AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಎಲೆಕ್ಟ್ರಿಕ್ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ರಾಯಚೂರಿನ ಪ್ರಸಿದ್ಧ ಮಳಿಗೆಗಳ ಮೇಲೆ ದಾಳಿ

ರಾಯಚೂರಿನ ಸದರ್ ಬಜಾರ್ ಪೊಲೀಸರು ಮತ್ತು ಖಾಸಗಿ ಕಂಪನಿಯ ವಿಜಿಲೆನ್ಸ್ ತಂಡವು ಹರಿಹರ ರಸ್ತೆ ಮತ್ತು ಗಂಜ್ ರಸ್ತೆಯಲ್ಲಿರುವ ಭಗವತಿ ಮತ್ತು ಆಶಾ ಎಲೆಕ್ಟ್ರಿಕಲ್ಸ್ ಮಳಿಗೆಗಳ ಮೇಲೆ ದಾಳಿ ನಡೆಸಿ ನಕಲಿ ವಿದ್ಯುತ್ ಸಾಮಗ್ರಿಗಳನ್ನು ವಶಪಡಿಸಿಕೊಂಡಿದೆ. ನಕಲಿ ವೈರ್, ರೆಗ್ಯುಲೇಟರ್, ಸ್ವಿಚ್‌ಗಳು ಪತ್ತೆಯಾಗಿವೆ. ಈ ಮಳಿಗೆಗಳು ಕಡಿಮೆ ಬೆಲೆಯಲ್ಲಿ ನಕಲಿ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದವು ಎಂದು ತಿಳಿದುಬಂದಿದೆ. ಈ ಬಗ್ಗೆ ಎಫ್‌ಐಆರ್ ದಾಖಲಾಗಿದೆ ಮತ್ತು ತನಿಖೆ ನಡೆಯುತ್ತಿದೆ.

ನಕಲಿ ಎಲೆಕ್ಟ್ರಿಕ್ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ರಾಯಚೂರಿನ ಪ್ರಸಿದ್ಧ ಮಳಿಗೆಗಳ ಮೇಲೆ ದಾಳಿ
ಅಧಿಕಾರಿಗಳ ದಾಳಿ
ಭೀಮೇಶ್​​ ಪೂಜಾರ್
| Updated By: ವಿವೇಕ ಬಿರಾದಾರ|

Updated on: Jul 06, 2025 | 7:18 PM

Share

ರಾಯಚೂರು, ಜುಲೈ 06: ನಕಲಿ ಎಲೆಕ್ಟ್ರಿಕ್ ವಸ್ತುಗಳನ್ನು (Fake Electric Items) ಮಾರಾಟ ಮಾಡುವ ಮಳಿಗೆಗಳ ಮೇಲೆ ರಾಯಚೂರಿನ ಸದರ ಬಜಾರ್ ಠಾಣೆ ಪೊಲೀಸರ ಸಹಕಾರದೊಂದಿಗೆ ಖಾಸಗಿ ಕಂಪನಿಯೊಂದರ ವಿಜಲನ್ಸ್ ತಂಡ ದಾಳಿ ಮಾಡಿದೆ. ರಾಯಚೂರು (Raichur) ನಗರದ ಹರಿಹರ ರಸ್ತೆಯಲ್ಲಿರುವ ಭಗವತಿ ಇಲೆಕ್ಟ್ರಿಕಲ್ಸ್, ಗಂಜ್ ರಸ್ತೆಯಲ್ಲಿರುವ ಆಶಾ ಇಲೆಕ್ಟ್ರಿಕಲ್ಸ್ ಮಳಿಗೆಗಳು ಹಾಗೂ ಗೊಡೌನ್​ಗಳ ಮೇಲೆ ದಾಳಿ ನಡೆಸಿದಾಗ ಹಲವು ನಕಲಿ ವಸ್ತುಗಳು ಪತ್ತೆಯಾಗಿವೆ.

ಭಗವತಿ ಇಲೆಕ್ಟ್ರಿಕಲ್ಸ್ ಹಾಗೂ ಆಶಾ ಇಲೆಕ್ಟ್ರಿಕಲ್ಸ್ ಮಳಿಗೆಗಳು ರಾಯಚೂರಿನಲ್ಲಿ ತುಂಬಾ ಪ್ರಸಿದ್ಧಿ ಪಡೆದಿವೆ. ಈ ಅಂಗಡಿಗಳಲ್ಲಿ ಎಲ್ಲ ಬಗೆಯ ವಿದ್ಯುತ್ ಉತ್ಪನ್ನಗಳು ಸಿಗುತ್ತವೆ. ಆದರೆ, ಈ ಅಂಗಡಿಗಳಲ್ಲಿ ನಕಲಿ ಎಲೆಕ್ಟ್ರಿಕ್ ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಮನೆಗಳಲ್ಲಿ ಬಳಸುವ ವಿದ್ಯುತ್ ವೈರ್​, ರೆಗ್ಯುಲೇಟರ್, ಸ್ವಿಚ್ ಬೋರ್ಡ್ ಸೇರಿದಂತೆ ವಿವಿಧ ನಕಲಿ ವಸ್ತುಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತಿತ್ತು.

