AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರಿನಲ್ಲಿ ಮತ್ತೋರ್ವ ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ರಾಯಚೂರು ಜಿಲ್ಲೆಯಲ್ಲಿ ಫೆ. 05ರಂದು 2ನೇ ತರಗತಿ ಬಾಲಕಿ ಮೇಲೆ ನಡೆದ ಅತ್ಯಾಚಾರ ಮಾಸುವ ಮುನ್ನವೇ ಇದೀಗ ಮತ್ತೊಂದು ಹೇಯ ಕೃತ್ಯ ನಡೆದಿದೆ. ಆರನೇ ತರಗತಿಯ ಬಾಲಕಿಯ ಮೇಲೆ 43 ವರ್ಷದ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಸ್ಥಳೀಯರ ಸಹಾಯದಿಂದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ರಾಯಚೂರಿನಲ್ಲಿ ಮತ್ತೋರ್ವ ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ
ರಾಯಚೂರಿನಲ್ಲಿ ಮತ್ತೋರ್ವ ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ
ಭೀಮೇಶ್​​ ಪೂಜಾರ್
| Edited By: |

Updated on:Feb 10, 2025 | 10:41 PM

Share

ರಾಯಚೂರು, ಫೆಬ್ರವರಿ 10: ಜಿಲ್ಲೆಯಲ್ಲಿ ಮತ್ತೊಬ್ಬ ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವಂತಹ (sexual assault) ಘಟನೆ ನಡೆದಿದೆ. ಮಾನಸಿಕ ಅಸ್ವಸ್ಥೆಯಾಗಿರುವ ಆರನೇ ತರಗತಿ ವಿದ್ಯಾರ್ಥಿನಿ ಮೇಲೆ 43 ವರ್ಷದ ಚಂದ್ರಶೇಖರ್​ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಜಿಲ್ಲೆಯ ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ. ಸದ್ಯ ಆರೋಪಿ‌ ಚಂದ್ರಶೇಖರ್​ನನ್ನು ಬಂಧಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಹಟ್ಟಿ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ಸಂತ್ರಸ್ತ ಬಾಲಕಿ ಆರನೇ ತರಗತಿ ವ್ಯಾಸಂಗ ಮಾಡುತ್ತಿದ್ದಾಳೆ. ಶಾಲೆಯಲ್ಲಿ‌ ಮಧ್ಯಾಹ್ನ ಊಟಕ್ಕೆ ಬಿಟ್ಟಾಗ ಚಾಕೊಲೇಟ್ ಕೊಡಿಸಿ ಬಾಲಕಿಯನ್ನ ಚಂದ್ರಶೇಖರ್ ಕರೆದೊಯ್ದಿದ್ದಾನೆ. ತನ್ನ ಮನೆಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಇದನ್ನೂ ಓದಿ: ರಾಯಚೂರು: ಅಪರಿಚಿತನೊಂದಿಗೆ ಮಗುವನ್ನು ಕಳುಹಿಸಿ ಶಾಲಾ ಸಿಬ್ಬಂದಿ, 2ನೇ ತರಗತಿ ಬಾಲಕಿ ಮೇಲೆ ಅತ್ಯಾಚಾರ

ಸ್ಥಳೀಯರ ಮಾಹಿತಿ ಮೆರೆಗೆ ಹಟ್ಟಿ ಪೊಲೀಸ್ ಇನ್ಸ್ ಪೆಕ್ಟರ್ ಹೊಸಕೇರಪ್ಪರಿಂದ ಕಾರ್ಯಾಚರಣೆ ಮಾಡಿ, ಚಂದ್ರಶೇಖರ್ ಮನೆಗೆ ಬಂದ ಪೊಲೀಸರು​ ಬಾಗಿಲು ತಟ್ಟಿದರೂ ತೆಗೆದಿಲ್ಲ. ಬಳಿಕ ಬಾಗಿಲು ಮುರಿದು ಒಳನುಗ್ಗಿದ ಪೊಲೀಸರು ಬಾಲಕಿ ರಕ್ಷಿಸಿದ್ದಾರೆ.

ಇನ್ನು ಇದೇ ಫೆಬ್ರವರಿ 5 ರಂದು ಎರಡನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದ ಕೃತ್ಯ ಜಿಲ್ಲೆಯ ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಆರೋಪಿ ಶಿವನಗೌಡ ಸಂತ್ರಸ್ತೆ ಬಾಲಕಿಯನ್ನು ಶಾಲೆಯಿಂದ ಮನೆಗೆ ಕರೆದುಕೊಂಡಿ ಹೋಗುವುದಾಗಿ ನೆಪಮಾಡಿ ಕರೆದುಕೊಂಡು ಹೋಗಿದ್ದ. ನಂತರ ಆಕೆಯ ಮೇಲೆ ಅತ್ಯಾಚಾರವೆಸಗಿದ್ದ.

ಇದನ್ನೂ ಓದಿ: ಥಿನ್ನರ್ ಸೇವಿಸಿ ಬಾಲಕ ಸಾವು: ಜಾತ್ರೆ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಸೂತಕದ ಛಾಯೆ

ಪ್ರಕರಣದಲ್ಲಿ ಅತ್ಯಾಚಾರ ಆರೋಪಿ ಶಿವನಗೌಡ ಹಾಗೂ ಖಾಸಗಿ ಶಾಲೆಯ ವ್ಯವಸ್ಥಾಪಕ ರಾಜು ತಾಳಿಕೋಟೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದರು. ಸಂತ್ರಸ್ತೆ ಬಾಲಕಿಯನ್ನು ಅಪರಿಚಿತರೊಂದಿಗೆ ಕಳುಹಿಸಿದಕ್ಕೆ ಶಾಲಾ ಸಿಬ್ಬಂದಿ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:40 pm, Mon, 10 February 25

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​