AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೋನ್ ಪೇನಲ್ಲಿ ಹಣ ಪಡೆದು ಕ್ಯಾಶ್ ಕೊಡುವ ಮುನ್ನ ಎಚ್ಚರ! ನಿಮ್ಮ ಖಾತೆಯನ್ನೇ ಖಾಲಿ ಮಾಡ್ತಾರೆ ವಂಚಕರು

ರಾಯಚೂರು ಜಿಲ್ಲೆಯ ಅರಕೇರಾದಲ್ಲಿ ಕದ್ದ ಮೊಬೈಲ್ ಮೂಲಕ ಸಿಎಸ್‌ಸಿ ಕೇಂದ್ರಗಳಲ್ಲಿ 2.5 ಲಕ್ಷ ರೂ. ಫೋನ್ ಪೇ ಮಾಡಿಸಿಕೊಂಡು ನಗದು ಪಡೆದ ವಂಚನೆ ಬೆಳಕಿಗೆ ಬಂದಿದೆ. 'ಮೆಡಿಕಲ್ ಎಮರ್ಜನ್ಸಿ' ಎಂದು ಸುಳ್ಳು ಹೇಳಿದ ಕಳ್ಳರ ಮಾತು ನಂಬಿ ನಗದು ನೀಡಿದ ಮಲ್ಲಿಕಾರ್ಜುನ ಹಾಗೂ ಮಹಾಂತೇಶ್ ತಂಡದ ಬ್ಯಾಂಕ್ ಖಾತೆಗಳನ್ನು ಪೊಲೀಸರು ಫ್ರೀಜ್ ಮಾಡಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.

ಫೋನ್ ಪೇನಲ್ಲಿ ಹಣ ಪಡೆದು ಕ್ಯಾಶ್ ಕೊಡುವ ಮುನ್ನ ಎಚ್ಚರ! ನಿಮ್ಮ ಖಾತೆಯನ್ನೇ ಖಾಲಿ ಮಾಡ್ತಾರೆ ವಂಚಕರು
ಫೋನ್ ಪೇನಲ್ಲಿ ಹಣ ಪಡೆದು ಕ್ಯಾಶ್ ಕೊಡುವ ಮುನ್ನ ಎಚ್ಚರ!
ಭೀಮೇಶ್​​ ಪೂಜಾರ್
| Edited By: |

Updated on: Jun 09, 2026 | 8:56 AM

Share

ರಾಯಚೂರು, ಜೂನ್ 09: ತಾಂತ್ರಿಕತೆ ಬೆಳೆದಂತೆ ಸೈಬರ್ ಅಪರಾಧಗಳ ಸಂಖ್ಯೆಯೂ ಹೆಚ್ಚಾಗುತ್ತಿದ್ದು, ಅಪರಿಚಿತರ ಮಾತನ್ನು ನಂಬಿ ಯುಪಿಐ (UPI) ಮೂಲಕ ಹಣ ಪಡೆದು ನಗದು (Cash) ನೀಡುವ ಮುನ್ನ ನೂರು ಬಾರಿ ಯೋಚಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಇಂತಹದೇ ಒಂದು ಆಘಾತಕಾರಿ ಘಟನೆ ರಾಯಚೂರು ಜಿಲ್ಲೆಯ ಅರಕೇರಾ ಪಟ್ಟಣದಲ್ಲಿ ನಡೆದಿದ್ದು, ಕಮಿಷನ್ ಆಸೆ ಹಾಗೂ ಮಾನವೀಯತೆ ದೃಷ್ಟಿಯಿಂದ ಅಪರಿಚಿತರಿಗೆ ಸಹಾಯ ಮಾಡಲು ಹೋದ ಯುವಕರು ಈಗ ಸೈಬರ್ ಪೊಲೀಸರ ವಿಚಾರಣೆಗೆ ಬೆಚ್ಚಿಬಿದ್ದಿದ್ದಾರೆ.

