Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು ಸರ್ಕಾರಿ ಶಾಲೆಯಲ್ಲಿ ಎಣ್ಣೆ ಪಾರ್ಟಿ, ಬಾಡೂಟ; ಮುಖ್ಯೋಪಾಧ್ಯಾಯರಿಂದ ದೂರು ದಾಖಲು

ಶಾಲಾ ಅಡುಗೆ ಕೋಣೆಯಲ್ಲಿದ್ದ ಮೊಟ್ಟೆ, ಹಾಲಿನಪುಡಿ, ಅಕ್ಕಿ, ಸಕ್ಕರೆ ಅಡುಗೆ ಬಳಸುವ ಎಣ್ಣೆ ಇನ್ನಿತರ ವಸ್ತುಗಳು ಕಳ್ಳತನವಾಗಿವೆ. ಮಕ್ಕಳಿಗಾಗಿ ನೀಡಲಾಗುತ್ತಿದ್ದ ಆಹಾರ ಪರಿಕರಗಳು ಕಳ್ಳತನವಾಗಿವೆ.

ರಾಯಚೂರು ಸರ್ಕಾರಿ ಶಾಲೆಯಲ್ಲಿ ಎಣ್ಣೆ ಪಾರ್ಟಿ, ಬಾಡೂಟ; ಮುಖ್ಯೋಪಾಧ್ಯಾಯರಿಂದ ದೂರು ದಾಖಲು
ಶಾಲೆಯ ದಾಖಲಾತಿಗಳ ಮೇಲೆ ಎಣ್ಣೆ ಬಾಟಲಿಗಳನ್ನ ಹಾಕಿದ್ದಾರೆ
Follow us
TV9 Web
| Updated By: sandhya thejappa

Updated on: Jan 01, 2022 | 11:43 AM

ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ ರಬ್ಬಣಕಲ್ ಕ್ಯಾಂಪ್​ನ ಸರ್ಕಾರಿ ಶಾಲೆಯ ಬೀಗ ಮುರಿದು ಹೊಸ ವರ್ಷದ ಎಣ್ಣೆ ಪಾರ್ಟಿ ಮಾಡಿದ್ದಾರೆ. ಆರೋಪಿಗಳು ಶಾಲೆಯ ಬಿಸಿಯೂಟ ಸಾಮಾಗ್ರಿಗಳನ್ನ ಬಳಸಿ ಮೊಟ್ಟೆ, ಮಾಂಸ ಬೇಯಿಸಿ ಪಾರ್ಟಿ ಮಾಡಿದ್ದಾರೆ. ಅಲ್ಲದೆ ಬಳಸಿದ ವಸ್ತುಗಳನ್ನ ಎಲ್ಲೆಂದರಲ್ಲಿ ಬಿಸಾಕಿದ್ದಾರೆ. ಶಾಲೆಯ ದಾಖಲಾತಿಗಳ ಮೇಲೆ ಮದ್ಯ ಸುರಿದು ವಿಕೃತಿ ಮೆರೆದಿದ್ದು, ಈ ಬಗ್ಗೆ ಮುಖ್ಯೋಪಾಧ್ಯಾಯರು ಮಾನ್ವಿ ಠಾಣೆಗೆ ದೂರು ನೀಡಿದ್ದಾರೆ.

