AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: 120ಕ್ಕೂ ಹೆಚ್ಚು ನಕಲಿ ವೈದ್ಯರಿಗೆ ಆರೋಗ್ಯ ಇಲಾಖೆ ಆಪರೇಷನ್; ಕ್ಲಿನಿಕ್​​ ಸೀಜ್, ಸಾವಿರಾರು ರೂ ದಂಡ

ಇತ್ತೀಚೆಗೆ ನಡೆದ ಕೆಡಿಪಿ ಸಭೆಯಲ್ಲಿ ಎಂಎಲ್​ಸಿ ಶರಣಗೌಡ ಬಯ್ಯಾಪುರ ನಕಲಿ ವೈದ್ಯರ ಹಾವಳಿ ಬಗ್ಗೆ ಧ್ವನಿ ಎತ್ತಿದ್ದರು. ಇದರ ಬೆನ್ನಲ್ಲೇ ರಾಯಚೂರು ನಗರ ಸೇರಿ ಜಿಲ್ಲೆಯಾದ್ಯಂತ ಒಟ್ಟು 120ಕ್ಕೂ ಹೆಚ್ಚು ನಕಲಿ ವೈದ್ಯರನ್ನು ಪತ್ತೆ ಮಾಡಿರುವ ಆರೋಗ್ಯ ಇಲಾಖೆ, ಕ್ಲಿನಿಕ್‌ಗಳನ್ನು ಸೀಜ್​ ಮಾಡುವ ಮೂಲಕ ಆಪರೇಷನ್ ಮಾಡಲಾಗಿದೆ.

ರಾಯಚೂರು: 120ಕ್ಕೂ ಹೆಚ್ಚು ನಕಲಿ ವೈದ್ಯರಿಗೆ ಆರೋಗ್ಯ ಇಲಾಖೆ ಆಪರೇಷನ್; ಕ್ಲಿನಿಕ್​​ ಸೀಜ್, ಸಾವಿರಾರು ರೂ ದಂಡ
ನಕಲಿ ಕ್ಲಿನಿಕ್​ ಮೇಲೆ ಅಧಿಕಾರಿಗಳು ದಾಳಿ
ಭೀಮೇಶ್​​ ಪೂಜಾರ್
| Updated By: ಗಂಗಾಧರ​ ಬ. ಸಾಬೋಜಿ|

Updated on:Sep 15, 2025 | 8:57 AM

Share

ರಾಯಚೂರು, ಸೆಪ್ಟೆಂಬರ್​​ 15: ವೈದ್ಯೋ ನಾರಾಯಣೋ ಹರಿ ಎಂಬ ಮಾತಿದೆ. ಜನರು ದೇವರನ್ನ ಕಣ್ಣಾರೆ ಕಾಣದೇ ಇದರೂ ವೈದ್ಯರಲ್ಲಿ ದೇವರನ್ನ ಕಾಣುತ್ತಾರೆ. ಆದರೆ ಅಂತಹ ವೈದ್ಯರೇ ನಕಲಿ (Fake Doctors) ಎಂದು ಗೊತ್ತಾದರೆ, ರೋಗಿಗಳ ಗತಿ ಏನು? ಸದ್ಯ ಇಂತಹದೊಂದು ಘಟನೆ ನಗರದಲ್ಲಿ ಬೆಳಕಿಗೆ ಬಂದಿದ್ದು, ವೈದ್ಯರ ಮುಖವಾಡ ಹಾಕಿಕೊಂಡು ಚಿಕಿತ್ಸೆ ನೀಡುತ್ತಿದ್ದ ನಕಲಿ ವೈದ್ಯರನ್ನು ಪತ್ತೆ ಮಾಡಿ, ಕ್ಲಿನಿಕ್​​​ಗಳನ್ನು ಸೀಜ್​ ಮಾಡುವ ಮೂಲಕ ಆರೋಗ್ಯ ಇಲಾಖೆ (Health Department) ಬಿಗ್ ಆಪರೇಷನ್ ಮಾಡಿದೆ.

