AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: 302 ಶಾಲಾ ಮಕ್ಕಳ ಪೈಕಿ 18 ವಿದ್ಯಾರ್ಥಿಗಳಲ್ಲಿ ಮಂಗನ ಬಾವು ರೋಗ ಪತ್ತೆ

ರಾಜ್ಯದ ಕೆಲವಡೆ ಕಡೆ ಮಂಗನ ಕಾಯಿಲೆ ಹೆಚ್ಚಾಗಿದ್ದರೆ, ಇನ್ನು ಕೆಲವಡೇ ಮಂಗನಬಾವು ಹೆಚ್ಚಾಗುತ್ತಿದೆ. ಇದೀಗ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ನೀರಲಕೇರೆ ಗ್ರಾಮದ ಹಿರಿಯ ಪ್ರಾಥಮಿಕ ‌ಶಾಲೆಯ 18 ಮಕ್ಕಳಲ್ಲಿ ಮಂಗನ ಬಾವು ರೋಗ ಪತ್ತೆ ಆಗಿದೆ. ಸುಮಾರು 302 ಮಕ್ಕಳ ಆರೋಗ್ಯ ತಪಾಸಣೆ ಮಾಡಿದ್ದು, ಈ ಪೈಕಿ 18 ಮಕ್ಕಳಲ್ಲಿ ರೋಗ ಪತ್ತೆ ಆಗಿದೆ. ಈ ಹಿನ್ನೆಲೆ ವೈದ್ಯರ ತಂಡ ಮಕ್ಕಳಿಗೆ ಸೂಕ್ತ ‌ಚಿಕಿತ್ಸೆ ನೀಡಿದ್ದಾರೆ.

ರಾಯಚೂರು: 302 ಶಾಲಾ ಮಕ್ಕಳ ಪೈಕಿ 18 ವಿದ್ಯಾರ್ಥಿಗಳಲ್ಲಿ ಮಂಗನ ಬಾವು ರೋಗ ಪತ್ತೆ
ಶಾಲಾ ಮಕ್ಕಳ ಆರೋಗ್ಯ ತಪಾಸಣೆ
ಭೀಮೇಶ್​​ ಪೂಜಾರ್
| Updated By: ಗಂಗಾಧರ​ ಬ. ಸಾಬೋಜಿ|

Updated on: Feb 09, 2024 | 2:58 PM

Share

ರಾಯಚೂರು, ಫೆಬ್ರವರಿ 9: ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ನೀರಲಕೇರೆ ಗ್ರಾಮದ ಹಿರಿಯ ಪ್ರಾಥಮಿಕ ‌ಶಾಲೆಯ 18 ಮಕ್ಕಳಲ್ಲಿ ಮಂಗನ (Monkey) ಬಾವು ರೋಗ ಪತ್ತೆ ಆಗಿದೆ. ಕೂಡಲೇ ಅಲರ್ಟ್​ ಆದ ಆರೋಗ್ಯ ಇಲಾಖೆ ಅಧಿಕಾರಿಗಳು ಶಾಲೆಯ ಸುಮಾರು 302 ಮಕ್ಕಳ ಆರೋಗ್ಯ ತಪಾಸಣೆ ಮಾಡಿದ್ದು, ಈ ಪೈಕಿ 18 ಮಕ್ಕಳಲ್ಲಿ ರೋಗ ಪತ್ತೆ ಆಗಿದೆ. ಈ ಹಿನ್ನೆಲೆ ವೈದ್ಯರ ತಂಡ ಮಕ್ಕಳಿಗೆ ಸೂಕ್ತ ‌ಚಿಕಿತ್ಸೆ ನೀಡಿದ್ದಾರೆ. ರಾಜ್ಯದ ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಳ ಆಗುತ್ತಿದೆ. ಸಿದ್ಧಾಪೂರ ತಾಲೂಕಿನಲ್ಲಿ ಕಳೆದ ಕೆಲ ದಿನದಲ್ಲಿ ಮೂರು ಮಂಗಗಳ ಸಾವಾಗಿತ್ತು. ಇದು ಇನ್ನಷ್ಟು ಆತಂಕಕ್ಕೆ ಎಡೆ ಮಾಡಿಕೊಟ್ಟಿತ್ತು. ಮಲೆನಾಡಿನ ಜನ ಭಯದಲ್ಲೆ ಜೀವನ ಸಾಗಿಸುವಂತ್ತಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣ ಹೆಚ್ಚಳ

ಕಳೆದ ಕೆಲವು ವರ್ಷಗಳಿಂದ ನಾಪತ್ತೆ ಆಗಿದ್ದ ಮಂಗನ ಕಾಯಿಲೆ ಈ ವರ್ಷ ಮತ್ತೆ ವ್ಯಾಪಕವಾಗಿ ಪಸರಿಸ ತೊಡಗಿದೆ. ಈ ಹಿಂದೆ ಕಾಯಿಲೆ ಬಂದಾಗ ಇಷ್ಟೊಂದು ವೇಗವಾಗಿ ಪಸರಿಸರಲಿಲ್ಲ, ಆದರೆ ಪ್ರಸಕ್ತ ಸಾಲಿನಲ್ಲಿ ಮಳೆ ಕಡಿಮೆ ಆಗಿರುವುದರಿಂದ ಉಷ್ಣತೆಗೆ ರೋಗ ವೇಗವಾಗಿ ಹರಡುತ್ತಿದೆ ಎನ್ನುತ್ತಿದ್ದಾರೆ ತಜ್ಷರು.

ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಾದ ಮಂಗನ ಕಾಯಿಲೆ; 14 ದಿನಗಳಲ್ಲಿ 37 ಜನರಿಗೆ ಸೋಂಕು, 3 ಮಂಗಗಳ ಸಾವು

ಜನವರಿ 18 ರಂದು ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪೂರ ತಾಲೂಕಿನ ಜಡ್ಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಒಂದು ಮಂಗನ ಸಾವಿನಿಂದ ಆರಂಭವಾದ ಮಂಗನ ಕಾಯಿಲೆ, ಸದ್ಯ 37 ಜನರಿಗೆ ಅಂಟಿದ್ದೂ 24 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೂ ಇನ್ನೂಳಿದ 13 ಜನ ಮನೆಯಲ್ಲೆ ಚಿಕಿತ್ಸೆ ಪಡೆಯುತ್ತಿದ್ದಾರೆ.

BAAVUROGA

ರೋಗ ಅಂಟಿದ 37 ಜನರೂ ಔಟ್ ಆಫ್ ಡೆಂಜರ್ ಇದ್ದಾರೆ. ಆದರೆ ಈಗಾಗಲೇ ಲಸಿಕೆ ಇಲ್ಲದೆ ಜನ ಆತಂಕದಲ್ಲಿ ಜೀವನ ಕಳೆಯುತ್ತಿರುವ ಬೆನ್ನಲೆ ಸಿದ್ಧಾಪೂರ ತಾಲೂಕಿನ ಕಾಂಡಂಚಿನಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಮೂರು ಮಂಗಗಳ ಸಾವು ಇನ್ನಷ್ಟು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.

ಮಂಗನಬಾವಿಗೆ ಮಕ್ಕಳು ಸೇರಿದಂತೆ ವಯಸ್ಕರರು ಪರದಾಟ

ಕೊಪ್ಪಳ ಜಿಲ್ಲೆಯಲ್ಲೂ ಮಂಗನಬಾವಿನಿಂದ ಮಕ್ಕಳು ಸೇರಿದಂತೆ ವಯಸ್ಕರರು ಕೂಡ ಪರದಾಡಿದ್ದಾರೆ. ತೀರ್ವ ಜ್ವರ ಮತ್ತು ನೋವಿನಿಂದ ಮಕ್ಕಳು ಸಂಕಷ್ಟ ಪಡುತ್ತಿವೆ. ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಮಂಗನಬಾವು ಮಕ್ಕಳನ್ನು ಹೈರಾಣು ಮಾಡಿದ್ದು, ಪೋಷಕರ ಆತಂಕವನ್ನು ಕೂಡ ಹೆಚ್ಚಿಸಿದೆ.

ಇದನ್ನೂ ಓದಿ: Kyasanur Forest Disease: ಮಂಗನ ಕಾಯಿಲೆಗೆ ತತ್ತರಿಸುತ್ತಿದೆ ಉತ್ತರ ಕನ್ನಡ ಜಿಲ್ಲೆ, 10 ದಿನಗಳಲ್ಲಿ 21 ಜನರಿಗೆ ಸೋಂಕು

ಮಂಗನಬಾವು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಸಾಮಾನ್ಯವಾಗಿ ಚಳಿಗಾಲದಲ್ಲಿ ಹೆಚ್ಚಾಗುವ ಈ ಸೋಂಕು, ಚಳಿಗಾಲ ಮುಗಿಯುವ ಹಂತದಲ್ಲಿದ್ದರು ಕೂಡ ಕಡಿಮೆಯಾಗದೇ, ತೀರ್ವವಾಗುತ್ತಿದೆ. ಮಕ್ಕಳು ಶಾಲೆಗೆ ಹೋಗುವದು ಮತ್ತು ಕೂಡಿ ಆಟವಾಡುವದರಿಂದ ಮಕ್ಕಳಲ್ಲಿ ತೀರ್ವವಾಗಿ ಈ ಸೋಂಕು ಹರಡುತ್ತದೆ. ಹೀಗಾಗಿ ಸೋಂಕಿನ ಲಕ್ಷಣ ಇರುವ ಮಕ್ಕಳು ಶಾಲೆಗೆ ಹೋಗದೇ ಇರೋವದು, ಪ್ರತ್ಯೇಕವಾಗಿ ಇರೋದರಿಂದ ಸೋಂಕು ಹಬ್ಬದಂತೆ ನೋಡಿಕೊಳ್ಳಬಹುದಾಗಿದೆ.

ಈ ಮಂಗನಬಾವಿಗೆ ಪ್ರತ್ಯೇಕವಾಗಿ ಯಾವುದೇ ಚಿಕಿತ್ಸೆ ಇಲ್ಲದೇ ಇರೋದರಿಂದ ಜ್ವರ ಮತ್ತು ನೋವನ್ನು ಕಡಿಮೆ ಮಾಡಲು ಮಾತ್ರ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಸೋಕಿಂತ ರೋಗಿಯಲ್ಲಿ ವಾರದಿಂದ ಎರಡು ವಾರಗಳ ಕಾಲ ಈ ಸೋಂಕು ಸಕ್ರೀಯವಾಗಿರಲಿದ್ದು, ಸ್ವಯಂ ನಿಯಂತ್ರಣ ಕ್ರಮಗಳಿಂದ ಈ ಸೋಂಕನ್ನು ನಿಯಂತ್ರಿಸಬಹುದು ಅಂತಿದ್ದಾರೆ ವೈದ್ಯರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