾಟ

ಜಮೀನು ವಿವಾದ ಪ್ರಕರಣದಲ್ಲಿ ಪೊಲೀಸರ ಎದುರೇ ಬಡಿದಾಡಿಕೊಂಡಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಪಾಳ್ಯದಲ್ಲಿ ಘಟನೆ ನಡೆದಿದ್ದು, ರುಕ್ಮಿಣಿ ದೇವಿ, ರವೀಶ್ ಗೌಡ ನಡುವೆ ಜಮೀನು ವಿವಾದ ಇತ್ತು. ಇಬ್ಬರ ಜಗಳ ಪೊಲೀಸರ ಬಳಿ ಹೋಗಿತ್ತು. ಆಗ ಖಾಕಿ ಎದುರೇ ಎರಡು ಕಡೆಯವರ ಮಧ್ಯೆ ಗಲಾಟೆ ಶುರುವಾಗಿತ್ತು. ರಸ್ತೆಯಲ್ಲೇ ಪೊಲೀಸರ ಎದುರೇ ಬಡಿದಾಡಿಕೊಂಡಿದ್ದಾರೆ. ಆದ್ರೂ ಪೊಲೀಸರು ಮಾತ್ರ ಸೈಲೆಂಟ್​ ಆಗಿದ್ರು.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್