AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ನೀರಾವರಿ ಅಧಿಕಾರಿಗಳಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್

ಕಾಲುವೆ ಪರಿಶೀಲನೆ ವೇಳೆ ಅಧಿಕಾರಿಗಳ ನಿರ್ಲಕ್ಷ್ಯ ಬೆಳಕಿಗೆ ಬಂದಿದೆ. ಈ ವಿಚಾರವಾಗಿ ಅಧಿಕಾರಿಗಳನ್ನು ತರಾಟೆಗೆ ತೆಗದುಕೊಂಡ ಶಾಸಕರು, ---- ಪದಗಳಿಂದ ಪುರುಷ ಅಧಿಕಾರಿಗೆ ಬೈದಿದ್ದಾರೆ. ಇಷ್ಟೇ ಅಲ್ಲದೆ, ರೈತರಿಂದ ಚಪ್ಪಲಿಯಿಂದ ಹೊಡೆಸುತ್ತೇನೆ ಎಂದು ಮಹಿಳಾ ಅಧಿಕಾರಿಗೆ ಎಚ್ಚರಿಕೆ ನೀಡಿದ್ದಾರೆ.

ಭೀಮೇಶ್​​ ಪೂಜಾರ್
| Edited By: |

Updated on:Oct 19, 2023 | 9:42 PM

Share

ರಾಯಚೂರು, ಅಕ್ಟೋಬರ್ 19: ರಾಯಚೂರು ಗ್ರಾಮೀಣ ಕಾಂಗ್ರೆಸ್ ಶಾಸಕ (Congress MLA) ಬಸನಗೌಡ ದದ್ದಲ್ (Basanagouda Daddal) ಅವರು ನೀರಾವರಿ ಅಧಿಕಾರಿಗಳಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ವಿಡಿಯೋ ವೈರಲ್ ಆಗಿದೆ. ರೈತರ ಕಷ್ಟಕ್ಕೆ ನೀರಾವರಿ‌ ಅಧಿಕಾರಿಗಳು ಸ್ಪಂದಿಸದ ವಿಚಾರವಾಗಿ ಶಾಸಕರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದೇ ವೇಳೆ ಸಿಟ್ಟಾದ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಕಾಲುವೆಗೆ ನೀರು ಹರಿಸೋ ಬಗ್ಗೆ ಅಧಿಕಾರಿಗಳ ಕಳ್ಳಾಟದ ವಿರುದ್ಧ ಅವರು ಕೋಪಗೊಂಡಿದ್ದರು. ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದ ಐಬಿಯಲ್ಲಿ ಘಟನೆ ನಡೆದಿದೆ.

ಕಾಲುವೆ ಪರಿಶೀಲನೆ ವೇಳೆ ಅಧಿಕಾರಿಗಳ ನಿರ್ಲಕ್ಷ್ಯ ಬೆಳಕಿಗೆ ಬಂದಿದೆ. ಈ ವಿಚಾರವಾಗಿ ಅಧಿಕಾರಿಗಳನ್ನು ತರಾಟೆಗೆ ತೆಗದುಕೊಂಡ ಶಾಸಕರು, —- ಪದಗಳಿಂದ ಪುರುಷ ಅಧಿಕಾರಿಗೆ ಬೈದಿದ್ದಾರೆ. ಇಷ್ಟೇ ಅಲ್ಲದೆ, ರೈತರಿಂದ ಚಪ್ಪಲಿಯಿಂದ ಹೊಡೆಸುತ್ತೇನೆ ಎಂದು ಮಹಿಳಾ ಅಧಿಕಾರಿಗೆ ಎಚ್ಚರಿಕೆ ನೀಡಿದ್ದಾರೆ. ತುಂಗಭದ್ರಾ ಎಡದಂಡೆ ಕಾಲುವೆ ಇಇ ಸತ್ಯನಾರಾಯಣ ಶೆಟ್ಟಿ ಹಾಗೂ ಸಿರವಾರ ವಿಭಾಗದ ಎಇಇ ವಿಜಯಲಕ್ಷ್ಮಿ ಪಾಟೀಲ್ ಮೇಲೆ ಸಚಿವರು ಗರಂ ಆಗಿದ್ದಾರೆ.

7 ಕಡೆ ಡಿಸ್ಟ್ರಿಬೂಟರ್ ಗೇಟ್ ಮುರಿದು ಹಾಕಿರೊ ಹಿನ್ನೆಲೆ ಕೆಳ ಭಾಗದ ರೈತರಿಗೆ ನೀರು ತಲುಪಿರಲಿಲ್ಲ. ಗೇಟ್ ಮುರಿದು ಇಷ್ಟೂ ದಿನವಾದ್ರೂ ದುರಸ್ಥಿ ಮಾಡಿಲ್ಲದ ಬಗ್ಗೆ ಶಾಸಕರು ಅಧಿಕಾರಿಗಳ ವಿರುದ್ಧ ಹರಿಹಾಯ್ದರು. ದುರಸ್ಥಿ ಕಾರ್ಯ ಮಾಡದ ಹಿನ್ನೆಲೆ ಕೆಳ ಭಾಗದ ಮಾನ್ವಿ, ಸಿರವಾರ, ರಾಯಚೂರು ತಾಲ್ಲೂಕಿನ ಭಾಗಕ್ಕೆ ನೀರು ತಲುಪಿರಲಿಲ್ಲ.

ಇದನ್ನೂ ಓದಿ: ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್​ಐಆರ್ ದಾಖಲು, ಏನಿದು ಪ್ರಕರಣ?

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಅರಣ್ಯಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿರುವ ಬೆನ್ನಲ್ಲೇ ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್ ವಿಡಿಯೋ ವೈರಲ್ ಆಗಿದೆ. ಹರೀಶ್ ಪೂಂಜಾ ಅವರ ವಿರುದ್ಧ ಅರಣ್ಯಾಧಿಕಾರಿಗಳು ನೀಡಿದ ದೂರಿನ ಅನ್ವಯ ಎಫ್​ಐಆರ್​ ದಾಖಲಿಸಲಾಗಿದೆ. ಅರಣ್ಯಾಧಿಕಾರಿಗಳು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೂ ದೂರು ನೀಡಿದ್ದಾರೆ. ಇದರ ವಿರುದ್ಧ ಬಿಜೆಪಿ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಬಸನಗೌಡ ದದ್ದಲ್ ಅಧಿಕಾರಿಗಳ ವಿರುದ್ಧ ಅವಾಚ್ಯ ಶಬ್ದಗಳಲ್ಲಿ ನಿಂದಿಸಿದ್ದು, ಇದು ಕೂಡ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:09 pm, Thu, 19 October 23

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