AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರಯಾನ ವಿಜ್ಞಾನಿ ಜೊತೆ ರಾಯಚೂರು ಶಾಲಾ ಮಕ್ಕಳ ಸಂವಾದ, ಚಂದ್ರನತ್ತ ಹೋಗಲು ಖರ್ಚಾಗುವ ಬಗ್ಗೆ ಆ ವಿಜ್ಞಾನಿ ಹೀಗೆ ಹೇಳಿದರು

ವಿಜ್ಞಾನ ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ. ತಂತ್ರಜ್ಞಾನ, ಅನ್ವೇಷಣೆ ಅಂದ್ರೆ ಈಗಿನ ಮಕ್ಕಳು ಒಂದು ಹೆಜ್ಜೆ ಮುಂದೆ ಇಡ್ತಾರೆ. ಆದರೆ ಹಿಂದುಳಿದ ರಾಯಚೂರು ಜಿಲ್ಲೆಯ ಮಕ್ಕಳಿಗಿಂದು ಸುವರ್ಣ ಘಳಿಗೆ ಬಂದೊದಗಿತ್ತು. ಚಂದ್ರಯಾನ-3 ಸಕ್ಸಸ್​ನ ಟೀಂನಲ್ಲಿ ಓರ್ವ ವಿಜ್ಞಾನಿ ಜೊತೆ ಆ ಮಕ್ಕಳು ಸಂವಾದ ನಡೆಸಿ ಏಲಿಯನ್ಸ್ ಸೇರಿ ವಿವಿಧ ಕುತೂಹಲಗಳ ಬಗ್ಗೆ ಮಾಹಿತಿ ಪಡೆದ್ರು.

ಚಂದ್ರಯಾನ ವಿಜ್ಞಾನಿ ಜೊತೆ ರಾಯಚೂರು ಶಾಲಾ ಮಕ್ಕಳ ಸಂವಾದ, ಚಂದ್ರನತ್ತ ಹೋಗಲು ಖರ್ಚಾಗುವ ಬಗ್ಗೆ ಆ ವಿಜ್ಞಾನಿ ಹೀಗೆ ಹೇಳಿದರು
ವಿಜ್ಞಾನಿ ಡಾ.ಬಿ.ಎಂ.ದ್ವಾರಕೀಶ್
ಭೀಮೇಶ್​​ ಪೂಜಾರ್
| Edited By: |

Updated on: Dec 16, 2023 | 1:23 PM

Share

ರಾಯಚೂರು, ಡಿ.16: ಬಿಸಿಲುನಾಡು ರಾಯಚೂರು (Raichur) ಜಿಲ್ಲೆ ಶಿಕ್ಷಣದಲ್ಲಿ ಹಿಂದುಳಿದ ಪ್ರದೇಶ ಅನ್ನೋ ಹಣೆ ಪಟ್ಟಿ ಕಟ್ಟಿಕೊಂಡಿದೆ. ಈ ಭಾಗದ ವಿದ್ಯಾರ್ಥಿಗಳಿಗೆ ಕೆಲ ಕುತೂಹಲಕಾರಿ ಅಂಶಗಳು, ಸಂಶೋಧನೆ, ಅನ್ವೇಷಣೆ, ವಿಜ್ಞಾನದ ಬಗ್ಗೆ ಪ್ರಾಕ್ಟಿಕಲ್ ಆಗಿ ತಿಳಿದುಕೊಳ್ಳೊ ಅವಕಾಶಗಳು ಕಡಿಮೆ. ಆದರೆ ಜಿಲ್ಲೆಯ ವಿದ್ಯಾರ್ಥಿಗಳಿಗೆ ಒಂದೊಳ್ಳೆ ಘಳಿಗೆ ಒದಗಿಬಂದಿತ್ತು. ಚಂದ್ರಯಾನ-3 (Chandrayaan -3) ಮಿಷನ್ ಸಕ್ಸಸ್ ಆದ ಟೀಂನಲ್ಲಿ ಕಾರ್ಯನಿರ್ವಹಿಸಿರೊ ವಿಜ್ಞಾನಿ ಡಾ.ಬಿ.ಎಂ.ದ್ವಾರಕೀಶ್ (Dr BM Dwarakish) ಅವರು ರಾಯಚೂರು ನಗರದ ಜಿಲ್ಲಾ ಪಂಚಾಯತ್ ಭವನದಲ್ಲಿ ಜಿಲ್ಲೆಯ ನೂರಾರು ವಿದ್ಯಾರ್ಥಿಗಳ (Student) ಜೊತೆ ಸಂವಾದ ನಡೆಸಿದರು.

