AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ನೀರಾವರಿ ಅಧಿಕಾರಿಗಳಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್

ಕಾಲುವೆ ಪರಿಶೀಲನೆ ವೇಳೆ ಅಧಿಕಾರಿಗಳ ನಿರ್ಲಕ್ಷ್ಯ ಬೆಳಕಿಗೆ ಬಂದಿದೆ. ಈ ವಿಚಾರವಾಗಿ ಅಧಿಕಾರಿಗಳನ್ನು ತರಾಟೆಗೆ ತೆಗದುಕೊಂಡ ಶಾಸಕರು, ---- ಪದಗಳಿಂದ ಪುರುಷ ಅಧಿಕಾರಿಗೆ ಬೈದಿದ್ದಾರೆ. ಇಷ್ಟೇ ಅಲ್ಲದೆ, ರೈತರಿಂದ ಚಪ್ಪಲಿಯಿಂದ ಹೊಡೆಸುತ್ತೇನೆ ಎಂದು ಮಹಿಳಾ ಅಧಿಕಾರಿಗೆ ಎಚ್ಚರಿಕೆ ನೀಡಿದ್ದಾರೆ.

ಭೀಮೇಶ್​​ ಪೂಜಾರ್
| Edited By: |

Updated on:Oct 19, 2023 | 9:42 PM

Share

ರಾಯಚೂರು, ಅಕ್ಟೋಬರ್ 19: ರಾಯಚೂರು ಗ್ರಾಮೀಣ ಕಾಂಗ್ರೆಸ್ ಶಾಸಕ (Congress MLA) ಬಸನಗೌಡ ದದ್ದಲ್ (Basanagouda Daddal) ಅವರು ನೀರಾವರಿ ಅಧಿಕಾರಿಗಳಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ವಿಡಿಯೋ ವೈರಲ್ ಆಗಿದೆ. ರೈತರ ಕಷ್ಟಕ್ಕೆ ನೀರಾವರಿ‌ ಅಧಿಕಾರಿಗಳು ಸ್ಪಂದಿಸದ ವಿಚಾರವಾಗಿ ಶಾಸಕರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದೇ ವೇಳೆ ಸಿಟ್ಟಾದ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಕಾಲುವೆಗೆ ನೀರು ಹರಿಸೋ ಬಗ್ಗೆ ಅಧಿಕಾರಿಗಳ ಕಳ್ಳಾಟದ ವಿರುದ್ಧ ಅವರು ಕೋಪಗೊಂಡಿದ್ದರು. ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದ ಐಬಿಯಲ್ಲಿ ಘಟನೆ ನಡೆದಿದೆ.

ಕಾಲುವೆ ಪರಿಶೀಲನೆ ವೇಳೆ ಅಧಿಕಾರಿಗಳ ನಿರ್ಲಕ್ಷ್ಯ ಬೆಳಕಿಗೆ ಬಂದಿದೆ. ಈ ವಿಚಾರವಾಗಿ ಅಧಿಕಾರಿಗಳನ್ನು ತರಾಟೆಗೆ ತೆಗದುಕೊಂಡ ಶಾಸಕರು, —- ಪದಗಳಿಂದ ಪುರುಷ ಅಧಿಕಾರಿಗೆ ಬೈದಿದ್ದಾರೆ. ಇಷ್ಟೇ ಅಲ್ಲದೆ, ರೈತರಿಂದ ಚಪ್ಪಲಿಯಿಂದ ಹೊಡೆಸುತ್ತೇನೆ ಎಂದು ಮಹಿಳಾ ಅಧಿಕಾರಿಗೆ ಎಚ್ಚರಿಕೆ ನೀಡಿದ್ದಾರೆ. ತುಂಗಭದ್ರಾ ಎಡದಂಡೆ ಕಾಲುವೆ ಇಇ ಸತ್ಯನಾರಾಯಣ ಶೆಟ್ಟಿ ಹಾಗೂ ಸಿರವಾರ ವಿಭಾಗದ ಎಇಇ ವಿಜಯಲಕ್ಷ್ಮಿ ಪಾಟೀಲ್ ಮೇಲೆ ಸಚಿವರು ಗರಂ ಆಗಿದ್ದಾರೆ.

7 ಕಡೆ ಡಿಸ್ಟ್ರಿಬೂಟರ್ ಗೇಟ್ ಮುರಿದು ಹಾಕಿರೊ ಹಿನ್ನೆಲೆ ಕೆಳ ಭಾಗದ ರೈತರಿಗೆ ನೀರು ತಲುಪಿರಲಿಲ್ಲ. ಗೇಟ್ ಮುರಿದು ಇಷ್ಟೂ ದಿನವಾದ್ರೂ ದುರಸ್ಥಿ ಮಾಡಿಲ್ಲದ ಬಗ್ಗೆ ಶಾಸಕರು ಅಧಿಕಾರಿಗಳ ವಿರುದ್ಧ ಹರಿಹಾಯ್ದರು. ದುರಸ್ಥಿ ಕಾರ್ಯ ಮಾಡದ ಹಿನ್ನೆಲೆ ಕೆಳ ಭಾಗದ ಮಾನ್ವಿ, ಸಿರವಾರ, ರಾಯಚೂರು ತಾಲ್ಲೂಕಿನ ಭಾಗಕ್ಕೆ ನೀರು ತಲುಪಿರಲಿಲ್ಲ.

ಇದನ್ನೂ ಓದಿ: ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್​ಐಆರ್ ದಾಖಲು, ಏನಿದು ಪ್ರಕರಣ?

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಅರಣ್ಯಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿರುವ ಬೆನ್ನಲ್ಲೇ ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್ ವಿಡಿಯೋ ವೈರಲ್ ಆಗಿದೆ. ಹರೀಶ್ ಪೂಂಜಾ ಅವರ ವಿರುದ್ಧ ಅರಣ್ಯಾಧಿಕಾರಿಗಳು ನೀಡಿದ ದೂರಿನ ಅನ್ವಯ ಎಫ್​ಐಆರ್​ ದಾಖಲಿಸಲಾಗಿದೆ. ಅರಣ್ಯಾಧಿಕಾರಿಗಳು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೂ ದೂರು ನೀಡಿದ್ದಾರೆ. ಇದರ ವಿರುದ್ಧ ಬಿಜೆಪಿ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಬಸನಗೌಡ ದದ್ದಲ್ ಅಧಿಕಾರಿಗಳ ವಿರುದ್ಧ ಅವಾಚ್ಯ ಶಬ್ದಗಳಲ್ಲಿ ನಿಂದಿಸಿದ್ದು, ಇದು ಕೂಡ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:09 pm, Thu, 19 October 23

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