ಗಡಿ ಜಿಲ್ಲೆ ರಾಯಚೂರಿನಲ್ಲಿ ಕಳೆದ ಕೆಲ ವರ್ಷಗಳಿಂದ ನೂರಾರು ನಕಲಿ ವೈದ್ಯರು ಬಾಲ ಬಿಚ್ಚಿದ್ದಾರೆ. ಅಸಲಿ ವೈದ್ಯರಂತೆ ತಾವೇ ವಿವಿಧ ಮೆಡಿಕಲ್ ಕೋರ್ಸ್ ಓದಿ ಕೊಂಡಿರುವುದಾಗಿ ಫೋಸ್​​ ಕೊಡುತ್ತಾ ಅಸಲಿ ವೈದ್ಯರನ್ನೂ ಮೀರಿಸುವ ರೀತಿ ಈ ನಕಲಿ ವೈದ್ಯರು ಜನರಿಗೆ ಚಿಕಿತ್ಸೆ ನೀಡುತ್ತಿದ್ದರು.

ನಕಲಿ ವೈದ್ಯರ ಹಾವಳಿ ಬಗ್ಗೆ ಧ್ವನಿ ಎತ್ತಿದ್ದ ಎಂಎಲ್​ಸಿ ಶರಣಗೌಡ ಬಯ್ಯಾಪುರ

ಇದೇ ನಕಲಿ ವೈದ್ಯರು, ಆರ್​​ಎಂಪಿ ವೈದ್ಯರ ವಿರುದ್ಧ ಇತ್ತೀಚೆಗೆ ನಡೆದ ಕೆಡಿಪಿ ಸಭೆಯಲ್ಲಿ ಎಂಎಲ್​ಸಿ ಶರಣಗೌಡ ಬಯ್ಯಾಪುರ ಆಕ್ರೋಶ ಹೊರಹಾಕಿದ್ದರು. ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದರು. ಆರ್​ಎಂಪಿಗಳು, ಅವರ ಕೈಯಲ್ಲಿ ಕೆಲಸ ಮಾಡಿರುವವರೇ ಜಿಲ್ಲೆಯಲ್ಲಿ ಖ್ಯಾತ ವೈದ್ಯರು ಅಂತ ಅವರು ಕಿಡಿಕಾರಿದ್ದರು.

ಇದನ್ನೂ ಓದಿ
Image
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಮಹಿಳೆಗೆ ಹೆರಿಗೆ: ಸರ್ಕಾರಿ ಆಸ್ಪತ್ರೆ ವಿಡಿಯೋ
Image
ರಾಯಚೂರು: ಊಟ ಸೇವನೆ ಬಳಿಕ ಹೊಟ್ಟೆನೋವು, ಒಂದೇ ಕುಟುಂಬದ ಮೂವರು ಸಾವು

ಇದನ್ನೂ ಓದಿ: ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಮಹಿಳೆಗೆ ಹೆರಿಗೆ: ಸರ್ಕಾರಿ ಆಸ್ಪತ್ರೆ ಅವಸ್ಥೆ ವಿಡಿಯೋ ವೈರಲ್

ಅಷ್ಟೇ ಅಲ್ಲ ಚಿಕಿತ್ಸೆ ಆರಂಭದಲ್ಲೇ ಆರ್​ಎಂಪಿ ನಕಲಿ ವೈದ್ಯರು ಹೈಡೋಸ್ ಚಿಕಿತ್ಸೆ ಕೊಡುತ್ತಾರೆ. ಹೀಗಾಗಿ ನಕಲಿ ವೈದ್ಯರ ಬಳಿ ಬರುವವರು ಅತೀ ಕಡಿಮೆ ಅವಧಿಯಲ್ಲೇ ಗುಣ ಮುಖರಾಗುತ್ತಾರೆ. ಆದರೆ ಅವರ ದೀರ್ಘಕಾಲದ ಸ್ಥಿತಿಗತಿಯನ್ನ ಆರ್​​ಎಂಪಿ ವೈದ್ಯರು ತಲೆಕಡೆಸಿಕೊಳ್ಳಲ್ಲ. ಅಸಲಿ ವೈದ್ಯರು ಹಂತಹಂತವಾಗಿ ಚಿಕಿತ್ಸೆ ನೀಡುತ್ತಾರೆ. ಹೀಗಾಗಿ ಜನರು ಹೈಡೋಸ್ ಕೊಡುವ ನಕಲಿ ವೈದ್ಯರ ಬಳಿಯೇ ಹೋಗುತ್ತಾರೆ ಅಂತ ಎಂಎಲ್​​ಸಿ ಶರಣೇಗೌಡ ಬಯ್ಯಾಪುರ ಕಿಡಿಕಾರಿದ್ದರು.