ಅತೀ ಅಪರೂಪದ ಕ್ಷಣಗಳು, ಮಾಹಿತಿಗಾಗಿ ಕಾದು ಕುಳಿತಿದ್ದ ಮಕ್ಕಳು ತಮ್ಮ ವಿವಿಧ ಪ್ರಶ್ನೆಗಳನ್ನ ವಿಜ್ಞಾನಿ ದ್ವಾರಕೀಶ್​ಗೆ ಕೇಳಿ ಉತ್ತರ ಪಡೆದರು. ಚಂದ್ರಯಾನ-3 ಸಕ್ಸಸ್ ಆದ ಬಗ್ಗೆ, ಚಂದ್ರಯಾನ-3 ಉಡಾವಣೆಯಿಂದ ಆಗುತ್ತಿರುವ ಲಾಭಗಳ ಬಗ್ಗೆ ಚರ್ಚೆ ನಡೆಸಲಾಯ್ತು. ಚಂದ್ರಯಾನವನ್ನ ದಕ್ಷಿಣ ಪಥದಲ್ಲೇ ಯಾಕೆ ಲ್ಯಾಂಡ್ ಮಾಡಲಾಯ್ತು ಅನ್ನೋದರ ಬಗ್ಗೆ ವಿದ್ಯಾರ್ಥಿಗಳು ಎಳೆಎಳೆಯಾಗಿ ಮಾಹಿತಿ ಪಡೆದರು. ಈ ವೇಳೆ ಚಂದ್ರನತ್ತ ಸಾಮಾನ್ಯ ಜನ ಹೋಗಿ ಬರೋಕೆ ಎಷ್ಟು ಖರ್ಚಾಗತ್ತೆ ಅಂತ ಪ್ರಶ್ನಿಸಲಾಯ್ತು. ಅದಕ್ಕೆ ನಗುತ್ತಲೇ ಉತ್ತರಿಸಿದ ವಿಜ್ಞಾನಿ ಡಾ.ದ್ವಾರಕೀಶ್ ಆ ಬಗ್ಗೆ ಸಂಶೋಧನೆ ನಡೆಸ್ತಿರೊ ಸಂಸ್ಥೆಗಳ ಸಂಖ್ಯೆ ಹೆಚ್ಚಾದಾಗ ಖರ್ಚು ವೆಚ್ಚ ಕಡಿಮೆ ಆಗತ್ತೆ. ಆದರೆ ಸದ್ಯ ಅಲ್ಲಿಗೆ ಹೋಗಲು ರಿಚರ್ಡ್ ಅನ್ನೊ ಸಂಸ್ಥೆ 32 ಕೋಟಿ ನಿಗದಿ ಪಡಿಸಿದೆ ಅಂತ ತಿಳಿಸಿದ್ರು.

ಇದರ ಜೊತೆ ಕೆಲ ವಿದ್ಯಾರ್ಥಿಗಳು ಕುತೂಹಲದಿಂದ ಏಲಿಯನ್ಸ್​ಗಳ ಬಗ್ಗೆ ಪ್ರಶ್ನೆ ಮಾಡಿದರು. ಆಗ ಉತ್ತರಿಸಿದ ಡಾ.ದ್ವಾರಕೀಶ್, ಏನಿಯನ್ಸ್ ಇರಬಹುದು ಅಂತ ವಿಜ್ಞಾನ ಹೇಳತ್ತೆ. ಸಂಖ್ಯಾಶಾಸ್ತ್ರಜ್ಞರು ಹೇಳೋ ಪ್ರಕಾರ ಸೂರ್ಯನಂತ ನಕ್ಷತ್ರ, ಭೂಮಿಯಂತ ಗ್ರಹ ಲೆಕ್ಕ ಹಾಕಿದ್ರೆ ಕನಿಷ್ಠ 50 ಸಾವಿರ ಕಡೆ ಮನುಷ್ಯನಂತೆ ಯಾವ ರೂಪದಲ್ಲಾದರೂ ಜೀವಿಗಳಿರತ್ತೆ ಅಂತಾರೆ. ಆ ಜೀವಿಗಳು ಇನ್ನೂ ಶಿಲಾಯುಗದಲ್ಲಿರಬಹುದು, ಅಥವಾ ಸಂದೇಶ ಮುಟ್ಟಿರಬಹುದು ಅಂತ ಹೇಳಿದ್ರು.

