AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರಿನ ಪಟಾಕಿ ಗೋಡೌನ್​ಗಳ ಮೇಲೆ ಪೊಲೀಸರ ದಾಳಿ; 24 ಲಕ್ಷ ಮೌಲ್ಯದ ಪಟಾಕಿ ಜಪ್ತಿ

ಪರವಾನಗಿ ಇಲ್ಲದೆ ಅಕ್ರಮವಾಗಿ ಪಟಾಕಿ ದಾಸ್ತಾನು ಮಾಡಿದ್ದ ರಾಯಚೂರಿನ ಬೆಸ್ತವಾರಪೇಟೆಯ ರಮೇಶ್ ಮನೆ ಮೇಲೆ ಸದರ್ ಬಜಾರ್ ಠಾಣಾ ಪೊಲೀಸರು ದಾಳಿ ಮಾಡಿದ್ದು, 50 ಸಾವಿರ ಮೌಲ್ಯದ 30 ಕೆಜಿ ಪಟಾಕಿ ವಶಕಪಡಿಸಿಕೊಂಡಿದ್ದಾರೆ.

ರಾಯಚೂರಿನ ಪಟಾಕಿ ಗೋಡೌನ್​ಗಳ ಮೇಲೆ ಪೊಲೀಸರ ದಾಳಿ; 24 ಲಕ್ಷ ಮೌಲ್ಯದ ಪಟಾಕಿ ಜಪ್ತಿ
ಪಟಾಕಿ ಜಪ್ತಿ ಮಾಡಿದ ಪೊಲೀಸರು
ಭೀಮೇಶ್​​ ಪೂಜಾರ್
| Edited By: |

Updated on:Oct 14, 2023 | 8:59 AM

Share

ರಾಯಚೂರು ಅ.14: ಬೆಂಗಳೂರಿನಲ್ಲಿ ಪಟಾಕಿ ದುರಂತ ಪ್ರಕರಣ ಬೆನ್ನಲ್ಲೆ ರಾಯಚೂರಿನಲ್ಲಿ ಅಲರ್ಟ್ ಆದ ಪೊಲೀಸರು ಅಕ್ರಮವಾಗಿ ಪಟಾಕಿ (Firecracker) ದಾಸ್ತಾನು ಮಾಡಿದ್ದ ಗುಂಜಳ್ಳಿ ಗ್ರಾಮದ ಹಾಗೂ ರಾಯಚೂರು (Raichur) ನಗರದ ಸದರ್ ಬಜಾರ್​​ನ ಗೋಡೌನ್​​ಗಳ (Firecracker Godown) ​​ಮೇಲೆ ದಾಳಿ ಮಾಡಿದ್ದಾರೆ. ಪರವಾನಗಿ ಇಲ್ಲದೆ ಅಕ್ರಮವಾಗಿ ಪಟಾಕಿ ದಾಸ್ತಾನು ಮಾಡಿದ್ದ ರಾಯಚೂರಿನ ಬೆಸ್ತವಾರಪೇಟೆಯ ರಮೇಶ್ ಮನೆ ಮೇಲೆ ನಗರದ ಸದರ್ ಬಜಾರ್ ಠಾಣಾ ಪೊಲೀಸರು ದಾಳಿ ಮಾಡಿದ್ದು, 50 ಸಾವಿರ ಮೌಲ್ಯದ 30 ಕೆಜಿ ಪಟಾಕಿ ವಶಕಪಡಿಸಿಕೊಂಡಿದ್ದಾರೆ.

ಇನ್ನು ಸಿಂಧನೂರು ತಾಲೂಕಿನ ಗುಂಜಳ್ಳಿ‌ ಗ್ರಾಮದ ನಾಗರಾಜ್ ಎಂಬುವರ ಮನೆ ಮೇಲೂ ಪೊಲೀಸರು ದಾಳಿ ಮಾಡಿದ್ದು, ದಾಳಿ ವೇಳೆ 24 ಲಕ್ಷ ಮೌಲ್ಯದ 1,141 ಕೆಜಿ ವಿವಿಧ ಮಾದರಿಯ ಪಟಾಕಿ ಜಪ್ತಿ ಮಾಡಿಕೊಂಡಿದ್ದಾರೆ. ತುರ್ವಿಹಾಳ ಪೊಲೀಸರು ನಾಗರಾಜನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಎರಡೂ ದಾಳಿ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳು‌ ದಾಖಲಾಗಿವೆ. ಐಪಿಸಿ ಸೆಕ್ಷನ್ 286, 336 ಹಾಗೂ 9(ಬಿ)ಸ್ಫೋಟಕ ಕಾಯ್ದೆ 1884 ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸರ್ಕಾರ ಸೂಚನೆ ಬೆನ್ನಲ್ಲೇ ಹಲವೆಡೆ ರೇಡ್; ಅಕ್ರಮವಾಗಿ ದಾಸ್ತಾನು ಮಾಡಿದ್ದ ಲಕ್ಷಾಂತರ ರೂ. ಮೌಲ್ಯದ ಪಟಾಕಿ ಜಪ್ತಿ

ರಾಜ್ಯಾದ್ಯಂತ ಇರುವ ಪಟಾಕಿ ಅಂಗಡಿ ಪರಿಶೀಲನೆಗೆ ಸರ್ಕಾರ​​ ಸೂಚನೆ

ಗಣೇಶ ಚತುರ್ಥಿ, ದೀಪಾವಳಿ ಸಾಲು ಸಾಲು ಹಬ್ಬ ಹಿನ್ನೆಲೆಯಲ್ಲಿ ಗೋದಾಮಿನಲ್ಲಿ ಪಟಾಕಿ ಸಂಗ್ರಹಿಸಲು ಮಾಲಿಕರು ಶರುಮಾಡಿಕೊಂಡಿದ್ದಾರೆ. ಆದರೆ ಪ್ರಾಥಮಿಕ ಮಾಹಿತಿ ಪ್ರಕಾರ ಯಾವುದೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದ ಹಿನ್ನೆಲೆಯಲ್ಲಿ ಪಟಾಕಿ ಗೋಡೌನ್​​ಗಳಲ್ಲಿ ಅಗ್ನಿ ಅವಘಡ ಸಂಭವಿಸುತ್ತಿವೆ. ಈ ಹಿಂದೆ ಹಾವೇರಿ ಹೊರವಲಯದ ಸಾತೇನಹಳ್ಳಿ ಬಳಿ ಕುಮಾರ್​ ಎಂಬುವವರಿಗೆ ಸೇರಿದ ಭೂಮಿಕಾ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ನಾಲ್ವರು ಮೃತಪಟ್ಟಿದ್ದರು. ಘಟನೆ ನಡೆದು ಎರಡುವರೆ ತಿಂಗಳಲ್ಲಿ ಅತ್ತಿಬೆಲೆ ಬಾಲಾಜಿ ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿ 14 ಜನ ಸಾವಿಗೀಡಾಗಿದ್ದಾರೆ. ಇದರಿಂದ ಎಚ್ಚತ್ತ ರಾಜ್ಯ ಸರ್ಕಾರ ರಾಜ್ಯಾದ್ಯಂತ ಇರುವ ಪಟಾಕಿ ಅಂಗಡಿಗಳನ್ನು ಪರಿಶೀಲಿಸುವಂತೆ ಸೂಚನೆ ನೀಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:53 am, Sat, 14 October 23

Follow Us
Bhemesh Poojar
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