ನಕಲಿ ವಸ್ತುಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ವಿಜಲನ್ಸ್ ತಂಡ ಸದರ ಬಜಾರ್ ಪೊಲೀಸರ ಸಹಕಾರದೊಂದಿಗೆ ರವಿವಾರ ದಾಳಿ ನಡೆಸಿತು. 1 ಲಕ್ಷ ರೂಪಾಯಿಗೆ ಮಾರಾಟವಾಗುವ ಅಸಲಿ ಉತ್ಪನ್ನಗಳು, ಈ ಮಳಿಗೆಗಳಲ್ಲಿ ಕೇವಲ 40-50 ಸಾವಿರಕ್ಕೆ ಮಾರಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಅನುಮಾನಗೊಂಡು ವಿಜಲನ್ಸ್​ ದಾಳಿ ನಡೆಸಿದಾಗ ಕಡಿಮೆ ಬೆಲೆಗೆ ಮಾರಾಟವಾಗುತ್ತಿದ್ದ ಉತ್ಪನ್ನಗಳು ನಕಲಿ ಎಂದು ತಿಳಿದುಬಂದಿದೆ.

ಇದನ್ನೂ ಓದಿ
Image
ರಾಯಚೂರು ಕೃಷಿ ವಿವಿ ಘಟಿಕೋತ್ಸವ: ರೈತನ ಮಗನಿಗೆ 6 ಚಿನ್ನದ ಪದಕ
Image
ಗೋ ರಕ್ಷಣೆಗೆ ಹೋಗಿದ್ದ ಹಿಂದೂ ಕಾರ್ಯಕರ್ತರ ಮೇಲೆ ‌ಹಲ್ಲೆ..!
Image
ರಾಯರ ಭಕ್ತರಿಗೂ ತಪ್ಪಲಿಲ್ಲ ವಂಚಕರ ಕಾಟ: ಬುಕ್ಕಿಂಗ್​ ಹೆಸರಲ್ಲಿ ವಂಚನೆ
Image
ಡೆಪಾಸಿಟ್ ಮಷಿನ್​ಗೆ​​​ ಕಂತೆ ಕಂತೆ ಖೋಟಾ ನೋಟು ಹಾಕಲು ಯತ್ನ

ಇದನ್ನೂ ಓದಿ: ಗಂಡೆಂದು ಹೆಣ್ಣು ಮಗು ಕೊಟ್ಟ ಸಿಬ್ಬಂದಿ: ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶು ಅದಲು-ಬದಲು

ಆಶಾ ಇಲೆಕ್ಟ್ರಿಕಲ್ಸ್ ಮಳಿಗೆಯಲ್ಲಿ ಖಾಸಗಿ ಕಂಪನಿಯ ರ್ಯಾಪರ್​ಗಳು, ನಕಲಿ ಉತ್ಪನ್ನಗಳು ಪತ್ತೆಯಾಗಿವೆ. ಇಲೆಕ್ಟ್ರಿಕಲ್ಸ್ ಮಳಿಗೆಯಲ್ಲೂ ನಕಲಿ ಉತ್ಪನ್ನಗಳು ಪತ್ತೆಯಾಗಿವೆ. ಈ ಮಳಿಗೆಯ ಮಾಲೀಕರು ಇಲೆಕ್ಟ್ರಿಶಿಯನ್​ಗಳಿಗೆ ಹೆಚ್ಚಿನ ಕಮಿಷನ್ ಕೊಟ್ಟು, ಗ್ರಾಹಕರಿಗೆ ನಕಲಿ ಉತ್ಪನ್ನಗಳನ್ನೇ ಖರೀದಿಸುವಂತೆ ಪ್ರಚೋದಿಸುತ್ತಿದ್ದರಂತೆ. ಈ ದಂಧೆಗೆ ಆಂಧ್ರ ಪ್ರದೇಶ, ತೆಲಂಗಾಣ ಗಡಿಯ ಜನ, ರೈತರು, ಬಡವರೇ ಟಾರ್ಗೆಟ್ ಆಗಿದ್ದರು ಎಂದು ವಿಜಲನ್ಸ್ ತಂಡದ ಅಧಿಕಾರಿ ನಾಗೇಶ್ವರ್ ರಾವ್ ಹೇಳಿದ್ದಾರೆ. ಸದರ ಬಜಾರ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ಈ ಹಿಂದೆ 2022 ರಲ್ಲಿ ರಾಯಚೂರು ಜಿಲ್ಲಾ ಪೊಲೀಸರು ನಕಲಿ ಟೀ, ಸಾಬೂನು, ಕೊಬ್ಬರಿ ಎಣ್ಣೆ, ಫೆವಿಕ್ವಿಕ್​ ತಯಾರಿಸಿ ಮಾರಾಟ ಮಾಡುತ್ತಿದ್ದ ದಂಧೆಕೋರರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