ಇದನ್ನೂ ಓದಿ: ಮೈಸೂರಿನ ಉದ್ಯಮಿ ಚಂದ್ರಯಾನ 3 ಯೋಜನೆಗೆ ಬಿಡಿಭಾಗ ಪೂರೈಸಿ ಕೋಟ್ಯಾಧಿಪತಿಯಾಗಿದ್ದಾರೆ! ಇದು ಮೇಕ್ ಇನ್ ಇಂಡಿಯಾ ಫಲ

ಇತ್ತ ಮಕ್ಕಳ ಜೊತೆಗಿನ ಸಂವಾದದ ಬಗ್ಗೆ ವಿಜ್ಞಾನಿ ಡಾ.ದ್ವಾರಕೀಶ್​​ ಸಂತಸ ವ್ಯಕ್ತಪಡಿಸಿದ್ರು. ಆದಿತ್ಯL1 ಹೀಗಾಗಲೇ ನಡೆಯುತ್ತಿದೆ. ಇದು ಬಹಳ ಮಹತ್ವಪೂರ್ಣವಾಗಿದ್ದು ಅಂತರರಾಷ್ಟ್ರೀಯ ವೈಜ್ಞಾನಿಕ ಸಮುದಾಯದ ಎದುರು ನೋಡ್ತಾ ಇದೆ. ಸೂರ್ಯ ಹೆಚ್ಚು ನಮ್ಮ ಹತ್ತಿರ ಇದ್ರೂ ಅರ್ಥವಾಗದ ಕಾಯವಾಗಿದೆ. ಜಗತ್ತಿನಲ್ಲಿ ಅಲ್ಟ್ರಾ ಲೈಟ್ ನಲ್ಲಿ ಸೂರ್ಯನನ್ನ ನೋಡಲು ಸಾಧ್ಯವಾಗಿದೆ. ಆದಿತ್ಯL1 ಬಳಿಕ ಗಗನಯಾನ ಯೋಜನೆ ನಮ್ಮ ಮುಂದಿದೆ. ಮುಂದಿನ ದಿನಗಳು ಬಹಳಷ್ಟು ಕುತೂಹಲಕಾರಿ ದಿನಗಳು ಆಗಲಿವೆ ಎಂದು ಹೇಳಿದರು.

ಇದರ ಜೊತೆ ವಿಜ್ಞಾನಿ ದ್ವಾರಕೀಶ್ ವಿಜ್ಞಾನ ಮತ್ತು ಆಧ್ಯಾತ್ಮದ ಬಗ್ಗೆಯೂ ಅದ್ಭುತವಾಗಿ ವಿವರಣೆ ನೀಡಿದ್ರು. ನಿಸರ್ಗದ ವಿದ್ಯಮಾನಗಳ ಬಗ್ಗೆ ಯೋಚನೆ ಮಾಡೋದು ವಿಜ್ಞಾನ. ಆದರೆ ದೇವರು ಆಧ್ಯಾತ್ಮ ಅನ್ನೋದು ವೈಯಕ್ತಿಕ ನಂಬಿಕೆ. ವಿಜ್ಞಾನ ಮತ್ತು ಆಧ್ಯಾತ್ಮ ಜೊತೆಯಲ್ಲೇ ಇರುತ್ವೆ ಅಂತ ತಿಳಿಸಿದ್ರು. ಈ ಮೂಲಕ ಮಕ್ಕಳು ವಿಶೇಷ ಜ್ಞಾನದ ಜೊತೆ ಕುತೂಹಲಕಾರಿಗಳ ವಿಷಯಗಳನ್ನ ಪಡೆದು ಸಖತ್ ಖುಷಿ ಪಟ್ಟರು.

ರಾಯಚೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ರಿಷಭ್ ಪಂತ್ ಮತ್ತು ಸಂಜೀವ್ ಗೋಯೆಂಕಾ ನಡುವಣ ವಿಡಿಯೋ ವೈರಲ್
ರಿಷಭ್ ಪಂತ್ ಮತ್ತು ಸಂಜೀವ್ ಗೋಯೆಂಕಾ ನಡುವಣ ವಿಡಿಯೋ ವೈರಲ್
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