AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ದೇವಸ್ಥಾನ ತೆರವುಗೊಳಿಸಿ, ಶಾಲೆ ನಿರ್ಮಾಣಕ್ಕೆ ಸಂಘಟನೆಗಳ ಪಟ್ಟು; ಕೋಮು ಗಲಭೆ ಆತಂಕ

ರಾಯಚೂರಿನಲ್ಲಿ ವಿವಾದಕ್ಕೆ ಕಾರಣವಾದ ದೇವಸ್ಥಾನ ತೆರವು ಪ್ರಕರಣ. ರಾಯಚೂರು ನಗರದ ಚಂದ್ರಬಂಡಾ ರಸ್ತೆಯ ಸಂತೋಷ ನಗರದಲ್ಲಿರುವ ಸಿಎ ಸೈಟ್ ನಲ್ಲಿ ಸರ್ಕಾರಿ ಶಾಲೆ ನಿರ್ಮಾಣಕ್ಕಾಗಿ ಶಿಕ್ಷಣ ಇಲಾಖೆ ಆದೇಶಸಿತ್ತು. ಇದೇ ಸ್ಥಳದಲ್ಲಿ ಶಿವ ಲಿಂಗ ದೇವಸ್ಥಾನ ಇದೆ. ಸದ್ಯ ಈಗ ದೇವಸ್ಥಾನ ತೆರವುಗೊಳಿಸಿ ಶಾಲೆ ಕಟ್ಟುವ ವಿಚಾರಕ್ಕೆ ಸಂಘಟನೆಗಳ ನಡುವೆ ಹಗ್ಗ-ಜಗ್ಗಾಟ ನಡೆಯುತ್ತಿದೆ.

ರಾಯಚೂರು: ದೇವಸ್ಥಾನ ತೆರವುಗೊಳಿಸಿ, ಶಾಲೆ ನಿರ್ಮಾಣಕ್ಕೆ ಸಂಘಟನೆಗಳ ಪಟ್ಟು; ಕೋಮು ಗಲಭೆ ಆತಂಕ
ದೇವಸ್ಥಾನ ತೆರವುಗೊಳಿಸಿ, ಶಾಲೆ ನಿರ್ಮಾಣಕ್ಕೆ ಸಂಘಟನೆಗಳ ಪಟ್ಟು
ಭೀಮೇಶ್​​ ಪೂಜಾರ್
| Edited By: |

Updated on: Feb 08, 2024 | 1:30 PM

Share

ರಾಯಚೂರು, ಫೆ.08; ಲೋಕಸಭಾ ಚುನಾವಣೆ (Lok Sabha Election)ಸಮಯದಲ್ಲೇ ಗಡಿ ಜಿಲ್ಲೆ ರಾಯಚೂರಿನಲ್ಲಿ (Raichur) ದೇವಸ್ಥಾನ ದಂಗಲ್ ಬುಗಿಲೇಳುವ ಲಕ್ಷಣಗಳು ಗೋಚರಿಸುತ್ತಿದೆ. ದೇವಸ್ಥಾನ ತೆರವು ವಿಚಾರಕ್ಕಾಗಿ ಒಂದು ಕೋಮಿನ ಜನ ದೇವಸ್ಥಾನ ತೆರವುಗೊಳಿಸೋದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ ದೇವಸ್ಥಾನ ತೆರವು ವಿಚಾರ ಬೂದಿ ಮುಚ್ಚಿದ ಕೆಂಡದಂತಿದೆ. ರಾಯಚೂರು ನಗರದ ಚಂದ್ರಬಂಡಾ ರಸ್ತೆಯ ಸಂತೋಷ ನಗರದಲ್ಲಿರುವ ಸಿಎ ಸೈಟ್ ನಲ್ಲಿ ಸರ್ಕಾರಿ ಶಾಲೆ ನಿರ್ಮಾಣಕ್ಕಾಗಿ ಶಿಕ್ಷಣ ಇಲಾಖೆ ಆದೇಶಸಿತ್ತು. ಇದೇ ಸ್ಥಳದಲ್ಲಿ ಶಿವ ಲಿಂಗ ದೇವಸ್ಥಾನ ಇದೆ. ಹೀಗಾಗಿ ಆ ದೇವಸ್ಥಾನ ತೆರುವುಗೊಳಿಸಬೇಕು ಅಂತ ಆದೇಶಿಸಲಾಗಿತ್ತು. ಇದೇ ವಿಚಾರದ ವಿರುದ್ಧ ಕಾಲೋನಿ ನಿವಾಸಿಗಳು ದೇವಸ್ಥಾನ ತೆರವುಗೊಳಿಸದಂತೆ ಒತ್ತಾಯಿಸುತ್ತಿದ್ದಾರೆ.

