Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರಿನ ಪಟಾಕಿ ಗೋಡೌನ್​ಗಳ ಮೇಲೆ ಪೊಲೀಸರ ದಾಳಿ; 24 ಲಕ್ಷ ಮೌಲ್ಯದ ಪಟಾಕಿ ಜಪ್ತಿ

ಪರವಾನಗಿ ಇಲ್ಲದೆ ಅಕ್ರಮವಾಗಿ ಪಟಾಕಿ ದಾಸ್ತಾನು ಮಾಡಿದ್ದ ರಾಯಚೂರಿನ ಬೆಸ್ತವಾರಪೇಟೆಯ ರಮೇಶ್ ಮನೆ ಮೇಲೆ ಸದರ್ ಬಜಾರ್ ಠಾಣಾ ಪೊಲೀಸರು ದಾಳಿ ಮಾಡಿದ್ದು, 50 ಸಾವಿರ ಮೌಲ್ಯದ 30 ಕೆಜಿ ಪಟಾಕಿ ವಶಕಪಡಿಸಿಕೊಂಡಿದ್ದಾರೆ.

ರಾಯಚೂರಿನ ಪಟಾಕಿ ಗೋಡೌನ್​ಗಳ ಮೇಲೆ ಪೊಲೀಸರ ದಾಳಿ; 24 ಲಕ್ಷ ಮೌಲ್ಯದ ಪಟಾಕಿ ಜಪ್ತಿ
ಪಟಾಕಿ ಜಪ್ತಿ ಮಾಡಿದ ಪೊಲೀಸರು
Follow us
ಭೀಮೇಶ್​​ ಪೂಜಾರ್
| Updated By: ವಿವೇಕ ಬಿರಾದಾರ

Updated on:Oct 14, 2023 | 8:59 AM

ರಾಯಚೂರು ಅ.14: ಬೆಂಗಳೂರಿನಲ್ಲಿ ಪಟಾಕಿ ದುರಂತ ಪ್ರಕರಣ ಬೆನ್ನಲ್ಲೆ ರಾಯಚೂರಿನಲ್ಲಿ ಅಲರ್ಟ್ ಆದ ಪೊಲೀಸರು ಅಕ್ರಮವಾಗಿ ಪಟಾಕಿ (Firecracker) ದಾಸ್ತಾನು ಮಾಡಿದ್ದ ಗುಂಜಳ್ಳಿ ಗ್ರಾಮದ ಹಾಗೂ ರಾಯಚೂರು (Raichur) ನಗರದ ಸದರ್ ಬಜಾರ್​​ನ ಗೋಡೌನ್​​ಗಳ (Firecracker Godown) ​​ಮೇಲೆ ದಾಳಿ ಮಾಡಿದ್ದಾರೆ. ಪರವಾನಗಿ ಇಲ್ಲದೆ ಅಕ್ರಮವಾಗಿ ಪಟಾಕಿ ದಾಸ್ತಾನು ಮಾಡಿದ್ದ ರಾಯಚೂರಿನ ಬೆಸ್ತವಾರಪೇಟೆಯ ರಮೇಶ್ ಮನೆ ಮೇಲೆ ನಗರದ ಸದರ್ ಬಜಾರ್ ಠಾಣಾ ಪೊಲೀಸರು ದಾಳಿ ಮಾಡಿದ್ದು, 50 ಸಾವಿರ ಮೌಲ್ಯದ 30 ಕೆಜಿ ಪಟಾಕಿ ವಶಕಪಡಿಸಿಕೊಂಡಿದ್ದಾರೆ.

ಇನ್ನು ಸಿಂಧನೂರು ತಾಲೂಕಿನ ಗುಂಜಳ್ಳಿ‌ ಗ್ರಾಮದ ನಾಗರಾಜ್ ಎಂಬುವರ ಮನೆ ಮೇಲೂ ಪೊಲೀಸರು ದಾಳಿ ಮಾಡಿದ್ದು, ದಾಳಿ ವೇಳೆ 24 ಲಕ್ಷ ಮೌಲ್ಯದ 1,141 ಕೆಜಿ ವಿವಿಧ ಮಾದರಿಯ ಪಟಾಕಿ ಜಪ್ತಿ ಮಾಡಿಕೊಂಡಿದ್ದಾರೆ. ತುರ್ವಿಹಾಳ ಪೊಲೀಸರು ನಾಗರಾಜನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಎರಡೂ ದಾಳಿ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳು‌ ದಾಖಲಾಗಿವೆ. ಐಪಿಸಿ ಸೆಕ್ಷನ್ 286, 336 ಹಾಗೂ 9(ಬಿ)ಸ್ಫೋಟಕ ಕಾಯ್ದೆ 1884 ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸರ್ಕಾರ ಸೂಚನೆ ಬೆನ್ನಲ್ಲೇ ಹಲವೆಡೆ ರೇಡ್; ಅಕ್ರಮವಾಗಿ ದಾಸ್ತಾನು ಮಾಡಿದ್ದ ಲಕ್ಷಾಂತರ ರೂ. ಮೌಲ್ಯದ ಪಟಾಕಿ ಜಪ್ತಿ

ರಾಜ್ಯಾದ್ಯಂತ ಇರುವ ಪಟಾಕಿ ಅಂಗಡಿ ಪರಿಶೀಲನೆಗೆ ಸರ್ಕಾರ​​ ಸೂಚನೆ

ಗಣೇಶ ಚತುರ್ಥಿ, ದೀಪಾವಳಿ ಸಾಲು ಸಾಲು ಹಬ್ಬ ಹಿನ್ನೆಲೆಯಲ್ಲಿ ಗೋದಾಮಿನಲ್ಲಿ ಪಟಾಕಿ ಸಂಗ್ರಹಿಸಲು ಮಾಲಿಕರು ಶರುಮಾಡಿಕೊಂಡಿದ್ದಾರೆ. ಆದರೆ ಪ್ರಾಥಮಿಕ ಮಾಹಿತಿ ಪ್ರಕಾರ ಯಾವುದೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದ ಹಿನ್ನೆಲೆಯಲ್ಲಿ ಪಟಾಕಿ ಗೋಡೌನ್​​ಗಳಲ್ಲಿ ಅಗ್ನಿ ಅವಘಡ ಸಂಭವಿಸುತ್ತಿವೆ. ಈ ಹಿಂದೆ ಹಾವೇರಿ ಹೊರವಲಯದ ಸಾತೇನಹಳ್ಳಿ ಬಳಿ ಕುಮಾರ್​ ಎಂಬುವವರಿಗೆ ಸೇರಿದ ಭೂಮಿಕಾ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ನಾಲ್ವರು ಮೃತಪಟ್ಟಿದ್ದರು. ಘಟನೆ ನಡೆದು ಎರಡುವರೆ ತಿಂಗಳಲ್ಲಿ ಅತ್ತಿಬೆಲೆ ಬಾಲಾಜಿ ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿ 14 ಜನ ಸಾವಿಗೀಡಾಗಿದ್ದಾರೆ. ಇದರಿಂದ ಎಚ್ಚತ್ತ ರಾಜ್ಯ ಸರ್ಕಾರ ರಾಜ್ಯಾದ್ಯಂತ ಇರುವ ಪಟಾಕಿ ಅಂಗಡಿಗಳನ್ನು ಪರಿಶೀಲಿಸುವಂತೆ ಸೂಚನೆ ನೀಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:53 am, Sat, 14 October 23

ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