ಶಾಲಾ ಅಡುಗೆ ಕೋಣೆಯಲ್ಲಿದ್ದ ಮೊಟ್ಟೆ, ಹಾಲಿನಪುಡಿ, ಅಕ್ಕಿ, ಸಕ್ಕರೆ ಅಡುಗೆ ಬಳಸುವ ಎಣ್ಣೆ ಇನ್ನಿತರ ವಸ್ತುಗಳು ಕಳ್ಳತನವಾಗಿವೆ. ಮಕ್ಕಳಿಗಾಗಿ ನೀಡಲಾಗುತ್ತಿದ್ದ ಆಹಾರ ಪರಿಕರಗಳು ಕಳ್ಳತನವಾಗಿವೆ. ಶಾಲೆಯ ಆವರಣದಲ್ಲಿ ಮದ್ಯದ ಬಾಟಲ್​ಗಳು, ಮಾಂಸದ ತುಂಡುಗಳು ಪತ್ತೆಯಾಗಿವೆ. ಇಂದು ಬೆಳಿಗ್ಗೆ ಶಾಲೆಗೆ ಬಂದಾಗ ಕಿಡಿಗೇಡಿಗಳು ಪಾರ್ಟಿ ಮಾಡಿರುವ ಬಗ್ಗೆ ಬೆಳಕಿಗೆ ಬಂದಿದೆ. ಸದ್ಯ ಮಾನ್ವಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇನ್ನು ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿಯ ರೆಸಾರ್ಟ್​ನಲ್ಲಿ ಮಸ್ತ್ ಪಾರ್ಟಿ ಮಾಡಿದ್ದಾರೆ. ಅಲ್ಲದೇ ಪಾರ್ಟಿ ಬಗ್ಗೆ ಪ್ರಶ್ನಿಸಿದ ಪೊಲೀಸ್ ಇನ್ಸ್​ಪೆಕ್ಟರ್ ಮೇಲೆಯೇ ಆರೋಪಿಗಳು ಹಲ್ಲೆಗೆ ಯತ್ನಿಸಿದ್ದಾರೆ. ವೈಟ್ ನಿರ್ವಾಣ ಜಡೇ ರೆಸಾರ್ಟ್ ಮಾಲೀಕ ಮತ್ತು ಸಹಚರರು ಚಿಕ್ಕಬಳ್ಳಾಪುರ ಇನ್ಸ್​ಪೆಕ್ಟರ್​ ಪ್ರಶಾಂತ್ ಎಂಬುವವರನ್ನ ಎಳೆದಾಡಿ ಹಲ್ಲೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ಅಗಲಗುರ್ಕಿ ಬಳಿಯ ರೆಸಾರ್ಟ್ನಲ್ಲಿ ರಾಜಾರೋಷವಾಗಿ ಡಿಜೆ ಹಾಕಿಕೊಂಡು ಪಾರ್ಟಿ ಮಾಡಿದ್ದಾರೆ. ಜೊತೆಗೆ ಕುಡಿದ ಮತ್ತಿನಲ್ಲಿ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ.

ಇದನ್ನೂ ಓದಿ

New Year 2022: ಒಬ್ಬ ಆಟಗಾರ ಮಾತ್ರ ಮಿಸ್: ಟೀಮ್ ಇಂಡಿಯಾದ ಹೊಸ ವರ್ಷದ ಆಚರಣೆ ಹೇಗಿತ್ತು ನೋಡಿ

ಕೊಟ್ಟಿಗೆಹಾರ: ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ, ಸುಟ್ಟು ಕರಕಲಾದ ಬಸ್

ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು
ಕೋಲಾರ: ಹೆಲ್ಮೆಟ್ ತೆಗೀತಿದ್ದಂತೆ ಬುಸ್ ಎಂದ ನಾಗಪ್ಪ! ಆಮೇಲೇನಾಯ್ತು ನೋಡಿ
ಕೋಲಾರ: ಹೆಲ್ಮೆಟ್ ತೆಗೀತಿದ್ದಂತೆ ಬುಸ್ ಎಂದ ನಾಗಪ್ಪ! ಆಮೇಲೇನಾಯ್ತು ನೋಡಿ
ಧಗ ಧಗನೆ ಹೊತ್ತಿ ಉರಿದ ಸಿಲಿಂಡರ್ ತುಂಬಿದ್ದ ಟ್ರಕ್, ಹಲವು ಬಾರಿ ಸ್ಫೋಟ
ಧಗ ಧಗನೆ ಹೊತ್ತಿ ಉರಿದ ಸಿಲಿಂಡರ್ ತುಂಬಿದ್ದ ಟ್ರಕ್, ಹಲವು ಬಾರಿ ಸ್ಫೋಟ
VIDEO: ರನೌಟ್ ಮಾಡಲು ಕುಲ್ದೀಪ್ ಯಾದವ್​ನ ತಳ್ಳಿದ ರಿಷಭ್ ಪಂತ್
VIDEO: ರನೌಟ್ ಮಾಡಲು ಕುಲ್ದೀಪ್ ಯಾದವ್​ನ ತಳ್ಳಿದ ರಿಷಭ್ ಪಂತ್
VIDEO: ಗೆಲ್ಲುವ ಪಂದ್ಯವನ್ನು 'ಕೈ ಚೆಲ್ಲಿದ' ರಿಷಭ್ ಪಂತ್
VIDEO: ಗೆಲ್ಲುವ ಪಂದ್ಯವನ್ನು 'ಕೈ ಚೆಲ್ಲಿದ' ರಿಷಭ್ ಪಂತ್
Daily Devotional: ಸ್ತ್ರೀಯರಿಗೆ ಎಡಗಣ್ಣು ಅದುರುವುದರ ಹಿಂದಿನ ರಹಸ್ಯ
Daily Devotional: ಸ್ತ್ರೀಯರಿಗೆ ಎಡಗಣ್ಣು ಅದುರುವುದರ ಹಿಂದಿನ ರಹಸ್ಯ