ದೇವಸ್ಥಾನ ತೆರವುಗೊಳಿಸುವುದಕ್ಕೆ ವಿರೋಧ ವ್ಯಕ್ತವಾದ ಬೆನ್ನಲೆ ವಿವಿಧ ಸಂಘಟನೆಗಳು ದೇವಸ್ಥಾನ ತೆರವುಗೊಳಿಸಲೇಬೇಕು ಅಂತ ಪಟ್ಟು ಹಿಡಿದಿವೆ.ಈ ಬಗ್ಗೆ ಅಧಿಕಾರಿಗಳಿಗೆ ಹಾಗೂ ಸಂಬಂಧ ಪಟ್ಟ ಸಚಿವರಿಗೂ ದೂರು ನೀಡಿದ್ದಾರೆ. ದೇವಸ್ಥಾನ ತೆರವುಗೊಳಿಸೋ ಬಗ್ಗೆ ಸ್ಥಳೀಯರ ವಾದ ಬೇರೆ ಇದೆ. ಈ ಹಿಂದೆ ದೇವಸ್ಥಾನ ಇರೋ ಸ್ಥಳದಲ್ಲಿ ಉರ್ದು ಶಾಲೆ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ ಅಂತ ಶಾಲೆ ಕಟ್ಟಲು ವಿರೋಧಿಸಿದ್ದರು. ಆದರೆ ಅಧಿಕಾರಿಗಳು ಅಲ್ಲಿ ಉರ್ದು ಶಾಲೆಯಲ್ಲ, ಕನ್ನಡ ಶಾಲೆ ನಿರ್ಮಾಣ ಮಾಡಲಾಗುತ್ತಿದೆ ಅಂತ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಸ್ಥಳೀಯರು ಈಗ, ದೇವಸ್ಥಾನ ತೆರವುಗೊಳಿಸದೇ ದೇವಸ್ಥಾನದ ಪಕ್ಕ ಕನ್ನಡ ಶಾಲೆ ನಿರ್ಮಾಣ ಮಾಡಿ ಅಂತ ಹೇಳಿದ್ದಾರೆ. ಆದರೆ ಸ್ಥಳೀಯರ ನಿರ್ಧಾರಕ್ಕೆ ವಿವಿಧ ಸಂಘಟನೆಗಳು ಕೆರಳಿವೆ. ಯಾವುದೇ ಕಾರಣಕ್ಕೂ ದೇವಸ್ಥಾನ ತೆರವುಗೊಳಿಸದೇ ಕಟ್ಟಡ ನಿರ್ಮಾಣ ಮಾಡಬಾರ್ದು. ಕೂಡಲೇ ದೇವಸ್ಥಾನ ತೆರವುಗೊಳಿಸಿ ಅಂತ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Raichur News Some Organization Demands For Clear Temple And Build School In That Place

ದೇವಸ್ಥಾನ ಜಾಗ

ಇದನ್ನೂ ಓದಿ: ತುಮಕೂರು ಬಿಜೆಪಿ ಟಿಕೆಟ್​ ಫೈಟ್: ಟಿಕೆಟ್ ಸಿಗುವ ವಿಶ್ವಾಸದಲ್ಲಿ ಮಾಧುಸ್ವಾಮಿ; ಮತ್ತೊಬ್ಬ ಆಕಾಂಕ್ಷಿ ವಿ ಸೋಮಣ್ಣ ಹೇಳುವುದೇನು?

ಈ ಮಧ್ಯೆ ದೇವಸ್ಥಾನದ ತೆರವು ವಿಚಾರ ಕೋಮು ಗಲಭೆಗೆ ಸಾಕ್ಷಿಯಾಗೋ ಲಕ್ಷಣಗಳಿವೆ. ಇದೆ ಅನುಮಾನದಿಂದ ಪೊಲೀಸ್ ಇಲಾಖೆ ಹಾಗೂ ಸಂಬಂಧ ಪಟ್ಟ ಇಲಾಖೆಗಳು ಸೂಕ್ಷ್ಮವಾಗಿ ಈ ಪ್ರಕರಣವನ್ನು ಪರಿಗಣಿಸಿವೆ. ಇದೇ ಕಾರಣಕ್ಕೆ ರಾಯಚೂರು ನಗರದ ಬಿಜೆಪಿ ಶಾಸಕ ಡಾ.ಶಿವರಾಜ್ ಪಾಟೀಲ್ ದೇವಸ್ಥಾನ ತೆರವುಗೊಳಿಸದೇ ಇರೋದಕ್ಕೆ ಮುಂದಾಗಿದ್ದಾರೆ. ಧರ್ಮ ಸಂಘರ್ಷ ಶಂಕೆ ಬೆನ್ನಲ್ಲೇ ಶಾಲಾ ಕಟ್ಟಡ ಬೇರೆಡೆ ನಿರ್ಮಿಸಲು ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಮುಂದಾಗಿದ್ದು, ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ. ದೇವಸ್ಥಾನವಿರೊ ಸ್ಥಳದಲ್ಲಿ ನನ್ನ ಗಮನಕ್ಕೆ ಇಲ್ಲದೇ ಶಾಲೆ ಕಟ್ಟಡ ನಿರ್ಮಾಣಕ್ಕೆ ಆದೇಶ ಆಗಿದೆ. ಆ ಸ್ಥಳದಲ್ಲಿ ಸಮಸ್ಯೆ ಇದೆ. ಕೂಡಲೇ ಆ ಆದೇಶ ತಡೆಹಿಡಿಯಿರಿ ಅಂತ ಪತ್ರ ಬರೆದಿದ್ದಾರೆ. ಆದರೆ ಈ ಪ್ರಕರಣ ಮುಂದೆ ಯಾವ ತಿರುವು ಪಡೆಯುತ್ತದೆ ಕಾದು ನೋಡಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?