ಮುಖ್ಯಾಂಶಗಳು

  • ಅಪರಿಚಿತರ ಫೋನ್ ಪೇ ನಂಬಿ ನಗದು ನೀಡಿ ಯುವಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.
  • ಕಳ್ಳರು ಕದ್ದ ಫೋನ್‌ ಬಳಸಿ 2.5 ಲಕ್ಷ ರೂಪಾಯಿ ವರ್ಗಾವಣೆ ಮಾಡಿದ್ದಾರೆ.
  • ವಂಚನೆ ತಿಳಿಯದೆ ಹಣ ವ್ಯವಹಾರ ನಡೆಸಿದ ಯುವಕರ ಬ್ಯಾಂಕ್ ಅಕೌಂಟ್ ಬ್ಲಾಕ್.

ಮೆಡಿಕಲ್ ಎಮರ್ಜನ್ಸಿ ಎಂದ ಕಳ್ಳರು: ಲಾಕ್ ಆದ ಸಿಎಸ್‌ಸಿ ಕೇಂದ್ರಗಳು!

ಅರಕೇರಾ ಪಟ್ಟಣದಲ್ಲಿ ಕಾಮನ್ ಸರ್ವಿಸ್ ಸೆಂಟರ್ (CSC) ನಡೆಸುತ್ತಿದ್ದ ಮಲ್ಲಿಕಾರ್ಜುನ, ಮಹಾಂತೇಶ್ ಸೇರಿದಂತೆ ಮೂವರು ಯುವಕರ ತಂಡವೇ ಈ ವಂಚನೆಗೆ ಒಳಗಾಗಿದೆ. ಇತ್ತೀಚೆಗೆ ಇವರ ಕೇಂದ್ರಗಳಿಗೆ ಬಂದಿದ್ದ ಇಬ್ಬರು ಅಪರಿಚಿತರು, ತಮಗೆ ಮೆಡಿಕಲ್ ಎಮರ್ಜನ್ಸಿ ಇದೆ ಎಂದು ನಂಬಿಸಿದ್ದಾರೆ. ತಮ್ಮ ಫೋನ್ ಪೇ ಮೂಲಕ ಸಿಎಸ್‌ಸಿ ಕೇಂದ್ರದ ಖಾತೆಗೆ ಹಣ ವರ್ಗಾವಣೆ ಮಾಡುವುದಾಗಿ ಹೇಳಿ, ಅದಕ್ಕೆ ಪ್ರತಿಯಾಗಿ ನಗದು ಹಣ ನೀಡುವಂತೆ ವಿನಂತಿಸಿದ್ದಾರೆ. ಜೊತೆಗೆ 1,000 ರೂಪಾಯಿಗೆ 10 ರೂಪಾಯಿ ಕಮಿಷನ್ ನೀಡುವುದಾಗಿಯೂ ಆಮಿಷ ಒಡ್ಡಿದ್ದಾರೆ.

ಇದನ್ನು ನಂಬಿದ ಯುವಕರು ಒಟ್ಟು ಮೂರು ಮಳಿಗೆಗಳಿಂದ ಸುಮಾರು 2.5 ಲಕ್ಷ ರೂಪಾಯಿ ಹಣದ ಟ್ರಾನ್ಸಾಕ್ಷನ್ ಮಾಡಿಸಿಕೊಂಡು, ಕಳ್ಳರಿಗೆ ನಗದು ಕೊಟ್ಟಿದ್ದಾರೆ. ಆದರೆ, ಆ ಇಬ್ಬರು ವ್ಯಕ್ತಿಗಳು ಕದ್ದ ಮೊಬೈಲ್‌ನಿಂದ ಯುಪಿಐ ಟ್ರಾನ್ಸಾಕ್ಷನ್ ಮಾಡುತ್ತಿದ್ದಾರೆ ಎಂಬ ಸತ್ಯ ಯುವಕರಿಗೆ ತಿಳಿದಿರಲಿಲ್ಲ.