ಇತ್ತ ಇದೇ ವಿಷಯ ಜಿಲ್ಲೆಯಾದ್ಯಂತ ಬಾರಿ ಸದ್ದು ಮಾಡಿತ್ತು. ಇದಾದ ಬಳಿಕ ಜಿಲ್ಲೆಯಲ್ಲಿ ಆಕ್ಟಿವ್ ಆಗಿರುವ ನಕಲಿ ವೈದ್ಯರ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಇದೇ ಕಾರಣಕ್ಕೆ ಜಿಲ್ಲಾಧಿಕಾರಿ ನಿತೀಶ್.ಕೆ ಅವರ ಆದೇಶದನ್ವಯ ಆರೋಗ್ಯ ಇಲಾಖೆ ಜಿಲ್ಲೆಯಲ್ಲಿ ನಕಲಿ ವೈದ್ಯರ ವಿರುದ್ಧ ಬಿಗ್ ಆಪರೇಶನ್ ಮಾಡಿ ಮುಗಿಸಿದೆ.

120ಕ್ಕೂ ಹೆಚ್ಚು ನಕಲಿ ವೈದ್ಯರ ಪತ್ತೆ, ಕ್ಲಿನಿಕ್​ ಸೀಜ್ 

ರಾಯಚೂರು ನಗರ ಸೇರಿ ಜಿಲ್ಲೆಯಾದ್ಯಂತ ಒಟ್ಟು 120ಕ್ಕೂ ಹೆಚ್ಚು ನಕಲಿ ವೈದ್ಯರ ಪಟ್ಟಿಯನ್ನ ಆರೋಗ್ಯ ಇಲಾಖೆ ಸಿದ್ಧಪಡಿಸಿತ್ತು. ಅದರ ಆಧಾರದಲ್ಲಿ ಎಲ್ಲಾ 120 ನಕಲಿ ವೈದ್ಯರಿಗೆ ಬಿಗ್ ಶಾಕ್ ಕೊಟ್ಟಿದೆ. ಸದ್ಯ 120 ನಕಲಿ ಕ್ಲಿನಿಕ್​ಗಳನ್ನ ಸೀಜ್ ಮಾಡಿ ಆರೋಗ್ಯ ಇಲಾಖೆ ಕ್ಲೋಸ್ ಮಾಡಿದೆ.

ಕೆಪಿಎಂಇ ರಿಜಿಸ್ಟ್ರೇಷನ್ ಇಲ್ಲದೇ ಇರುವ, ಅಲೋಪತಿ ಚಿಕಿತ್ಸೆ ನೀಡುತ್ತಿರುವ, ಆಯುಷ್ ವೈದ್ಯರಿಗೂ ಶಾಕ್ ನೀಡಲಾಗಿದೆ. ಈ ರೀತಿ ನಿಯಮ ಉಲ್ಲಂಘಿಸಿದ್ದ 17 ಜನರಿಗೆ 25 ರಿಂದ 50 ಸಾವಿರ ರೂ. ದಂಡ ವಿಧಿಸಲಾಗಿದೆ. ನಕಲಿ ವೈದ್ಯರಿಗೆ ಕಾನೂನು ಕ್ರಮ ಜರುಗಿಸುವುದಾಗಿ ಆರೋಗ್ಯ ಇಲಾಖೆ ಡಿಎಚ್​​ಓ ಡಾ.ಸುರೇಂದ್ರಬಾಬು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ನಾಯಿಕೊಡೆಗಳಂತೆ ತಲೆ ಎತ್ತಿರುವ ನಕಲಿ ವೈದ್ಯರ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯ ಪ್ಲ್ಯಾನ್ ಇದು

ಸದ್ಯ ಇಂತಹ ನಕಲಿ ವೈದ್ಯರ ಬಗ್ಗೆ ಎಚ್ಚರವಹಿಸಬೇಕಿದೆ. ಕಡಿಮೆ ಹಣ ಖರ್ಚಾಗತ್ತೆ ಅಂತ ನಕಲಿ ಆರ್​​ಎಂಪಿ ವೈದ್ಯರ ಬಳಿ ಚಿಕಿತ್ಸೆಗೆ ಹೋಗುವ ಮೊದಲು ಒಮ್ಮೆ ಯೋಚಿಸಬೇಕಿದೆ. ಇತ್ತ ಆರೋಗ್ಯ ಇಲಾಖೆ ಕೂಡ ಜಾಣ ಕುರುಡುತನ ಪ್ರದರ್ಶನ ಮಾಡದೇ ಸಾರ್ವಜನಿಕರ ಹಿತಾಸಕ್ತಿ ಕಾಪಾಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:56 am, Mon, 15 September 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!