ಮೊಬೈಲ್ ಕಳವು ಮತ್ತು ಪೊಲೀಸ್ ತನಿಖೆ

ಮೇ 25 ರಂದು ರಾಯಚೂರಿನಿಂದ ಮಂತ್ರಾಲಯಕ್ಕೆ ಹೊರಟಿದ್ದ ರಾಂಬಾಬು ಎಂಬುವವರ ಮೊಬೈಲ್ ಅನ್ನು ಬಸ್ ಹತ್ತುವ ವೇಳೆ ಕಳ್ಳರು ಕದ್ದಿದ್ದರು. ಮೊಬೈಲ್ ಕದ್ದ ಕೆಲವೇ ಗಂಟೆಗಳಲ್ಲಿ ಕಳ್ಳರು ಅರಕೇರಾದ ಸಿಎಸ್‌ಸಿ ಕೇಂದ್ರಗಳಲ್ಲಿ ರಾಂಬಾಬು ಅವರ ಖಾತೆಯಿಂದ ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ. ಸರಣಿ ಹಣ ಕಡಿತಗೊಂಡ ಮೆಸೇಜ್ ನೋಡಿ ಗಾಬರಿಯಾದ ರಾಂಬಾಬು ತಕ್ಷಣ ಸದರ ಬಜಾರ್ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರು ದಾಖಲಾಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಪೊಲೀಸರು, ಹಣ ವರ್ಗಾವಣೆಯಾದ ಅರಕೇರಾ ಸಿಎಸ್‌ಸಿ ಕೇಂದ್ರದ ಹುಡುಗರಿಗೆ ಫೋನ್ ಮಾಡಿ ವಿಚಾರಿಸಿದ್ದಾರೆ. ಆಗ ತಮಗೆ ಆ ವ್ಯಕ್ತಿಗಳು ಯಾರೆಂದೇ ಗೊತ್ತಿಲ್ಲ ಎಂದು ಯುವಕರು ಸ್ಪಷ್ಟನೆ ನೀಡಿದ್ದಾರೆ. ಸದ್ಯ ಮುಂಜಾಗ್ರತಾ ಕ್ರಮವಾಗಿ ಹಣ ಕಳೆದುಕೊಂಡ ರಾಂಬಾಬು ಹಾಗೂ ಅಪರಿಚಿತರಿಂದ ಹಣ ಹಾಕಿಸಿಕೊಂಡು ನಗದು ಕೊಟ್ಟ ಮಲ್ಲಿಕಾರ್ಜುನ್, ಮಹಾಂತೇಶ್ ಸೇರಿದಂತೆ ಇತರರ ಬ್ಯಾಂಕ್ ಖಾತೆಗಳನ್ನು ಪೊಲೀಸರು ಫ್ರೀಜ್ (Freeze) ಮಾಡಿದ್ದಾರೆ.

ಇದನ್ನೂ ಓದಿ Viral News: ಹೆಂಡತಿಗೆ ಕೈಕೊಟ್ಟು ಅತ್ತೆಯನ್ನೇ ಮದುವೆಯಾದ ಅಳಿಯ!

ಬ್ಯಾಂಕ್ ಖಾತೆಗಳು ಬ್ಲಾಕ್ ಆಗಿರುವುದರಿಂದ ಸಿಎಸ್‌ಸಿ ಕೇಂದ್ರದ ಯುವಕರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಸದರ ಬಜಾರ್ ಪೊಲೀಸರು ಸದ್ಯ ಮೊಬೈಲ್ ಕಳ್ಳರ ಪತ್ತೆಗೆ ಜಾಲ ಬೀಸಿದ್ದು, ಸಾರ್ವಜನಿಕರು ಇಂತಹ ಆನ್‌ಲೈನ್ ನಗದು ವ್ಯವಹಾರಗಳ ಜೂಜಾಟಕ್ಕೆ ಬೀಳದಂತೆ ಮತ್ತು ಅಪರಿಚಿತರ ಫೋನ್ ಪೇ ನಂಬಿ ನಗದು ನೀಡದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಭೀಮೇಶ್​​ ಪೂಜಾರ್
ಭೀಮೇಶ್​​ ಪೂಜಾರ್

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು